AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CV Shivashankar: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಸಿ.ವಿ. ಶಿವಶಂಕರ್​ ಹೃದಯಾಘಾತದಿಂದ ನಿಧನ

C.V. Shivashankar Death: ಚಿತ್ರ ಸಾಹಿತಿಯಾಗಿಯೂ ಸಿ.ವಿ. ಶಿವಶಂಕರ್​ ಗುರುತಿಸಿಕೊಂಡಿದ್ದರು. ‘ಸಿರಿವಂತನಾದರೂ ಕನ್ನಡ ನಾಡಲ್ಲಿ ಮೆರೆವೆ..’ ಹಾಡನ್ನು ಬರೆಯುವ ಮೂಲಕ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದರು.

CV Shivashankar: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಸಿ.ವಿ. ಶಿವಶಂಕರ್​ ಹೃದಯಾಘಾತದಿಂದ ನಿಧನ
ಸಿ.ವಿ. ಶಿವಶಂಕರ್​
ಮದನ್​ ಕುಮಾರ್​
| Edited By: |

Updated on:Jun 27, 2023 | 4:28 PM

Share

ಚಂದನವನದಲ್ಲಿ (Sandalwood) ಹಲವು ವರ್ಷಗಳ ಅನುಭವ ಹೊಂದಿದ್ದ ನಟ, ನಿರ್ದೇಶಕ ಸಿ.ವಿ. ಶಿವಶಂಕರ್​ ಅವರು ನಿಧನರಾಗಿದ್ದಾರೆ. ಇಂದು (ಜೂನ್​ 27) ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತ (Heart Attack) ಆಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅವರು ಬದುಕು ಉಳಿಯಲಿಲ್ಲ ಎಂಬುದು ನೋವಿನ ಸಂಗತಿ. ಸಿ.ವಿ. ಶಿವಶಂಕರ್​ ಅವರಿಗೆ 90 ವರ್ಷ ವಯಸ್ಸಾಗಿತ್ತು. ‘ಯಾವುದೇ ಗಂಭೀರವಾದ ಆರೋಗ್ಯ ಸಮಸ್ಯೆ ಅವರಿಗೆ ಇರಲಿಲ್ಲ. ಮಧ್ಯಾಹ್ನ ಊಟ ಮುಗಿಸಿದರು. ಪೂಜೆ ಮಾಡಿದ ಬಳಿಕ ಹಾರ್ಟ್​ ಅಟ್ಯಾಕ್​ ಆಯಿತು’ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಸಿ.ವಿ. ಶಿವಶಂಕರ್​ (C V Shivashankar) ಅವರ ನಿಧನಕ್ಕೆ ಚಿತ್ರರಂಗದವರು ಸಂತಾಪ ಸೂಚಿಸುತ್ತಿದ್ದಾರೆ. ಅಂತ್ಯಕ್ರಿಯೆ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಆರಂಭದಲ್ಲಿ ಸಿ.ವಿ. ಶಿವಶಂಕರ್​ ಅವರು ರಂಗಭೂಮಿಯಲ್ಲಿ ತೊಡಗಿಕೊಂಡಿದ್ದರು. ಬಾಲನಟನಾಗಿಯೇ ರಂಗಭೂಮಿ ಪ್ರವೇಶಿಸಿದ್ದ ಅವರು ಅನೇಕ ನಾಟಕಗಳಲ್ಲಿ ಅಭಿನಯಿಸಿದ್ದರು. ನಂತರ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ‘ಸ್ಕೂಲ್ ಮಾಸ್ಟರ್​’, ‘ಕೃಷ್ಣ ಗಾರುಡಿ’, ‘ರತ್ಮಮಂಜರಿ’, ‘ರತ್ನಗಿರಿ ರಹಸ್ಯ’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಹಲವು ನಿರ್ದೇಶಕರ ಜೊತೆ ಸಹಾಯಕರಾಗಿ ಅನುಭವ ಪಡೆದ ಬಳಿಕ ‘ಮನೆ ಕಟ್ಟಿ ನೋಡು’ ಸಿನಿಮಾವನ್ನು ಸ್ವತಂತ್ರವಾಗಿ ನಿರ್ದೇಶಿಸಿದ್ದರು.

ಇದನ್ನೂ ಓದಿ: Kazan Khan: ಖ್ಯಾತ ಖಳನಟ ಕಝಾನ್​ ಖಾನ್​ ಇನ್ನಿಲ್ಲ; ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಕಲಾವಿದ

‘ಪದವೀಧರ’, ‘ನಮ್ಮ ಊರು’, ‘ಮಹಡಿಯ ಮನೆ’, ‘ಹೊಯ್ಸಳ, ‘ಮಹಾ ತಪಸ್ವಿ’, ‘ಕನ್ನಡ ಕುವರ’, ‘ವೀರ ಮಹಾದೇವ’ ಮತ್ತಿತರ ಸಿನಿಮಾಗಳಿಗೆ ಸಿ.ವಿ. ಶಿವಶಂಕರ್​ ಅವರು ನಿರ್ದೇಶನ ಮಾಡಿದ್ದರು. ಕನ್ನಡ ಚಿತ್ರರಂಗದಲ್ಲಿ ಗೀತರಚನಕಾರನಾಗಿಯೂ ಅವರು ಗುರುತಿಸಿಕೊಂಡಿದ್ದರು. ‘ಸಿರಿವಂತನಾದರೂ ಕನ್ನಡ ನಾಡಲ್ಲಿ ಮೆರೆವೆ..’ ಹಾಡನ್ನು ಬರೆಯುವ ಮೂಲಕ ಅವರು ಅಪಾರ ಜನಪ್ರಿಯತೆ ಪಡೆದುಕೊಂಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:13 pm, Tue, 27 June 23

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ