ರಸ್ತೆ ಅಪಘಾತಕ್ಕೆ ಒಳಗಾದ ‘ಕನ್ನಡತಿ’ ಕಿರಣ್​ ರಾಜ್​; ಸಿನಿಮಾ ರಿಲೀಸ್​ಗೂ ಮೊದಲೇ ಕಹಿ ಸುದ್ದಿ

ಕಿರಣ್ ರಾಜ್ ಅವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  

ರಸ್ತೆ ಅಪಘಾತಕ್ಕೆ ಒಳಗಾದ ‘ಕನ್ನಡತಿ’ ಕಿರಣ್​ ರಾಜ್​; ಸಿನಿಮಾ ರಿಲೀಸ್​ಗೂ ಮೊದಲೇ ಕಹಿ ಸುದ್ದಿ
ಕಿರಣ್ ರಾಜ್
Edited By:

Updated on: Sep 11, 2024 | 9:31 AM

‘ಕನ್ನಡತಿ’ ಮೂಲಕ ಫೇಮಸ್ ಆದ ನಟ ಕಿರಣ್ ರಾಜ್​ ಅವರಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ. ಕಿರಣ್ ರಾಜ್​ ಎದೆ ಭಾಗಕ್ಕೆ ಪೆಟ್ಟಾಗಿದ್ದು, ಕಾರಿಗೆ ಹಾನಿ ಆಗಿದೆ. ಕಿರಣ್ ರಾಜ್​ಗೆ ಕೆಂಗೇರಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಎಕ್ಸಿಕ್ಯೂಟಿವ್​ ಪ್ರೊಡ್ಯೂಸರ್ ಪಾರಾಗಿದ್ದಾರೆ. ಕಿರಣ್ ರಾಜ್ ನಟನೆಯ ‘ರಾನಿ’ ಸಿನಿಮಾ ಈ ವಾರ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಈ ರೀತಿ ಆಗಿದೆ.

ಕಿರಣ್ ರಾಜ್ ಅವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ.  ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಕಿರಣ್ ರಾಜ್ ನಟನೆಯ ‘ರಾನಿ’ ಬಿಡುಗಡೆಗೆ ಮುಹೂರ್ತ ನಿಗದಿ

ಕಿರಣ್ ರಾಜ್ ಅವರು ಸದ್ಯ ಕಿರುತೆರೆಯಿಂದ ದೂರ ಇದ್ದಾರೆ. ಅವರು ಕೆಲವು ಸಿನಿಮಾಗಳನ್ನು ಮಾಡಿದ್ದಾರೆ. ಸೆಪ್ಟೆಂಬರ್ 12ರಂದು ಅವರ ನಟನೆಯ ‘ರಾನಿ’ ಸಿನಿಮಾ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಈ ರೀತಿಯ ದುರ್ಘಟನೆ ನಡೆದಿದೆ ಅನ್ನೋದು ಬೇಸರದ ವಿಚಾರ.

ಕಿರಣ್ ರಾಜ್ ಅವರು ಕೇವಲ ಕನ್ನಡ ಮಾತ್ರವಲ್ಲದೆ ಹಿಂದಿ ಕಿರುತೆರೆಯಲ್ಲೂ ನಟಿಸಿ ಗಮನ ಸೆಳೆದಿದ್ದಾರೆ. ಅವರು ಆ ಬಳಿಕ ಕನ್ನಡ ಕಿರುತೆರೆಗೆ ಮರಳಿದರು. ‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷ ಆಗಿ ಅವರು ಗಮನ ಸೆಳೆದರು. ಈ ಮೂಲಕ ಫೇಮಸ್ ಆದರು. ಈಗ ಅವರು ಹಿರಿತೆರೆಯಲ್ಲಿ ತೊಡಗಿಕೊಂಡಿದ್ದಾರೆ. ಅವರ ನಟನೆಯ ಸಿನಿಮಾಗಳು ರಿಲೀಸ್ ಆಗುತ್ತಿವೆ.

‘ರಾನಿ’ ಸಿನಿಮಾಗೆ ಗುರುತೇಜ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಕಿರಣ್ ರಾಜ್ ಅವರು ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಅನ್ನೋದು ಟ್ರೇಲರ್ ನೋಡಿದವರಿಗೆ ಗೊತ್ತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:50 am, Wed, 11 September 24

ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More
Follow Us