AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುದುರೆ ಏರಿ ರೇಸ್ ಶುರು ಮಾಡಿದ ಕಿರಣ್ ರಾಜ್; ಹೊಸ ಸಿನಿಮಾ ‘ಜಾಕಿ 42’

‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆದ ಕಿರಣ್ ರಾಜ್ ಅವರು ಸಿನಿಮಾಗಳಲ್ಲೂ ಬ್ಯುಸಿ ಆಗಿದ್ದಾರೆ. ಅವರ ಹೊಸ ಸಿನಿಮಾದ ಶೀರ್ಷಿಕೆ ಬಹಿರಂಗ ಆಗಿದೆ. ‘ಜಾಕಿ 42’ ಸಿನಿಮಾದಲ್ಲಿ ಕಿರಣ್ ರಾಜ್ ಅವರಿಗೆ ಡಿಫರೆಂಟ್ ಪಾತ್ರ ಇರಲಿದೆ. ‘ರಾನಿ’ ಸಿನಿಮಾ ಖ್ಯಾತಿಯ ಗುರುತೇಜ್ ಶೆಟ್ಟಿ ಅವರು ‘ಜಾಕಿ 42’ ಸಿನಿಮಾಗೆ ನಿರ್ದೇಶಕ ಮಾಡಲಿದ್ದಾರೆ.

ಕುದುರೆ ಏರಿ ರೇಸ್ ಶುರು ಮಾಡಿದ ಕಿರಣ್ ರಾಜ್; ಹೊಸ ಸಿನಿಮಾ ‘ಜಾಕಿ 42’
Kiran Raj
ಮದನ್​ ಕುಮಾರ್​
|

Updated on: Apr 03, 2025 | 9:57 PM

Share

ಕನ್ನಡದ ಕಿರುತೆರೆಯಲ್ಲಿ ನಟ ಕಿರಣ್ ರಾಜ್ (Kiran Raj) ಅವರು ಹೆಸರು ಮಾಡಿದ್ದಾರೆ. ‘ಕನ್ನಡತಿ’ (Kannadathi) ಸೀರಿಯಲ್ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತು. ಹಾಗಂತ ಕಿರಣ್ ರಾಜ್ ಅವರು ಕಿರುತೆರೆಗೆ ಮಾತ್ರ ಸೀಮಿತವಲ್ಲ. ಹಿರಿತೆರೆಯಲ್ಲಿ ಕೂಡ ಅವರು ಆ್ಯಕ್ಟೀವ್ ಆಗಿದ್ದಾರೆ. ಈಗಾಗಲೇ ಒಂದಷ್ಟು ಸಿನಿಮಾಗಳನ್ನು ಮಾಡಿರುವ ಅವರು ಈಗ ಹೊಸ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಆ ಸಿನಿಮಾ ಬಗ್ಗೆ ಮಾಹಿತಿ ಹೊರಬಿದ್ದಿದೆ. ಕಿರಣ್ ರಾಜ್ ನಟಿಸಲಿರುವ ಹೊಸ ಸಿನಿಮಾಗೆ ‘ಜಾಕಿ 42’ (Jockey 42) ಎಂದು ಶೀರ್ಷಿಕೆ ಇಡಲಾಗಿದೆ.

ಈ ಮೊದಲು ಕಿರಣ್ ರಾಜ್ ಅವರು ‘ರಾನಿ’ ಸಿನಿಮಾ ಮಾಡಿದ್ದರು. ಆ ಸಿನಿಮಾಗೆ ನಿರ್ದೇಶಕ ಗುರುತೇಜ್ ಶೆಟ್ಟಿ ಅವರು ಆ್ಯಕ್ಷನ್-ಕಟ್ ಹೇಳಿದ್ದರು. ಈಗ ಮತ್ತೆ ಕಿರಣ್ ರಾಜ್​ ಮತ್ತು ಗುರುತೇಜ್ ಶೆಟ್ಟಿ ಒಂದಾಗಿದ್ದಾರೆ. ಹೌದು, ‘ಜಾಕಿ 42’ ಸಿನಿಮಾಗೆ ಗುರುತೇಜ್ ಶೆಟ್ಟಿ ಅವರು ನಿರ್ದೇಶನ ಮಾಡಲಿದ್ದಾರೆ. ‘ರಾನಿ’ ಸಿನಿಮಾದಲ್ಲಿ ಲಾಂಗ್ ಹಿಡಿದು ಮಾಸ್ ಅವತಾರ ತಾಳಿದ್ದ ಕಿರಣ್ ರಾಜ್ ಅವರು ‘ಜಾಕಿ 42’ ಚಿತ್ರದಲ್ಲಿ ಕುದುರೆ ಏರಿ ಜಾಕಿ ಆಗಲಿದ್ದಾರೆ.

‘ಜಾಕಿ 42’ ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದೆ. ಅಭಿಮಾನಿಗಳ ಕುತೂಹಲ ಹೆಚ್ಚಿಸುವಲ್ಲಿ ಈ ಪೋಸ್ಟರ್ ಯಶಸ್ವಿ ಆಗಿದೆ. ‘ರಾನಿ’ ಸಿನಿಮಾಗೆ ಕೆಲಸ ಮಾಡಿದ್ದ ತಂತ್ರಜ್ಞರ ತಂಡವೇ ಈಗ ‘ಜಾಕಿ 42’ ಚಿತ್ರದಲ್ಲಿ ಕೆಲಸ ಮಾಡಲಿದೆ. ರಾಘವೇಂದ್ರ ಬಿ. ಕೋಲಾರ ಅವರು ಛಾಯಾಗ್ರಹಣ ಮಾಡಲಿದ್ದಾರೆ. ಸತೀಶ್ ಅವರು ಕಲಾ ನಿರ್ದೇಶನ ಮಾಡಲಿದ್ದಾರೆ. ಉಮೇಶ ಆರ್.ಬಿ. ಅವರು ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ.

ಇದನ್ನೂ ಓದಿ
Image
ಸೀರಿಯಲ್ ಟಿಆರ್​ಪಿಯಲ್ಲಿ ಈ ಧಾರಾವಾಹಿಯೇ ನಂಬರ್ 1; ದಾಖಲೆಗಳೆಲ್ಲ ಉಡೀಸ್
Image
‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ನಿಲ್ಲಿಸಲು ಬೇಡಿಕೆ ಇಟ್ಟ ವೀಕ್ಷಕರು; ಕಾರಣ?
Image
ಸಿಹಿಯ ಆತ್ಮ ಹಿಡಿದುಕೊಂಡ ಅಘೋರಿ; ಪ್ರಯಾಗ್​ರಾಜ್​​ನಲ್ಲಿ ‘ಸೀತಾ ರಾಮ’ ತಂಡ
Image
ತ್ರಿವಿಕ್ರಂ ಪಾಲಿಗೆ ಒಲಿದ ಅದೃಷ್ಟ; ಹೊಸ ಸೀರಿಯಲ್​ಗೆ ಹೀರೋ ಆದ ನಟ

ಭಾರತಿ ಸತ್ಯನಾರಾಯಣ‌ ಅವರು ‘ಗೋಲ್ಡನ್ ಗೇಟ್ ಸ್ಟುಡಿಯೋಸ್’ ಮೂಲಕ ‘ಜಾಕಿ 42’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಇದು ಕಮರ್ಷಿಯಲ್ ಸಿನಿಮಾವಾಗಿದ್ದು, ಶೀರ್ಷಿಕೆಯೇ ಸೂಚಿಸುವಂತೆ ಹಾರ್ಸ್ ರೇಸ್ ಹಿನ್ನೆಲೆಯ ಕಥೆ ಇರಲಿದೆ. ಇದರೊಳಗೆ ಲವ್, ಫ್ಯಾಮಿಲಿ ಸೆಂಟಿಮೆಂಟ್, ಕಾಮಿಡಿ ಕೂಡ ಇರಲಿದೆ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಜೀ ಕನ್ನಡಕ್ಕೆ ಬಂದ ಕಿರಣ್ ರಾಜ್; ಬರುತ್ತಿದೆ ಹೊಸ ಧಾರಾವಾಹಿ ‘ಕರ್ಣ’

ಮೇ 15ರಂದು ‘ಜಾಕಿ 42’ ಸಿನಿಮಾದ ಶೂಟಿಂಗ್ ಆರಂಭ ಆಗಲಿದೆ. ಬೆಂಗಳೂರು, ಮೈಸೂರು ಹಾಗೂ ವಿದೇಶದಲ್ಲಿ ಚಿತ್ರೀಕರಣ ಮಾಡಲು ಪ್ಲ್ಯಾನ್ ಸಿದ್ಧವಾಗಿದೆ. ಟೈಟಲ್ ಪೋಸ್ಟರ್ ಮೂಲಕ ಪ್ರೇಕ್ಷಕರ ಗಮನ ಸೆಳೆಯಲಾಗಿದೆ. ಕಿರಣ್ ರಾಜ್​ ಜೊತೆ ಇನ್ನೂ ಯಾರೆಲ್ಲ ನಟಿಸಲಿದ್ದಾರೆ ಎಂಬ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಚಿತ್ರತಂಡ ಬಿಟ್ಟುಕೊಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು