AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡದ ಹೀರೋಗಳಿಗೆ ಇದನ್ನು ಹೇಳೋ ಗಟ್ಸ್ ಇದೆಯಾ; ಸೋನು ನಿಗಮ್ ಹೀಗೆ ಹೇಳಿದ್ರಾ?

ಬೆಂಗಳೂರಿನ SBI ಬ್ಯಾಂಕ್‌ನಲ್ಲಿ ಮ್ಯಾನೇಜರ್ ಕನ್ನಡ ಮಾತನಾಡಲು ನಿರಾಕರಿಸಿದ ಘಟನೆ ವಿವಾದ ಸೃಷ್ಟಿಸಿದೆ. ತೇಜಸ್ವಿ ಸೂರ್ಯ ಈ ವಿಷಯದಲ್ಲಿ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಈ ಬೆನ್ನಲ್ಲೇ ಸೋನು ನಿಗಮ್ ಮಾಡಿದ ಟ್ವೀಟ್ ಒಂದು ವೈರಲ್ ಆಗಿದೆ. ಈ ಟ್ವೀಟ್​ನ ಸತ್ಯಾಸತ್ಯತೆ ಬಗ್ಗೆ ಇಲ್ಲಿದೆ ವಿವರ.

‘ಕನ್ನಡದ ಹೀರೋಗಳಿಗೆ ಇದನ್ನು ಹೇಳೋ ಗಟ್ಸ್ ಇದೆಯಾ; ಸೋನು ನಿಗಮ್ ಹೀಗೆ ಹೇಳಿದ್ರಾ?
ಸೋನು ನಿಗಮ್
ರಾಜೇಶ್ ದುಗ್ಗುಮನೆ
|

Updated on:May 22, 2025 | 11:41 AM

Share

ಗಾಯಕ ಸೋನು ನಿಗಮ್ (Sonu Nigam) ಅವರು ಒಂದಾದ ಮೇಲೆ ಒಂದರಂತೆ ವಿವಾದ ಮಾಡಿಕೊಳ್ಳುತ್ತಲೇ ಇದ್ದಾರೆ. ಇತ್ತೀಚೆಗೆ ಕನ್ನಡಿಗರನ್ನು ಕೆಣಕಿ ಅವರು ಸುದ್ದಿ ಆಗಿದ್ದರು. ‘ಕನ್ನಡ ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್​ನಲ್ಲಿ ಭಯೋತ್ಪಾದನಾ ದಾಳಿ ಆಯಿತು’ ಎಂದು ಹೇಳಿದ್ದರು. ಇದರಿಂದ ಅವರು ಟೀಕೆ ಎದುರಿಸಿದ್ದರು. ಈಗ ಸೋನು ನಿಗಮ್ ಹೆಸರಿ ಟ್ವಿಟರ್ ಖಾತೆಯಿಂದ ಮಾಡಿದ ಟ್ವೀಟ್ ಒಂದು ಚರ್ಚೆಗೆ ಕಾರಣ ಆಗಿದೆ. ಅಸಲಿಗೆ ಅವರು ಇದನ್ನು ಮಾಡಿಯೇ ಇಲ್ಲ. ಸೋನು ನಿಗಮ್ ಟ್ವಿಟರ್ ಬಳಕೆ ಮಾಡೋದು ಬಿಟ್ಟು 7 ವರ್ಷಗಳೇ ಆಗಿವೆ.

ಏನಿದು ಬ್ಯಾಂಕ್ ಘಟನೆ?

ಬೆಂಗಳೂರಿನ ಚಂದಾಪುರದ ಎಸ್​ಬಿಐ ಬ್ಯಾಂಕ್​ಗೆ ಕೆಲಸದ ನಿಮಿತ್ತ ಗ್ರಾಹಕರೊಬ್ಬರು ಹೋದಾಗ ಅಲ್ಲಿನ ಬ್ಯಾಂಕ್​ ಮ್ಯಾನೇಜರ್ ಪ್ರಿಯಾಂಕಾ​ ಉದ್ಧಟತನ ತೋರಿದ್ದರು. ಗ್ರಾಹಕನಿಗೆ ಹಿಂದಿ ಮಾತನಾಡುವಂತೆ ಹೇಳಿದ್ದೂ ಅಲ್ಲದೆ, ಯಾವತ್ತೂ ಕನ್ನಡ ಮಾತನಾಡಲ್ಲ ಎಂದು ದರ್ಪ ತೋರಿದ್ದರು.

ಇದನ್ನೂ ಓದಿ
Image
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Image
25ನೇ ವಯಸ್ಸಿಗೆ ಕಾಲಿಟ್ಟ ಸುಹಾನ; ಶಾರುಖ್ ಮಗಳ ಬಳಿ ಇದೆ ದುಬಾರಿ ವಸ್ತುಗಳು
Image
‘ತಿಂಗಳಿಗೆ 40 ಲಕ್ಷ ಜೀವನಾಂಶ ಕೊಡಿ’; ಬೇಡಿಕೆ ಇಟ್ಟ ಜಯಮ್​ ರವಿ ಪತ್ನಿ
Image
‘ಸೀತಾ ರಾಮ’ಗೆ ಕೊನೆಯ ದಿನದ ಶೂಟಿಂಗ್; ಸೀರಿಯಲ್ ಪೂರ್ಣಗೊಳ್ಳಲು ಕಾರಣವೇನು?

ತೇಜಸ್ವಿ ಸೂರ್ಯ ಖಡಕ್ ಪ್ರತಿಕ್ರಿಯೆ

ಎಸ್​ಬಿಐ ಬ್ಯಾಂಕ್​ನ ಬ್ರ್ಯಾಂಚ್ ಮ್ಯಾನೇಜರ್ ಅರವರ ಈ ರೀತಿಯ ದುಂಡಾವರ್ತನೆ ಸಹಿಸಲು ಆಗದು. ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ, ಅದರಲ್ಲಿಯೂ ಬ್ಯಾಂಕಿಂಗ್ ವಲಯದಲ್ಲಿ ಗ್ರಾಹಕರು ಮಾತನಾಡುವ ಸ್ಥಳೀಯ ಭಾಷೆಯಲ್ಲಿಯೇ ವ್ಯವಹರಿಸತಕ್ಕದ್ದು. ಕರ್ನಾಟಕದಲ್ಲಿ ಬ್ಯಾಂಕಿಂಗ್ ಸೇವೆಗಳಲ್ಲಿ ಸ್ಥಳೀಯ ಕನ್ನಡಿಗರನ್ನು ಪರಿಗಣಿಸುವಂತೆ ನಾನು ಸಂಸತ್ತಿನ ಒಳಗೆ ಮತ್ತು ಹೊರಗೆ ಹಲವು ಬಾರಿ ಪ್ರಸ್ತಾಪಿಸಿದ್ದೇನೆ. ಇತ್ತೀಚೆಗಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಮುಂದೆಯೂ ನಾನು ಇದನ್ನೇ ಪುನರುಚ್ಚರಿಸಿ, ಸ್ಥಳೀಯ ಭಾಷೆ ಬಲ್ಲವರನ್ನೇ ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದು, ಈ ಕುರಿತಂತೆ DFS ನೀತಿಯಡಿಯಲ್ಲಿಯೇ ನೇಮಕಾತಿ ಕೈಗೊಳ್ಳುವಂತೆ ಎಸ್​ಬಿಐ ಬಳಿ ವಿನಂತಿಸುತ್ತೇನೆ. ಈ ರೀತಿಯ ವರ್ತನೆ ತೋರಿರುವ ಬ್ಯಾಂಕ್ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸಂಬಂಧಪಟ್ಟವರ ಬಳಿ ನಾನು ಒತ್ತಾಯಿಸಿದ್ದು, ಕರ್ನಾಟಕದಲ್ಲಿ ಸೇವೆ ಸಲ್ಲಿಸುವ ಬ್ಯಾಂಕಿಂಗ್ ವಲಯ ಸಿಬ್ಬಂದಿಗಳು ಗ್ರಾಹಕರೊಂದಿಗೆ ಕನ್ನಡದಲ್ಲೇ ವ್ಯವಹರಿಸುವ ಅಗತ್ಯತೆ ಇದೆ’ ಎಂದಿದ್ದರು.

ಸೋನು ನಿಗಮ್ ಎಂದು ಹೇಳಿಕೊಂಡ ವ್ಯಕ್ತಿ ಹೇಳಿದ್ದೇನು?

‘ಕನ್ನಡ ಸಿನಿಮಾ ಹಿಂದಿಗೆ ಡಬ್​ ಮಾಡಬೇಡಿ. ಕನ್ನಡ ಸಿನಿಮಾನ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಬೇಡಿ. ತೇಜಸ್ವಿ ಸೂರ್ಯ ಅವರೇ ಇದನ್ನು ಕನ್ನಡ ಹೀರೋಗಳಿಗೆ ಹೇಳುವ ಗಟ್ಸ್ ನಿಮಗೆ ಇದೆಯೇ ಅಥವಾ ನೀವೋಬ್ಬ ಭಾಷಾ ಹೋರಾಟಗಾರ ಅಷ್ಟೆಯೇ’ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಎಂದಿಗೂ ಕನ್ನಡ ಮಾತನಾಡಲ್ಲ ಅಂತ ದರ್ಪ ತೋರಿದ್ದ SBI ಬ್ಯಾಂಕ್​ ಮ್ಯಾನೇಜರ್​: ಸಿಎಂ ಖಂಡನೆ ಬೆನ್ನಲ್ಲೇ ಎತ್ತಂಗಡಿ

ಸೋನು ನಿಗಮ್ ಟ್ವಿಟರ್ ಇಲ್ಲ

ಸೋನು ನಿಗಮ್ ಅವರು ಟ್ವಿಟರ್ ಬಳಕೆ ಮಾಡೋದು ನಿಲ್ಲಿಸಿ ಏಳು ವರ್ಷಗಳು ಕಳೆದಿವೆ. ಆದರೆ, ಅವರ ಹೆಸರಲ್ಲಿ ಬೇರೊಬ್ಬರು ಖಾತೆ ತೆರೆದಿದ್ದಾರೆ. ಈ ಬಗ್ಗೆ ಸೋನು ನಿಗಮ್ ಪ್ರಶ್ನೆ ಮಾಡಿದ್ದರು. ಆದರೆ, ಆ ವ್ಯಕ್ತಿ ನನ್ನ ಹೆಸರು ಸೋನು ನಿಗಮ್ ಎಂದು ದಾಖಲೆ ನೀಡಿದ್ದರು. ಕೆಲವರು ತಪ್ಪಾಗಿ ಅರ್ಥೈಸಿಕೊಂಡು ಸೋನು ನಿಗಮ್​ಗೆ ಬೈಯ್ಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:32 am, Thu, 22 May 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!