ರಸ್ತೆ ಅಪಘಾತಕ್ಕೆ ಒಳಗಾದ ‘ಕನ್ನಡತಿ’ ಕಿರಣ್​ ರಾಜ್​; ಸಿನಿಮಾ ರಿಲೀಸ್​ಗೂ ಮೊದಲೇ ಕಹಿ ಸುದ್ದಿ

| Updated By: ರಾಜೇಶ್ ದುಗ್ಗುಮನೆ

Updated on: Sep 11, 2024 | 9:31 AM

ಕಿರಣ್ ರಾಜ್ ಅವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  

ರಸ್ತೆ ಅಪಘಾತಕ್ಕೆ ಒಳಗಾದ ‘ಕನ್ನಡತಿ’ ಕಿರಣ್​ ರಾಜ್​; ಸಿನಿಮಾ ರಿಲೀಸ್​ಗೂ ಮೊದಲೇ ಕಹಿ ಸುದ್ದಿ
ಕಿರಣ್ ರಾಜ್
Follow us on

‘ಕನ್ನಡತಿ’ ಮೂಲಕ ಫೇಮಸ್ ಆದ ನಟ ಕಿರಣ್ ರಾಜ್​ ಅವರಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ. ಕಿರಣ್ ರಾಜ್​ ಎದೆ ಭಾಗಕ್ಕೆ ಪೆಟ್ಟಾಗಿದ್ದು, ಕಾರಿಗೆ ಹಾನಿ ಆಗಿದೆ. ಕಿರಣ್ ರಾಜ್​ಗೆ ಕೆಂಗೇರಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಎಕ್ಸಿಕ್ಯೂಟಿವ್​ ಪ್ರೊಡ್ಯೂಸರ್ ಪಾರಾಗಿದ್ದಾರೆ. ಕಿರಣ್ ರಾಜ್ ನಟನೆಯ ‘ರಾನಿ’ ಸಿನಿಮಾ ಈ ವಾರ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಈ ರೀತಿ ಆಗಿದೆ.

ಕಿರಣ್ ರಾಜ್ ಅವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ.  ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಕಿರಣ್ ರಾಜ್ ನಟನೆಯ ‘ರಾನಿ’ ಬಿಡುಗಡೆಗೆ ಮುಹೂರ್ತ ನಿಗದಿ

ಕಿರಣ್ ರಾಜ್ ಅವರು ಸದ್ಯ ಕಿರುತೆರೆಯಿಂದ ದೂರ ಇದ್ದಾರೆ. ಅವರು ಕೆಲವು ಸಿನಿಮಾಗಳನ್ನು ಮಾಡಿದ್ದಾರೆ. ಸೆಪ್ಟೆಂಬರ್ 12ರಂದು ಅವರ ನಟನೆಯ ‘ರಾನಿ’ ಸಿನಿಮಾ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಈ ರೀತಿಯ ದುರ್ಘಟನೆ ನಡೆದಿದೆ ಅನ್ನೋದು ಬೇಸರದ ವಿಚಾರ.

ಕಿರಣ್ ರಾಜ್ ಅವರು ಕೇವಲ ಕನ್ನಡ ಮಾತ್ರವಲ್ಲದೆ ಹಿಂದಿ ಕಿರುತೆರೆಯಲ್ಲೂ ನಟಿಸಿ ಗಮನ ಸೆಳೆದಿದ್ದಾರೆ. ಅವರು ಆ ಬಳಿಕ ಕನ್ನಡ ಕಿರುತೆರೆಗೆ ಮರಳಿದರು. ‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷ ಆಗಿ ಅವರು ಗಮನ ಸೆಳೆದರು. ಈ ಮೂಲಕ ಫೇಮಸ್ ಆದರು. ಈಗ ಅವರು ಹಿರಿತೆರೆಯಲ್ಲಿ ತೊಡಗಿಕೊಂಡಿದ್ದಾರೆ. ಅವರ ನಟನೆಯ ಸಿನಿಮಾಗಳು ರಿಲೀಸ್ ಆಗುತ್ತಿವೆ.

‘ರಾನಿ’ ಸಿನಿಮಾಗೆ ಗುರುತೇಜ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಕಿರಣ್ ರಾಜ್ ಅವರು ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಅನ್ನೋದು ಟ್ರೇಲರ್ ನೋಡಿದವರಿಗೆ ಗೊತ್ತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:50 am, Wed, 11 September 24