ಮಹೇಶ್​ ಬಾಬು ನಿರ್ದೇಶನದ ಹೊಸ ಸಿನಿಮಾಗೆ ‘ಕನ್ನಡತಿ’ ಧಾರಾವಾಹಿಯ ಸ್ಮೈಲ್ ಗುರು ರಕ್ಷಿತ್ ಹೀರೋ

ಸ್ಮೈಲ್ ಗುರು ರಕ್ಷಿತ್ ಹೀರೋ ಆಗಿ ನಟಿಸಲಿರುವ ಮೊದಲ ಸಿನಿಮಾಗೆ ಸ್ಕ್ರಿಪ್ಟ್​ ಕೆಲಸಗಳು ನಡೆಯುತ್ತಿವೆ. 2024ರ ಜನವರಿಯಲ್ಲಿ ಈ ಸಿನಿಮಾಗೆ ಚಿತ್ರೀಕರಣ ಆರಂಭ ಆಗಲಿದೆ. ‘ಅರಸು’, ‘ಆಕಾಶ್​’ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿ ಯಶಸ್ಸು ಕಂಡ ಮಹೇಶ್ ಬಾಬು ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ.

ಮಹೇಶ್​ ಬಾಬು ನಿರ್ದೇಶನದ ಹೊಸ ಸಿನಿಮಾಗೆ ‘ಕನ್ನಡತಿ’ ಧಾರಾವಾಹಿಯ ಸ್ಮೈಲ್ ಗುರು ರಕ್ಷಿತ್ ಹೀರೋ
ಸ್ಮೈಲ್​ ಗುರು ರಕ್ಷಿತ್​, ನಿರ್ದೇಶಕ ಮಹೇಶ್​ ಬಾಬು

Updated on: Oct 03, 2023 | 1:36 PM

‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರಸಾರವಾದ ಕನ್ನಡತಿ’ ಧಾರಾವಾಹಿ (Kannadathi Serial) ಸಾಕಷ್ಟು ಜನಪ್ರಿಯತೆ ಪಡೆಯಿತು. ಆ ಸೀರಿಯಲ್​ನಲ್ಲಿ ನಟಿಸಿದ ಬಹುತೇಕ ಕಲಾವಿದರಿಗೆ ಹೊಸ ಹೊಸ ಅವಕಾಶಗಳು ಸಿಕ್ಕವು. ಹಿರಿತೆರೆಯಲ್ಲಿ ಈಗಾಗಲೇ ಕಿರಣ್​ ರಾಜ್​ ಮಿಂಚಿದ್ದಾರೆ. ನಟಿ ರಂಜನಿ ರಾಘವನ್​ ಅವರಿಗೂ ಅವಕಾಶಗಳು ಬರುತ್ತಿವೆ. ಈಗ ಅದೇ ಧಾರಾವಾಹಿಯ ಮತ್ತೋರ್ವ ನಟ ಆದಿ ಅಲಿಯಾಸ್​ ಸ್ಮೈಲ್ ಗುರು ರಕ್ಷಿತ್ (Smile Guru Rakshth) ಕೂಡ ಸಿನಿಮಾದಲ್ಲಿ ಅವಕಾಶ ಪಡೆದಿದ್ದಾರೆ. ಅವರ ಮೊದಲ ಸಿನಿಮಾಗೆ ಚಾಲನೆ ಸಿಕ್ಕಿದೆ. ಆ ಸಿನಿಮಾಗೆ ಖ್ಯಾತ ನಿರ್ದೇಶಕ ಮಹೇಶ್​ ಬಾಬು (Mahesh Babu) ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

‘ಕನ್ನಡತಿ’ ಧಾರಾವಾಹಿಯಲ್ಲಿ ಆದಿ ಪಾತ್ರವನ್ನು ಮಾಡಿ ಫೇಮಸ್​ ಆದವರು ಸ್ಮೈಲ್ ಗುರು ರಕ್ಷಿತ್. ಸೀರಿಯಲ್​ ಮಾತ್ರವಲ್ಲದೇ ಅನೇಕ ರಿಯಾಲಿಟಿ ಶೋಗಳಲ್ಲಿ ಅವರು ಭಾಗವಹಿಸಿದ್ದಾರೆ. ‘ತಕಧಿಮಿತ’, ‘ಡ್ಯಾನ್ಸ್ ಡ್ಯಾನ್ಸ್’ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿದ ಅನುಭವ ಅವರಿಗೆ ಇದೆ. ‘ಪದ್ಮಾವತಿ’ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅವರು ಈಗ ದೊಡ್ಡ ಪರದೆಗೆ ಎಂಟ್ರಿ ನೀಡುತ್ತಿದ್ದಾರೆ. ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿರುವ ಅವರು ಹೀರೋ ಆಗಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ.

ಇದನ್ನೂ ಓದಿ: ನಿಖಿಲ್​ ಕುಮಾರ್​ ಸಿನಿಮಾದ ಸೆಟ್​ಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಫೋಟೋ ವೈರಲ್​

‘ಅರಸು’, ‘ಆಕಾಶ್​’ ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿ ಯಶಸ್ಸು ಕಂಡವರು ಮಹೇಶ್ ಬಾಬು. ಹೊಸಬರ ಜೊತೆಗೂ ಅವರು ಸಿನಿಮಾ ಮಾಡಿ ಸೈ ಎನಿಸಿಕೊಂಡಿದ್ದಾರೆ. ಹೊಸ ಹೀರೋ ರಕ್ಷಿತ್ ಹಾಗೂ ಮಹೇಶ್​ ಬಾಬು ಕಾಂಬಿನೇಷನ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಸದ್ಯಕ್ಕೆ ಈ ಚಿತ್ರದ ಸ್ಕ್ರಿಪ್ಟ್​ ಕೆಲಸಗಳು ನಡೆಯುತ್ತಿವೆ. ಒಂದು ಕಲ್ಟ್​ ಆದಂತಹ ಲವ್​ ಸ್ಟೋರಿಯನ್ನು ಈ ಚಿತ್ರದಲ್ಲಿ ತೋರಿಸಲು ನಿರ್ದೇಶಕರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ‘ಜೋಡಿಹಕ್ಕಿ’ ಧಾರಾವಾಹಿ ನಟ ತಾಂಡವ್ ರಾಮ್​ಗೆ ಸಿನಿಮಾ ಆಫರ್​; ಭರತ್​ ನಾವುಂದ ನಿರ್ದೇಶನ

2024ರ ಜನವರಿಯಲ್ಲಿ ಈ ಸಿನಿಮಾಗೆ ಚಿತ್ರೀಕರಣ ಆರಂಭ ಆಗಲಿದೆ. ಲೀಡಿಂಗ್ ಸ್ಟ್ಯಾಂಡಿಂಗ್ ಮೇಕರ್ಸ್ ಎಂಎಂಎಂ ಗ್ರೂಪ್ಸ್​ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಸಾಕಷ್ಟು ತಯಾರಿ ನಡೆಸಿಕೊಂಡೇ ಸ್ಮೈಲ್ ಗುರು ರಕ್ಷಿತ್ ಅವರು ಶೂಟಿಂಗ್​ನಲ್ಲಿ ಭಾಗಿ ಆಗುತ್ತಿದ್ದಾರೆ. ಈ ಸಿನಿಮಾ ಮೂಲಕ ಮಹೇಶ್​ ಬಾಬು ಅವರು ತೋರಿಸಲಿರುವ ಪ್ರೇಮಕಥೆ ಹೇಗಿರಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us