AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangli: ಕನ್ನಡಕ್ಕೆ ಬಂದ ಮಂಗ್ಲಿ! ‘ಕಣ್ಣೇ ಅದಿರಿಂದಿ..’ ಬಳಿಕ ‘ಕರಿಯಾ ಐ ಲವ್​ ಯೂ’ ಎಂದ ಸೆನ್ಸೇಷನಲ್​ ಸಿಂಗರ್​

Singer Mangli | Satyavathi: ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ ಈಗ ಸ್ಯಾಂಡಲ್​ವುಡ್​ಗೆ ಕಾಲಿಟ್ಟಿದ್ದಾರೆ. ‘ಕಣ್ಣೇ ಅದಿರಿಂದಿ..’ ಸೂಪರ್​ ಹಿಟ್​ ಆದ ಬಳಿಕ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಬಂದಿದೆ.

Mangli: ಕನ್ನಡಕ್ಕೆ ಬಂದ ಮಂಗ್ಲಿ! ‘ಕಣ್ಣೇ ಅದಿರಿಂದಿ..’ ಬಳಿಕ ‘ಕರಿಯಾ ಐ ಲವ್​ ಯೂ’ ಎಂದ ಸೆನ್ಸೇಷನಲ್​ ಸಿಂಗರ್​
ಕರಿಯಾ ಐ ಲವ್​ ಯೂ ಚಿತ್ರತಂಡದ ಜೊತೆ ಗಾಯಕಿ ಮಂಗ್ಲಿ
ಮದನ್​ ಕುಮಾರ್​
| Edited By: |

Updated on:Apr 05, 2021 | 11:25 AM

Share

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾದ ತೆಲುಗು ಅವತರಣಿಕೆಯ ‘ಕಣ್ಣೇ ಅದಿರಿಂದಿ’ ಹಾಡು ಯಾವ ಮಟ್ಟಕ್ಕೆ ಜನಪ್ರಿಯ ಆಯಿತು ಎಂಬುದನ್ನು ಹೊಸದಾಗಿ ಹೇಳಬೇಕಾಗಿಲ್ಲ. ಆ ಗೀತೆ ಬಿಡುಗಡೆ ಆದ ಬಳಿಕ ಗಾಯಕಿ ಮಂಗ್ಲಿ ಅವರ ಖ್ಯಾತಿ ಕರ್ನಾಟಕದಲ್ಲಿ ಹೆಚ್ಚಾಯಿತು. ರಾಬರ್ಟ್​ ಸಿನಿಮಾದ ಪ್ರೀ ರಿಲೀಸ್​ ಇವೆಂಟ್​ನ ವೇದಿಕೆಯಲ್ಲಿ ಮಂಗ್ಲಿ ಹಾಡಿದ್ದು ಸಿಕ್ಕಾಪಟ್ಟೆ ವೈರಲ್​ ಆಯಿತು. ಅದರಿಂದಾಗಿ ಮಂಗ್ಲಿ ಅಭಿಮಾನಿಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆ ಆಯಿತು. ಹಾಗಾದರೆ ಅವರು ಕನ್ನಡದಲ್ಲಿ ಹಾಡುವುದು ಯಾವಾಗ ಎಂಬ ಪ್ರಶ್ನೆ ಇತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

ಮಂಗ್ಲಿ ಅವರನ್ನು ಕನ್ನಡಕ್ಕೆ ಕರೆತರುವ ಪ್ರಯತ್ನ ಈಗ ಯಶಸ್ವಿ ಆಗಿದೆ. ‘ಕರಿಯಾ ಐ ಲವ್​ ಯೂ’ ಎಂಬ ಸಿನಿಮಾದ ಒಂದು ಹಾಡಿಗೆ ಮಂಗ್ಲಿ ಧ್ವನಿ ನೀಡಿದ್ದಾರೆ. ‘ಬಿಟ್​ ಬಂದ್​ ಹಳ್ಳಿಯಿಂದ ಬಿಟ್ಯಾಕ್​ ಬಂದೆ..’ ಎನ್ನುವ ಗೀತೆ ಅವರ ಕಂಠದಲ್ಲಿ ಮೂಡಿಬಂದಿದೆ. ಕೆಲವೇ ದಿನಗಳ ಹಿಂದೆ ಈ ಹಾಡಿನ ರೆಕಾರ್ಡಿಂಗ್​ ನಡೆದಿದೆ. ಯಾವಾಗ ರಿಲೀಸ್​ ಆಗಲಿದೆ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿ ಮೂಡಿದೆ.

ಲೆಜೆಂಡರಿ ಸಂಗೀತ ನಿರ್ದೇಶಕ ಹಂಸಲೇಖ ಅವರ ಶಿಷ್ಯ ಲೋಕೇಶ್​ ‘ಕರಿಯಾ ಐ ಲವ್​ ಯೂ’ ಸಿನಿಮಾಗೆ ಸಂಗೀತ ಸಂಯೋಜಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ಮಂಜುನಾಥ್​ ಅವರು ಮಂಗ್ಲಿಯನ್ನು ಕನ್ನಡಕ್ಕೆ ಕರೆತಂದವರು. ಮಂಜುನಾಥ್​ ಅವರೇ ಈ ಸಿನಿಮಾದ ಹೀರೋ. ಈ ಚಿತ್ರಕ್ಕೆ ತಿಪ್ಪೇಶ್​ ನಿರ್ದೇಶನ ಮಾಡಿದ್ದಾರೆ.

ಮಂಗ್ಲಿ ಅವರದ್ದು ಕಂಚಿನ ಕಂಠ. ಜಾನಪದ ಗೀತೆಗಳನ್ನು ತಮ್ಮದೇ ಶೈಲಿಯಲ್ಲಿ ಹೇಳುವ ಮೂಲಕ ಅವರು ಗುರುತಿಸಿಕೊಂಡಿದ್ದಾರೆ. ಅಂತಹ ಹಾಡುಗಳಿಗೆ ಅವರ ಧ್ವನಿ ವಿಶೇಷವಾಗಿ ಹೊಂದಿಕೆ ಆಗುತ್ತದೆ. ಈಗ ಅವರು ಹಾಡಿರುವ ‘ಬಿಟ್​ ಬಂದ್​ ಹಳ್ಳಿಯಿಂದ ಬಿಟ್ಯಾಕ್​ ಬಂದೆ..’ ಯಾವ ರೀತಿ ಇರಬಹುದು ಎಂಬ ಕೌತುಕ ಮೂಡಿದೆ.

ಪರಭಾಷೆಯಿಂದ ಅನೇಕ ಗಾಯಕರು ಕನ್ನಡದಲ್ಲಿ ಯಶಸ್ವಿ ಆಗಿದ್ದಾರೆ. ಕನ್ನಡಿಗರ ಮನ ಗೆದ್ದಿದ್ದಾರೆ. ಶ್ರೇಯಾ ಘೋಷಾಲ್​, ಸೋನು ನಿಗಮ್​ ಮುಂತಾದ ಗಾಯಕರ ರೀತಿಯೇ ಮಂಗ್ಲಿ ಕೂಡ ಕನ್ನಡದಲ್ಲಿ ಮಿಂಚುತ್ತಾರಾ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ‘ರಾಬರ್ಟ್​’ ಗಾಯಕಿ ಮಂಗ್ಲಿ ಹಾಡಿಗೆ ಕುಣಿದು ಕುಪ್ಪಳಿಸಿದ ಸದ್ಗುರು! ‘ಕಣ್ಣೇ ಅದಿರಿಂದಿ’ ಬಳಿಕ ಮತ್ತೊಮ್ಮೆ ಮೋಡಿ

(Kanne Adirindi singer Mangli new Kannada song in Kariya I Love You movie)

Published On - 11:09 am, Mon, 5 April 21

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ