AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಣ್ ರಾಜ್ ನಟನೆಯ ಹೊಸ ಸಿನಿಮಾ ‘ಮೇಘ’ ಬಿಡುಗಡೆಗೆ ರೆಡಿ; ಕಾಜಲ್ ಕುಂದರ್ ನಾಯಕಿ

ಕಿರುತೆರೆಯಲ್ಲಿ ಫೇಮಸ್ ಆಗಿರುವ ನಟ ಕಿರಣ್ ರಾಜ್ ಅವರು ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕೆಲವು ವಾರಗಳ ಹಿಂದೆ ಅವರ ‘ರಾನಿ’ ಸಿನಿಮಾ ಬಿಡುಗಡೆ ಆಗಿತ್ತು. ಈಗ ಅವರ ಇನ್ನೊಂದು ಹೊಸ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ‘ಮೇಘ’ ಎಂಬುದು ಈ ಸಿನಿಮಾದ ಟೈಟಲ್​. ಈ ಚಿತ್ರದಲ್ಲಿ ಕಿರಣ್ ರಾಜ್ ಅವರಿಗೆ ಜೋಡಿಯಾಗಿ ಕಾಜಲ್ ಕುಂದರ್​ ಅವರು ನಟಿಸಿದ್ದಾರೆ.

ಕಿರಣ್ ರಾಜ್ ನಟನೆಯ ಹೊಸ ಸಿನಿಮಾ ‘ಮೇಘ’ ಬಿಡುಗಡೆಗೆ ರೆಡಿ; ಕಾಜಲ್ ಕುಂದರ್ ನಾಯಕಿ
ಕಿರಣ್ ರಾಜ್​
ಮದನ್​ ಕುಮಾರ್​
|

Updated on: Nov 05, 2024 | 9:35 PM

Share

ನಟ ಕಿರಣ್ ರಾಜ್ ಅವರು ‘ಕನ್ನಡತಿ’ ಸೀರಿಯಲ್ ಮೂಲಕ ಜನಪ್ರಿಯತೆ ಪಡೆದರು. ಈಗ ಅವರು ಸೀರಿಯಲ್ ಬದಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ಹೊಸ ಸಿನಿಮಾ ‘ಮೇಘ’ ಬಿಡುಗಡೆಗೆ ಸಿದ್ಧವಾಗಿದೆ. ಚರಣ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಕಿರಣ್ ರಾಜ್ ಹಾಗೂ ಕಾಜಲ್ ಕುಂದರ್ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ‘ಮೇಘ’ ಸಿನಿಮಾದಲ್ಲಿ ನಿಜವಾದ ಸ್ನೇಹ ಮತ್ತು ಪ್ರೀತಿಯ ನಡುವೆ ಇರುವ ಸಣ್ಣ ವ್ಯತ್ಯಾಸವನ್ನು ತಿಳಿಸುವ ಕಥೆ ಇದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಶೀಘ್ರದಲ್ಲೇ ಈ ಸಿನಿಮಾ ಬಿಡುಗಡೆ ಆಗಿದೆ.

‘ಕೃಷಿ ಪ್ರೊಡಕ್ಷನ್ಸ್’ ಸಂಸ್ಥಾಪಕರಾದ ಯತೀಶ್ ಹೆಚ್.ಆರ್, ಯತೀಶ್ ಆರ್.ಜಿ ಹಾಗೂ ರಮೇಶ್ ಎಚ್.ಎನ್ ಅವರ ಸಹಕಾರದೊಂದಿಗೆ ಪ್ರತಿ ವರ್ಷ ತಲಾ ಒಂದು ಉತ್ತಮವಾದ ಸಿನಿಮಾವನ್ನು ನಿರ್ಮಾಣ ಮಾಡಲು ಸಂಕಲ್ಪ ಹೊಂದಿದ್ದಾರೆ. ‘ಕೃಷಿ ಪ್ರೊಡಕ್ಷನ್ಸ್’ ಸಂಸ್ಥೆಯ ಚೊಚ್ಚಲ ಸಿನಿಮಾವಾಗಿ ‘ಮೇಘ’ ಮೂಡಿಬಂದಿದೆ. ಕಿರಣ್ ರಾಜ್ ಮತ್ತು ಕಾಜಲ್ ಕುಂದರ್ ಜೊತೆ ರಾಜೇಶ್ ನಟರಂಗ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೀರೋ ತಂದೆಯ ಪಾತ್ರವನ್ನು ಅವರಿಗೆ ನೀಡಲಾಗಿದೆ.

‘ಮೇಘ’ ಸಿನಿಮಾದಲ್ಲಿ ಶೋಭರಾಜ್, ಸುಂದರ್ ವೀಣಾ, ಸಂಗೀತಾ, ಹನುಮಂತೇಗೌಡ, ಗಿರೀಶ್ ಶಿವಣ್ಣ, ತರಂಗ ವಿಶ್ವ ಮುಂತಾದ ಕಲಾವಿದರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಭಾವನಾತ್ಮಕವಾಗಿ ಕಥೆ ಇರಲಿದೆ. ಡಾ. ವಿ. ನಾಗೇಂದ್ರ ಪ್ರಸಾದ್ ಅವರು ಎರಡು ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಜೋಯಲ್ ಸಕ್ಕರಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಫ್ರಾಂಕ್ಲಿನ್ ರಾಕಿ ಅವರ ಹಿನ್ನೆಲೆ ಸಂಗೀತ ಈ ಸಿನಿಮಾಗೆ ಇದೆ.

ಇದನ್ನೂ ಓದಿ: ಕೋರ್ಟ್​ ಕಟಕಟೆಯಲ್ಲಿ ರಾಧಿಕಾ ಪಂಡಿತ್; ಅಬ್ಬರಿಸುತ್ತಾ ವಾದ ಮಾಡಿದ ಯಶ್

ಈ ಸಿನಿಮಾಗಾಗಿ ವಿಜಯ್ ಪ್ರಕಾಶ್ ಹಾಗೂ ವಾಸುಕಿ ವೈಭವ್ ಹಾಡಿರುವ ಗೀತೆಗಳು ಚಿತ್ರದ ಭಾವನಾತ್ಮಕ ಪ್ರಯಾಣವನ್ನು ಇನ್ನಷ್ಟು ಬಲಗೊಳಿಸುತ್ತವೆ ಎಂದು ಚಿತ್ರತಂಡ ಹೇಳಿಕೊಂಡಿದೆ. ‘ನಿನ್ನಲ್ಲಿ ನೀನು’ ಹಾಡಿಗೆ ಯುಟ್ಯೂಬ್​ನಲ್ಲಿ ಮೆಚ್ಚುಗೆ ಸಿಗುತ್ತಿದೆ. ಈ ಸಿನಿಮಾಗೆ ಚಂದ್ರಶೇಖರ್ ಅವರ ‘ರವಿ ಫಿಲಂಸ್’ ವಿತರಣಾ ಸಂಸ್ಥೆ ಕೈ ಜೋಡಿಸಿದೆ. ವಿವಿಧ ಸಂಬಂಧಗಳ ಮೌಲ್ಯದ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗಿದೆಯಂತೆ. ಕಿರಣ್ ರಾಜ್​ ಅವರ ಅಭಿಮಾನಿಗಳು ಈ ಸಿನಿಮಾವನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ