AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬು ನಿರ್ದೇಶನದ ಹೊಸ ಸಿನಿಮಾಗೆ ‘ಕನ್ನಡತಿ’ ಧಾರಾವಾಹಿಯ ಸ್ಮೈಲ್ ಗುರು ರಕ್ಷಿತ್ ಹೀರೋ

ಸ್ಮೈಲ್ ಗುರು ರಕ್ಷಿತ್ ಹೀರೋ ಆಗಿ ನಟಿಸಲಿರುವ ಮೊದಲ ಸಿನಿಮಾಗೆ ಸ್ಕ್ರಿಪ್ಟ್​ ಕೆಲಸಗಳು ನಡೆಯುತ್ತಿವೆ. 2024ರ ಜನವರಿಯಲ್ಲಿ ಈ ಸಿನಿಮಾಗೆ ಚಿತ್ರೀಕರಣ ಆರಂಭ ಆಗಲಿದೆ. ‘ಅರಸು’, ‘ಆಕಾಶ್​’ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿ ಯಶಸ್ಸು ಕಂಡ ಮಹೇಶ್ ಬಾಬು ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ.

ಮಹೇಶ್​ ಬಾಬು ನಿರ್ದೇಶನದ ಹೊಸ ಸಿನಿಮಾಗೆ ‘ಕನ್ನಡತಿ’ ಧಾರಾವಾಹಿಯ ಸ್ಮೈಲ್ ಗುರು ರಕ್ಷಿತ್ ಹೀರೋ
ಸ್ಮೈಲ್​ ಗುರು ರಕ್ಷಿತ್​, ನಿರ್ದೇಶಕ ಮಹೇಶ್​ ಬಾಬು
ಮದನ್​ ಕುಮಾರ್​
|

Updated on: Oct 03, 2023 | 1:36 PM

Share

‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರಸಾರವಾದ ಕನ್ನಡತಿ’ ಧಾರಾವಾಹಿ (Kannadathi Serial) ಸಾಕಷ್ಟು ಜನಪ್ರಿಯತೆ ಪಡೆಯಿತು. ಆ ಸೀರಿಯಲ್​ನಲ್ಲಿ ನಟಿಸಿದ ಬಹುತೇಕ ಕಲಾವಿದರಿಗೆ ಹೊಸ ಹೊಸ ಅವಕಾಶಗಳು ಸಿಕ್ಕವು. ಹಿರಿತೆರೆಯಲ್ಲಿ ಈಗಾಗಲೇ ಕಿರಣ್​ ರಾಜ್​ ಮಿಂಚಿದ್ದಾರೆ. ನಟಿ ರಂಜನಿ ರಾಘವನ್​ ಅವರಿಗೂ ಅವಕಾಶಗಳು ಬರುತ್ತಿವೆ. ಈಗ ಅದೇ ಧಾರಾವಾಹಿಯ ಮತ್ತೋರ್ವ ನಟ ಆದಿ ಅಲಿಯಾಸ್​ ಸ್ಮೈಲ್ ಗುರು ರಕ್ಷಿತ್ (Smile Guru Rakshth) ಕೂಡ ಸಿನಿಮಾದಲ್ಲಿ ಅವಕಾಶ ಪಡೆದಿದ್ದಾರೆ. ಅವರ ಮೊದಲ ಸಿನಿಮಾಗೆ ಚಾಲನೆ ಸಿಕ್ಕಿದೆ. ಆ ಸಿನಿಮಾಗೆ ಖ್ಯಾತ ನಿರ್ದೇಶಕ ಮಹೇಶ್​ ಬಾಬು (Mahesh Babu) ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

‘ಕನ್ನಡತಿ’ ಧಾರಾವಾಹಿಯಲ್ಲಿ ಆದಿ ಪಾತ್ರವನ್ನು ಮಾಡಿ ಫೇಮಸ್​ ಆದವರು ಸ್ಮೈಲ್ ಗುರು ರಕ್ಷಿತ್. ಸೀರಿಯಲ್​ ಮಾತ್ರವಲ್ಲದೇ ಅನೇಕ ರಿಯಾಲಿಟಿ ಶೋಗಳಲ್ಲಿ ಅವರು ಭಾಗವಹಿಸಿದ್ದಾರೆ. ‘ತಕಧಿಮಿತ’, ‘ಡ್ಯಾನ್ಸ್ ಡ್ಯಾನ್ಸ್’ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿದ ಅನುಭವ ಅವರಿಗೆ ಇದೆ. ‘ಪದ್ಮಾವತಿ’ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅವರು ಈಗ ದೊಡ್ಡ ಪರದೆಗೆ ಎಂಟ್ರಿ ನೀಡುತ್ತಿದ್ದಾರೆ. ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿರುವ ಅವರು ಹೀರೋ ಆಗಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ.

ಇದನ್ನೂ ಓದಿ: ನಿಖಿಲ್​ ಕುಮಾರ್​ ಸಿನಿಮಾದ ಸೆಟ್​ಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಫೋಟೋ ವೈರಲ್​

‘ಅರಸು’, ‘ಆಕಾಶ್​’ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿ ಯಶಸ್ಸು ಕಂಡವರು ಮಹೇಶ್ ಬಾಬು. ಹೊಸಬರ ಜೊತೆಗೂ ಅವರು ಸಿನಿಮಾ ಮಾಡಿ ಸೈ ಎನಿಸಿಕೊಂಡಿದ್ದಾರೆ. ಹೊಸ ಹೀರೋ ರಕ್ಷಿತ್ ಹಾಗೂ ಮಹೇಶ್​ ಬಾಬು ಕಾಂಬಿನೇಷನ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಸದ್ಯಕ್ಕೆ ಈ ಚಿತ್ರದ ಸ್ಕ್ರಿಪ್ಟ್​ ಕೆಲಸಗಳು ನಡೆಯುತ್ತಿವೆ. ಒಂದು ಕಲ್ಟ್​ ಆದಂತಹ ಲವ್​ ಸ್ಟೋರಿಯನ್ನು ಈ ಚಿತ್ರದಲ್ಲಿ ತೋರಿಸಲು ನಿರ್ದೇಶಕರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ‘ಜೋಡಿಹಕ್ಕಿ’ ಧಾರಾವಾಹಿ ನಟ ತಾಂಡವ್ ರಾಮ್​ಗೆ ಸಿನಿಮಾ ಆಫರ್​; ಭರತ್​ ನಾವುಂದ ನಿರ್ದೇಶನ

2024ರ ಜನವರಿಯಲ್ಲಿ ಈ ಸಿನಿಮಾಗೆ ಚಿತ್ರೀಕರಣ ಆರಂಭ ಆಗಲಿದೆ. ಲೀಡಿಂಗ್ ಸ್ಟ್ಯಾಂಡಿಂಗ್ ಮೇಕರ್ಸ್ ಎಂಎಂಎಂ ಗ್ರೂಪ್ಸ್​ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಸಾಕಷ್ಟು ತಯಾರಿ ನಡೆಸಿಕೊಂಡೇ ಸ್ಮೈಲ್ ಗುರು ರಕ್ಷಿತ್ ಅವರು ಶೂಟಿಂಗ್​ನಲ್ಲಿ ಭಾಗಿ ಆಗುತ್ತಿದ್ದಾರೆ. ಈ ಸಿನಿಮಾ ಮೂಲಕ ಮಹೇಶ್​ ಬಾಬು ಅವರು ತೋರಿಸಲಿರುವ ಪ್ರೇಮಕಥೆ ಹೇಗಿರಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ