AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಣ್ ರಾಜ್ ನಟನೆಯ ಹೊಸ ಸಿನಿಮಾ ‘ಮೇಘ’ ಬಿಡುಗಡೆಗೆ ರೆಡಿ; ಕಾಜಲ್ ಕುಂದರ್ ನಾಯಕಿ

ಕಿರುತೆರೆಯಲ್ಲಿ ಫೇಮಸ್ ಆಗಿರುವ ನಟ ಕಿರಣ್ ರಾಜ್ ಅವರು ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕೆಲವು ವಾರಗಳ ಹಿಂದೆ ಅವರ ‘ರಾನಿ’ ಸಿನಿಮಾ ಬಿಡುಗಡೆ ಆಗಿತ್ತು. ಈಗ ಅವರ ಇನ್ನೊಂದು ಹೊಸ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ‘ಮೇಘ’ ಎಂಬುದು ಈ ಸಿನಿಮಾದ ಟೈಟಲ್​. ಈ ಚಿತ್ರದಲ್ಲಿ ಕಿರಣ್ ರಾಜ್ ಅವರಿಗೆ ಜೋಡಿಯಾಗಿ ಕಾಜಲ್ ಕುಂದರ್​ ಅವರು ನಟಿಸಿದ್ದಾರೆ.

ಕಿರಣ್ ರಾಜ್ ನಟನೆಯ ಹೊಸ ಸಿನಿಮಾ ‘ಮೇಘ’ ಬಿಡುಗಡೆಗೆ ರೆಡಿ; ಕಾಜಲ್ ಕುಂದರ್ ನಾಯಕಿ
ಕಿರಣ್ ರಾಜ್​
ಮದನ್​ ಕುಮಾರ್​
|

Updated on: Nov 05, 2024 | 9:35 PM

Share

ನಟ ಕಿರಣ್ ರಾಜ್ ಅವರು ‘ಕನ್ನಡತಿ’ ಸೀರಿಯಲ್ ಮೂಲಕ ಜನಪ್ರಿಯತೆ ಪಡೆದರು. ಈಗ ಅವರು ಸೀರಿಯಲ್ ಬದಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ಹೊಸ ಸಿನಿಮಾ ‘ಮೇಘ’ ಬಿಡುಗಡೆಗೆ ಸಿದ್ಧವಾಗಿದೆ. ಚರಣ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಕಿರಣ್ ರಾಜ್ ಹಾಗೂ ಕಾಜಲ್ ಕುಂದರ್ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ‘ಮೇಘ’ ಸಿನಿಮಾದಲ್ಲಿ ನಿಜವಾದ ಸ್ನೇಹ ಮತ್ತು ಪ್ರೀತಿಯ ನಡುವೆ ಇರುವ ಸಣ್ಣ ವ್ಯತ್ಯಾಸವನ್ನು ತಿಳಿಸುವ ಕಥೆ ಇದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಶೀಘ್ರದಲ್ಲೇ ಈ ಸಿನಿಮಾ ಬಿಡುಗಡೆ ಆಗಿದೆ.

‘ಕೃಷಿ ಪ್ರೊಡಕ್ಷನ್ಸ್’ ಸಂಸ್ಥಾಪಕರಾದ ಯತೀಶ್ ಹೆಚ್.ಆರ್, ಯತೀಶ್ ಆರ್.ಜಿ ಹಾಗೂ ರಮೇಶ್ ಎಚ್.ಎನ್ ಅವರ ಸಹಕಾರದೊಂದಿಗೆ ಪ್ರತಿ ವರ್ಷ ತಲಾ ಒಂದು ಉತ್ತಮವಾದ ಸಿನಿಮಾವನ್ನು ನಿರ್ಮಾಣ ಮಾಡಲು ಸಂಕಲ್ಪ ಹೊಂದಿದ್ದಾರೆ. ‘ಕೃಷಿ ಪ್ರೊಡಕ್ಷನ್ಸ್’ ಸಂಸ್ಥೆಯ ಚೊಚ್ಚಲ ಸಿನಿಮಾವಾಗಿ ‘ಮೇಘ’ ಮೂಡಿಬಂದಿದೆ. ಕಿರಣ್ ರಾಜ್ ಮತ್ತು ಕಾಜಲ್ ಕುಂದರ್ ಜೊತೆ ರಾಜೇಶ್ ನಟರಂಗ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೀರೋ ತಂದೆಯ ಪಾತ್ರವನ್ನು ಅವರಿಗೆ ನೀಡಲಾಗಿದೆ.

‘ಮೇಘ’ ಸಿನಿಮಾದಲ್ಲಿ ಶೋಭರಾಜ್, ಸುಂದರ್ ವೀಣಾ, ಸಂಗೀತಾ, ಹನುಮಂತೇಗೌಡ, ಗಿರೀಶ್ ಶಿವಣ್ಣ, ತರಂಗ ವಿಶ್ವ ಮುಂತಾದ ಕಲಾವಿದರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಭಾವನಾತ್ಮಕವಾಗಿ ಕಥೆ ಇರಲಿದೆ. ಡಾ. ವಿ. ನಾಗೇಂದ್ರ ಪ್ರಸಾದ್ ಅವರು ಎರಡು ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಜೋಯಲ್ ಸಕ್ಕರಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಫ್ರಾಂಕ್ಲಿನ್ ರಾಕಿ ಅವರ ಹಿನ್ನೆಲೆ ಸಂಗೀತ ಈ ಸಿನಿಮಾಗೆ ಇದೆ.

ಇದನ್ನೂ ಓದಿ: ಕೋರ್ಟ್​ ಕಟಕಟೆಯಲ್ಲಿ ರಾಧಿಕಾ ಪಂಡಿತ್; ಅಬ್ಬರಿಸುತ್ತಾ ವಾದ ಮಾಡಿದ ಯಶ್

ಈ ಸಿನಿಮಾಗಾಗಿ ವಿಜಯ್ ಪ್ರಕಾಶ್ ಹಾಗೂ ವಾಸುಕಿ ವೈಭವ್ ಹಾಡಿರುವ ಗೀತೆಗಳು ಚಿತ್ರದ ಭಾವನಾತ್ಮಕ ಪ್ರಯಾಣವನ್ನು ಇನ್ನಷ್ಟು ಬಲಗೊಳಿಸುತ್ತವೆ ಎಂದು ಚಿತ್ರತಂಡ ಹೇಳಿಕೊಂಡಿದೆ. ‘ನಿನ್ನಲ್ಲಿ ನೀನು’ ಹಾಡಿಗೆ ಯುಟ್ಯೂಬ್​ನಲ್ಲಿ ಮೆಚ್ಚುಗೆ ಸಿಗುತ್ತಿದೆ. ಈ ಸಿನಿಮಾಗೆ ಚಂದ್ರಶೇಖರ್ ಅವರ ‘ರವಿ ಫಿಲಂಸ್’ ವಿತರಣಾ ಸಂಸ್ಥೆ ಕೈ ಜೋಡಿಸಿದೆ. ವಿವಿಧ ಸಂಬಂಧಗಳ ಮೌಲ್ಯದ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗಿದೆಯಂತೆ. ಕಿರಣ್ ರಾಜ್​ ಅವರ ಅಭಿಮಾನಿಗಳು ಈ ಸಿನಿಮಾವನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More