AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ‘ಕಾಂತಾರ 2’ ಶೂಟ್​ಗೆ ದಿನಾಂಕ ನಿಗದಿ? ಇಲ್ಲಿದೆ ರಿಷಬ್ ಶೆಟ್ಟಿ ಸಿನಿಮಾ ಕುರಿತ ಮಾಹಿತಿ

Kantara 2 Movie: ‘ಕಾಂತಾರ’ ಸಿನಿಮಾದ ಬಜೆಟ್ 15 ಕೋಟಿ ರೂಪಾಯಿ ದಾಟಲಿಲ್ಲ. ಆದರೆ, ಇದರ ಗಳಿಕೆ 400 ಕೋಟಿ ರೂಪಾಯಿ ಗಡಿಮುಟ್ಟಿದೆ. ಈ ಚಿತ್ರದ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ.

Rishab Shetty: ‘ಕಾಂತಾರ 2’ ಶೂಟ್​ಗೆ ದಿನಾಂಕ ನಿಗದಿ? ಇಲ್ಲಿದೆ ರಿಷಬ್ ಶೆಟ್ಟಿ ಸಿನಿಮಾ ಕುರಿತ ಮಾಹಿತಿ
ರಿಷಬ್
ರಾಜೇಶ್ ದುಗ್ಗುಮನೆ
|

Updated on:Jun 16, 2023 | 1:41 PM

Share

ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ, ನಟಿಸಿದ ‘ಕಾಂತಾರ’ ಸಿನಿಮಾ ಮಾಡಿದ ದಾಖಲೆ ತುಂಬಾನೇ ದೊಡ್ಡದು. ಈ ಚಿತ್ರ ಚಿಕ್ಕ ಬಜೆಟ್​ನಲ್ಲಿ ಸಿದ್ಧಗೊಂಡು ಭರ್ಜರಿ ಕಲೆಕ್ಷನ್ ಮಾಡಿತ್ತು. ಇದಕ್ಕೆ ಪ್ರೀಕ್ವೆಲ್ ಸಿದ್ಧಗೊಳ್ಳುವ ಬಗ್ಗೆ ಈ ಮೊದಲೇ ಘೋಷಣೆ ಆಗಿತ್ತು. ಇದರ ಸ್ಕ್ರಿಪ್ಟ್ ಕೆಲಸದಲ್ಲಿ ರಿಷಬ್ ಶೆಟ್ಟಿ ಬ್ಯುಸಿ ಇದ್ದರು. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್ ಒಂದು ಕೇಳಿ ಬರುತ್ತಿದೆ. ಆಗಸ್ಟ್ ತಿಂಗಳಲ್ಲಿ ಚಿತ್ರಕ್ಕೆ ಮುಹೂರ್ತ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ವಿಚಾರ ಕೇಳಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ.

‘ಕಾಂತಾರ’ ಸಿನಿಮಾದ ಬಜೆಟ್ 15 ಕೋಟಿ ರೂಪಾಯಿ ದಾಟಲಿಲ್ಲ. ಆದರೆ, ಇದರ ಗಳಿಕೆ 400 ಕೋಟಿ ರೂಪಾಯಿ ಗಡಿಮುಟ್ಟಿದೆ. ಈ ಮೂಲಕ ಸಿನಿಮಾದಿಂದ ನಿರ್ಮಾಪಕರು ದೊಡ್ಡ ಮಟ್ಟದ ಲಾಭ ಕಂಡಿದ್ದಾರೆ. ಈ ಕಾರಣಕ್ಕೆ ಚಿತ್ರಕ್ಕೆ ಎರಡನೇ ಪಾರ್ಟ್​ ಮಾಡಲು ರಿಷಬ್ ಶೆಟ್ಟಿ ಮುಂದೆ ಬಂದರು. ಮೂಲಗಳ ಪ್ರಕಾರ ಆಗಸ್ಟ್ 27ರಂದು ಸಿನಿಮಾಗೆ ಮುಹೂರ್ತ ನೆರವೇರುವ ಸಾಧ್ಯತೆ ಇದೆ. ಆ ಬಳಿಕ ಚಿತ್ರತಂಡ ನೇರವಾಗಿ ಶೂಟಿಂಗ್​ಗೆ ಇಳಿಯಲಿದೆ.

‘ಕಾಂತಾರ 2’ ಯಾವ ರೀತಿಯಲ್ಲಿ ಮೂಡಿಬರಬೇಕು ಎನ್ನುವ ಬಗ್ಗೆ ರಿಷಬ್ ಶೆಟ್ಟಿ ಅವರು ಸ್ಪಷ್ಟ ಕಲ್ಪನೆ ಇಟ್ಟುಕೊಂಡಿದ್ದಾರೆ. ಅದೇ ರೀತಿಯಲ್ಲಿ ಸಿನಿಮಾ ಕಟ್ಟಿಕೊಡಲಿದ್ದಾರೆ. ಬಜೆಟ್​ ವಿಚಾರದಲ್ಲಿ ಹೊಂಬಾಳೆ ಫಿಲ್ಮ್ಸ್​ ರಾಜಿ ಆಗುತ್ತಿಲ್ಲ. ಹೀಗಾಗಿ, ಅದ್ದೂರಿಯಾಗಿ ಸಿನಿಮಾ ಮೂಡಿಬರುತ್ತಿದೆ.

‘ನೀವು ನೋಡಿರೋದು ಎರಡನೇ ಭಾಗ. ಮೊದಲ ಭಾಗವನ್ನು ನಾನು ಕಟ್ಟಿಕೊಡುತ್ತಿದ್ದೇನೆ’ ಎಂದು ರಿಷಬ್ ಶೆಟ್ಟಿ ಈ ಮೊದಲು ಹೇಳಿದ್ದರು. ಈ ಮೂಲಕ ಪ್ರೀಕ್ವೆಲ್ ಮಾಡುತ್ತಿರುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದರು. ಈಗ ಸಿನಿಮಾ ಶೂಟಿಂಗ್ ಬಗ್ಗೆ ಹೊಸ ಮಾಹಿತಿ ಸಿಕ್ಕಿರುವ ವಿಚಾರ ಅಭಿಮಾನಿಗಳಿಗೆ ಖುಷಿ ತಂದಿದೆ.

ಇದನ್ನೂ ಓದಿ: ‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿಗೆ ಹೆಚ್ಚಾಯ್ತು ದೇವರ ಮೇಲಿನ ಭಕ್ತಿ

‘ಕಾಂತಾರ 2’ ಚಿತ್ರಕ್ಕಾಗಿ ಮಳೆಗಾಲದ ಅವಶ್ಯಕತೆ ಇದೆ ಎನ್ನಲಾಗುತ್ತಿದೆ. ಈ ಕಾರಣದಿಂದಲೇ ಆಗಸ್ಟ್-ಸೆಪ್ಟೆಂಬರ್​ ತಿಂಗಳನ್ನು ರಿಷಬ್​ ಆಯ್ಕೆ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಯಾರೆಲ್ಲ ನಟಿಸುತ್ತಾರೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:38 am, Fri, 16 June 23

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ