Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುದುರೆ ಏರಿ ರೇಸ್ ಶುರು ಮಾಡಿದ ಕಿರಣ್ ರಾಜ್; ಹೊಸ ಸಿನಿಮಾ ‘ಜಾಕಿ 42’

‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆದ ಕಿರಣ್ ರಾಜ್ ಅವರು ಸಿನಿಮಾಗಳಲ್ಲೂ ಬ್ಯುಸಿ ಆಗಿದ್ದಾರೆ. ಅವರ ಹೊಸ ಸಿನಿಮಾದ ಶೀರ್ಷಿಕೆ ಬಹಿರಂಗ ಆಗಿದೆ. ‘ಜಾಕಿ 42’ ಸಿನಿಮಾದಲ್ಲಿ ಕಿರಣ್ ರಾಜ್ ಅವರಿಗೆ ಡಿಫರೆಂಟ್ ಪಾತ್ರ ಇರಲಿದೆ. ‘ರಾನಿ’ ಸಿನಿಮಾ ಖ್ಯಾತಿಯ ಗುರುತೇಜ್ ಶೆಟ್ಟಿ ಅವರು ‘ಜಾಕಿ 42’ ಸಿನಿಮಾಗೆ ನಿರ್ದೇಶಕ ಮಾಡಲಿದ್ದಾರೆ.

ಕುದುರೆ ಏರಿ ರೇಸ್ ಶುರು ಮಾಡಿದ ಕಿರಣ್ ರಾಜ್; ಹೊಸ ಸಿನಿಮಾ ‘ಜಾಕಿ 42’
Kiran Raj
Follow us
ಮದನ್​ ಕುಮಾರ್​
|

Updated on: Apr 03, 2025 | 9:57 PM

ಕನ್ನಡದ ಕಿರುತೆರೆಯಲ್ಲಿ ನಟ ಕಿರಣ್ ರಾಜ್ (Kiran Raj) ಅವರು ಹೆಸರು ಮಾಡಿದ್ದಾರೆ. ‘ಕನ್ನಡತಿ’ (Kannadathi) ಸೀರಿಯಲ್ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತು. ಹಾಗಂತ ಕಿರಣ್ ರಾಜ್ ಅವರು ಕಿರುತೆರೆಗೆ ಮಾತ್ರ ಸೀಮಿತವಲ್ಲ. ಹಿರಿತೆರೆಯಲ್ಲಿ ಕೂಡ ಅವರು ಆ್ಯಕ್ಟೀವ್ ಆಗಿದ್ದಾರೆ. ಈಗಾಗಲೇ ಒಂದಷ್ಟು ಸಿನಿಮಾಗಳನ್ನು ಮಾಡಿರುವ ಅವರು ಈಗ ಹೊಸ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಆ ಸಿನಿಮಾ ಬಗ್ಗೆ ಮಾಹಿತಿ ಹೊರಬಿದ್ದಿದೆ. ಕಿರಣ್ ರಾಜ್ ನಟಿಸಲಿರುವ ಹೊಸ ಸಿನಿಮಾಗೆ ‘ಜಾಕಿ 42’ (Jockey 42) ಎಂದು ಶೀರ್ಷಿಕೆ ಇಡಲಾಗಿದೆ.

ಈ ಮೊದಲು ಕಿರಣ್ ರಾಜ್ ಅವರು ‘ರಾನಿ’ ಸಿನಿಮಾ ಮಾಡಿದ್ದರು. ಆ ಸಿನಿಮಾಗೆ ನಿರ್ದೇಶಕ ಗುರುತೇಜ್ ಶೆಟ್ಟಿ ಅವರು ಆ್ಯಕ್ಷನ್-ಕಟ್ ಹೇಳಿದ್ದರು. ಈಗ ಮತ್ತೆ ಕಿರಣ್ ರಾಜ್​ ಮತ್ತು ಗುರುತೇಜ್ ಶೆಟ್ಟಿ ಒಂದಾಗಿದ್ದಾರೆ. ಹೌದು, ‘ಜಾಕಿ 42’ ಸಿನಿಮಾಗೆ ಗುರುತೇಜ್ ಶೆಟ್ಟಿ ಅವರು ನಿರ್ದೇಶನ ಮಾಡಲಿದ್ದಾರೆ. ‘ರಾನಿ’ ಸಿನಿಮಾದಲ್ಲಿ ಲಾಂಗ್ ಹಿಡಿದು ಮಾಸ್ ಅವತಾರ ತಾಳಿದ್ದ ಕಿರಣ್ ರಾಜ್ ಅವರು ‘ಜಾಕಿ 42’ ಚಿತ್ರದಲ್ಲಿ ಕುದುರೆ ಏರಿ ಜಾಕಿ ಆಗಲಿದ್ದಾರೆ.

‘ಜಾಕಿ 42’ ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದೆ. ಅಭಿಮಾನಿಗಳ ಕುತೂಹಲ ಹೆಚ್ಚಿಸುವಲ್ಲಿ ಈ ಪೋಸ್ಟರ್ ಯಶಸ್ವಿ ಆಗಿದೆ. ‘ರಾನಿ’ ಸಿನಿಮಾಗೆ ಕೆಲಸ ಮಾಡಿದ್ದ ತಂತ್ರಜ್ಞರ ತಂಡವೇ ಈಗ ‘ಜಾಕಿ 42’ ಚಿತ್ರದಲ್ಲಿ ಕೆಲಸ ಮಾಡಲಿದೆ. ರಾಘವೇಂದ್ರ ಬಿ. ಕೋಲಾರ ಅವರು ಛಾಯಾಗ್ರಹಣ ಮಾಡಲಿದ್ದಾರೆ. ಸತೀಶ್ ಅವರು ಕಲಾ ನಿರ್ದೇಶನ ಮಾಡಲಿದ್ದಾರೆ. ಉಮೇಶ ಆರ್.ಬಿ. ಅವರು ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ.

ಇದನ್ನೂ ಓದಿ
Image
ಸೀರಿಯಲ್ ಟಿಆರ್​ಪಿಯಲ್ಲಿ ಈ ಧಾರಾವಾಹಿಯೇ ನಂಬರ್ 1; ದಾಖಲೆಗಳೆಲ್ಲ ಉಡೀಸ್
Image
‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ನಿಲ್ಲಿಸಲು ಬೇಡಿಕೆ ಇಟ್ಟ ವೀಕ್ಷಕರು; ಕಾರಣ?
Image
ಸಿಹಿಯ ಆತ್ಮ ಹಿಡಿದುಕೊಂಡ ಅಘೋರಿ; ಪ್ರಯಾಗ್​ರಾಜ್​​ನಲ್ಲಿ ‘ಸೀತಾ ರಾಮ’ ತಂಡ
Image
ತ್ರಿವಿಕ್ರಂ ಪಾಲಿಗೆ ಒಲಿದ ಅದೃಷ್ಟ; ಹೊಸ ಸೀರಿಯಲ್​ಗೆ ಹೀರೋ ಆದ ನಟ

ಭಾರತಿ ಸತ್ಯನಾರಾಯಣ‌ ಅವರು ‘ಗೋಲ್ಡನ್ ಗೇಟ್ ಸ್ಟುಡಿಯೋಸ್’ ಮೂಲಕ ‘ಜಾಕಿ 42’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಇದು ಕಮರ್ಷಿಯಲ್ ಸಿನಿಮಾವಾಗಿದ್ದು, ಶೀರ್ಷಿಕೆಯೇ ಸೂಚಿಸುವಂತೆ ಹಾರ್ಸ್ ರೇಸ್ ಹಿನ್ನೆಲೆಯ ಕಥೆ ಇರಲಿದೆ. ಇದರೊಳಗೆ ಲವ್, ಫ್ಯಾಮಿಲಿ ಸೆಂಟಿಮೆಂಟ್, ಕಾಮಿಡಿ ಕೂಡ ಇರಲಿದೆ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಜೀ ಕನ್ನಡಕ್ಕೆ ಬಂದ ಕಿರಣ್ ರಾಜ್; ಬರುತ್ತಿದೆ ಹೊಸ ಧಾರಾವಾಹಿ ‘ಕರ್ಣ’

ಮೇ 15ರಂದು ‘ಜಾಕಿ 42’ ಸಿನಿಮಾದ ಶೂಟಿಂಗ್ ಆರಂಭ ಆಗಲಿದೆ. ಬೆಂಗಳೂರು, ಮೈಸೂರು ಹಾಗೂ ವಿದೇಶದಲ್ಲಿ ಚಿತ್ರೀಕರಣ ಮಾಡಲು ಪ್ಲ್ಯಾನ್ ಸಿದ್ಧವಾಗಿದೆ. ಟೈಟಲ್ ಪೋಸ್ಟರ್ ಮೂಲಕ ಪ್ರೇಕ್ಷಕರ ಗಮನ ಸೆಳೆಯಲಾಗಿದೆ. ಕಿರಣ್ ರಾಜ್​ ಜೊತೆ ಇನ್ನೂ ಯಾರೆಲ್ಲ ನಟಿಸಲಿದ್ದಾರೆ ಎಂಬ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಚಿತ್ರತಂಡ ಬಿಟ್ಟುಕೊಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ