AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50ನೇ ದಿನದತ್ತ ‘ಕನ್ನೇರಿ’ ಗೆಲುವಿನ ಹೆಜ್ಜೆ

ಚಿತ್ರದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಎಂ.ಕೆ.ಮಠ, ಅರುಣ್ ಸಾಗರ್, ಅನಿತಾ ಭಟ್, ಕರಿಸುಬ್ಬು, ಸರ್ದಾರ್ ಸತ್ಯ ಒಳಗೊಂಡ ಹಲವು ಕಲಾವಿದರ ತಾರಾಬಳಗವಿದೆ.

50ನೇ ದಿನದತ್ತ ‘ಕನ್ನೇರಿ’ ಗೆಲುವಿನ ಹೆಜ್ಜೆ
ಕನ್ನೇರಿ ಸಿನಿಮಾ
TV9 Web
| Edited By: |

Updated on:Apr 18, 2022 | 1:30 PM

Share

ನೀನಾಸಂ ಮಂಜು ನಿರ್ದೇಶನದ ‘ಕನ್ನೇರಿ’ ಸಿನಿಮಾ ಬಗ್ಗೆ ಈಗಾಗಲೇ ಎಲ್ಲರಿಗೂ ತಿಳಿದಿದೆ. ಪರಿಸರ, ಅದರೊಳಗೆ ಬದುಕು ಕಟ್ಟಿಕೊಂಡು ಉಸಿರಾಗಿಸಿಕೊಂಡ ಜನರ ಬಗ್ಗೆ, ನೆಲದ ಆಚಾರ, ಸಂಸ್ಕೃತಿ ಬಗ್ಗೆ, ಅಧಿಕಾರಿಗಳ ಅಧಿಕಾರದ ದರ್ಪ ಹೀಗೆ ಹಲವು ವಿಚಾರಗಳ ಮೇಲೆ ಬೆಳಕು ಚೆಲ್ಲುವ ಮಹಿಳಾ ಪ್ರಧಾನ ಚಿತ್ರ ಕನ್ನೇರಿ. ಅರಿವು ಮೂಡಿಸುವ, ಎಚ್ಚರಿಸುವ, ಪ್ರತಿಯೊಬ್ಬ ನೋಡುಗನನ್ನೂ ಯೋಚನೆಗೆ ಹಚ್ಚುವ ಈ ಚಿತ್ರ ಪ್ರೇಕ್ಷಕ ಪ್ರಭುಗಳ ಪ್ರೀತಿಗೆ ಪಾತ್ರವಾಗಿತ್ತು. ಸಿನಿಮಾ ಬಗ್ಗೆ ಉತ್ತಮ ವಿಮರ್ಶೆ ಕೇಳಿ ಬಂದಿತ್ತು. ಇದೇ ಪ್ರೀತಿಯಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತ 50ನೇ ದಿನದತ್ತ ಹೆಜ್ಜೆ ಇಟ್ಟಿದೆ ಕನ್ನೇರಿ ಸಿನಿಮಾ.

ನೈಜ ಘಟನೆ ಹಾಗೂ ಕಾದಂಬರಿಯಿಂದ ಸ್ಪೂರ್ತಿ ಪಡೆದ ‘ಕನ್ನೇರಿ’ ಚಿತ್ರದ ಸೂತ್ರಧಾರ ನೀನಾಸಂ ಮಂಜು. ಕಾಡುಗಳಲ್ಲಿ ಬದುಕು ಕಟ್ಟಿಕೊಂಡ ಜನರನ್ನು ಒಕ್ಕೆಲೆಬ್ಬಿಸಿ ಪಟ್ಟಣಕ್ಕೆ ಅಟ್ಟಿದಾಗ ಅದಕ್ಕೆ ಹೊಂದಿಕೊಳ್ಳಲು ಆಗದೇ ಪಡುವ ಪಡಿಪಾಟಲು. ನಗರದತ್ತ ದುಡಿಮೆಗೆ ಸೇರುವ ಹೆಣ್ಣುಮಕ್ಕಳ ಅಮಾಯಕತೆಯನ್ನು ಹೇಗೆಲ್ಲ ದುರ್ಬಳಕೆ ಮಾಡಿಕೊಳ್ಳಲಾಗುತ್ತೆ ಎನ್ನುವುದರ ಜೊತೆಗೆ ಸೂಕ್ಷ್ಮ ಸಂದೇಶ ಸಾರುವ ಕಥೆಯನ್ನು ಕನ್ನೇರಿ ಒಳಗೊಂಡಿದೆ. ಸಿನಿರಸಿಕರ ಮನಸ್ಸಿಗೆ ಹಿಡಿಸಿದ ಈ ಚಿತ್ರ ಉತ್ತರ ಕರ್ನಾಟಕ ಭಾಗದಲ್ಲಿ ಅಪಾರ ಪ್ರೀತಿಯನ್ನು ಗಳಿಸಿಕೊಂಡಿದೆ. ರಾಯಬಾಗದ ದತ್ತ ಚಿತ್ರಮಂದಿರದಲ್ಲಿ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತ 50ನೇ ದಿನದತ್ತ ಹೆಜ್ಜೆ ಹಾಕುತ್ತಿದೆ. ಇಲ್ಲಿನ ಜನರ ಪ್ರೀತಿ ಅಭಿಮಾನ ಕಂಡು ಸಿನಮಾ ತಂಡ ಕೂಡ ಸಂತಸ ವ್ಯಕ್ತಪಡಿಸಿದೆ.

ಚಿತ್ರದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಎಂ.ಕೆ.ಮಠ, ಅರುಣ್ ಸಾಗರ್, ಅನಿತಾ ಭಟ್, ಕರಿಸುಬ್ಬು, ಸರ್ದಾರ್ ಸತ್ಯ ಒಳಗೊಂಡ ಹಲವು ಕಲಾವಿದರ ತಾರಾಬಳಗವಿದೆ. ಕದ್ರಿ ಮಣಿಕಾಂತ್ ಸಂಗೀತವಿರುವ ಈ ಚಿತ್ರ ಬುಡ್ಡಿ ದೀಪ ಸಿನಿಮಾ ಹೌಸ್ ಬ್ಯಾನರ್ ನಡಿ ಪಿ.ಪಿ.ಹೆಬ್ಬಾರ್ ಹಾಗೂ ಚಂದ್ರಶೇಖರ್ ನಿರ್ಮಾಪಕರು.

ಇದನ್ನೂ ಓದಿ: ‘ಕೆಜಿಎಫ್ 2’ ಅಬ್ಬರದಿಂದ ಮಲ್ಟಿಪ್ಲೆಕ್ಸ್​ಗಳಲ್ಲಿ ‘ಬೀಸ್ಟ್​’ಗೆ ಸಿಗಲಿಲ್ಲ ಸ್ಕ್ರೀನ್​; ನಿರ್ಮಾಪಕನ ಅಸಮಾಧಾನ?

Sanjay Dutt: ಸತತ 2-3 ಗಂಟೆ ಕಣ್ಣೀರು ಹಾಕಿದ್ದ ‘ಕೆಜಿಎಫ್ 2’ ಅಧೀರ; ಕಾರಣವೇನು?

Published On - 1:26 pm, Mon, 18 April 22

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?