AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಅಪಘಾತಕ್ಕೆ ಒಳಗಾದ ‘ಕನ್ನಡತಿ’ ಕಿರಣ್​ ರಾಜ್​; ಸಿನಿಮಾ ರಿಲೀಸ್​ಗೂ ಮೊದಲೇ ಕಹಿ ಸುದ್ದಿ

ಕಿರಣ್ ರಾಜ್ ಅವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  

ರಸ್ತೆ ಅಪಘಾತಕ್ಕೆ ಒಳಗಾದ ‘ಕನ್ನಡತಿ’ ಕಿರಣ್​ ರಾಜ್​; ಸಿನಿಮಾ ರಿಲೀಸ್​ಗೂ ಮೊದಲೇ ಕಹಿ ಸುದ್ದಿ
ಕಿರಣ್ ರಾಜ್
Malatesh Jaggin
| Edited By: |

Updated on:Sep 11, 2024 | 9:31 AM

Share

‘ಕನ್ನಡತಿ’ ಮೂಲಕ ಫೇಮಸ್ ಆದ ನಟ ಕಿರಣ್ ರಾಜ್​ ಅವರಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ. ಕಿರಣ್ ರಾಜ್​ ಎದೆ ಭಾಗಕ್ಕೆ ಪೆಟ್ಟಾಗಿದ್ದು, ಕಾರಿಗೆ ಹಾನಿ ಆಗಿದೆ. ಕಿರಣ್ ರಾಜ್​ಗೆ ಕೆಂಗೇರಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಎಕ್ಸಿಕ್ಯೂಟಿವ್​ ಪ್ರೊಡ್ಯೂಸರ್ ಪಾರಾಗಿದ್ದಾರೆ. ಕಿರಣ್ ರಾಜ್ ನಟನೆಯ ‘ರಾನಿ’ ಸಿನಿಮಾ ಈ ವಾರ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಈ ರೀತಿ ಆಗಿದೆ.

ಕಿರಣ್ ರಾಜ್ ಅವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ.  ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಕಿರಣ್ ರಾಜ್ ನಟನೆಯ ‘ರಾನಿ’ ಬಿಡುಗಡೆಗೆ ಮುಹೂರ್ತ ನಿಗದಿ

ಕಿರಣ್ ರಾಜ್ ಅವರು ಸದ್ಯ ಕಿರುತೆರೆಯಿಂದ ದೂರ ಇದ್ದಾರೆ. ಅವರು ಕೆಲವು ಸಿನಿಮಾಗಳನ್ನು ಮಾಡಿದ್ದಾರೆ. ಸೆಪ್ಟೆಂಬರ್ 12ರಂದು ಅವರ ನಟನೆಯ ‘ರಾನಿ’ ಸಿನಿಮಾ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಈ ರೀತಿಯ ದುರ್ಘಟನೆ ನಡೆದಿದೆ ಅನ್ನೋದು ಬೇಸರದ ವಿಚಾರ.

ಕಿರಣ್ ರಾಜ್ ಅವರು ಕೇವಲ ಕನ್ನಡ ಮಾತ್ರವಲ್ಲದೆ ಹಿಂದಿ ಕಿರುತೆರೆಯಲ್ಲೂ ನಟಿಸಿ ಗಮನ ಸೆಳೆದಿದ್ದಾರೆ. ಅವರು ಆ ಬಳಿಕ ಕನ್ನಡ ಕಿರುತೆರೆಗೆ ಮರಳಿದರು. ‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷ ಆಗಿ ಅವರು ಗಮನ ಸೆಳೆದರು. ಈ ಮೂಲಕ ಫೇಮಸ್ ಆದರು. ಈಗ ಅವರು ಹಿರಿತೆರೆಯಲ್ಲಿ ತೊಡಗಿಕೊಂಡಿದ್ದಾರೆ. ಅವರ ನಟನೆಯ ಸಿನಿಮಾಗಳು ರಿಲೀಸ್ ಆಗುತ್ತಿವೆ.

‘ರಾನಿ’ ಸಿನಿಮಾಗೆ ಗುರುತೇಜ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಕಿರಣ್ ರಾಜ್ ಅವರು ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಅನ್ನೋದು ಟ್ರೇಲರ್ ನೋಡಿದವರಿಗೆ ಗೊತ್ತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:50 am, Wed, 11 September 24

Follow Us
ಲಾರಿ ಪಲ್ಟಿಯಾಗುತ್ತಿದ್ದಂತೆ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!
ಲಾರಿ ಪಲ್ಟಿಯಾಗುತ್ತಿದ್ದಂತೆ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!
ಎರಡು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಕೊನೆಗೆ ಆಕೆಯನ್ನ ಕೊಂದೇ ಬಿಟ್ಟ
ಎರಡು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಕೊನೆಗೆ ಆಕೆಯನ್ನ ಕೊಂದೇ ಬಿಟ್ಟ
ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!
ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ