AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kishore: ದೈವದ ಕುರಿತ ಪೋಸ್ಟ್​ನಿಂದ ಕಿಶೋರ್​ ಟ್ವಿಟರ್​ ಖಾತೆ ಸಸ್ಪೆಂಡ್​ ಆಗಿಲ್ಲ; ಅಸಲಿ ಕಾರಣ ತಿಳಿಸಿದ ನಟ

Kishore Twitter Account: ‘ಟ್ವಿಟರ್ ಅಕೌಂಟ್ ಸಸ್ಪೆಂಡ್ ಆದದ್ದು ನನ್ನ ಯಾವ ಪೋಸ್ಟಿನಿಂದಲೂ ಅಲ್ಲ. ಡಿಸೆಂಬರ್ 20ರಂದು ಹ್ಯಾಕ್ ಮಾಡಲಾಗಿದ್ದರಿಂದ ಎಂದು ತಿಳಿದುಬಂದಿದೆ’ ಅಂತ ಕಿಶೋರ್​ ಸ್ಪಷ್ಟನೆ ನೀಡಿದ್ದಾರೆ.

Kishore: ದೈವದ ಕುರಿತ ಪೋಸ್ಟ್​ನಿಂದ ಕಿಶೋರ್​ ಟ್ವಿಟರ್​ ಖಾತೆ ಸಸ್ಪೆಂಡ್​ ಆಗಿಲ್ಲ; ಅಸಲಿ ಕಾರಣ ತಿಳಿಸಿದ ನಟ
ನಟ ಕಿಶೋರ್
TV9 Web
| Edited By: |

Updated on:Jan 04, 2023 | 7:02 PM

Share

‘ಕಾಂತಾರ’ (Kantara Movie) ಸಿನಿಮಾದ ನಟ ಕಿಶೋರ್​ ಅವರ ಟ್ವಿಟರ್​ ಖಾತೆ ಸಸ್ಪೆಂಡ್​ ಆಗಿದ್ದರ ಬಗ್ಗೆ ದೊಡ್ಡ ಸುದ್ದಿ ಆಗಿತ್ತು. ಅವರು ದೈವದ ಕುರಿತು ಮಾಡಿದ ಪೋಸ್ಟ್​ ಕಾರಣಕ್ಕಾಗಿ ಟ್ವಿಟರ್​ ಖಾತೆಯನ್ನು ಸಸ್ಪೆಂಡ್​ ಮಾಡಲಾಗಿದೆ ಎಂದು ಅನೇಕರು ನಂಬಿದ್ದಾರೆ. ಆ ಬಗ್ಗೆ ಸ್ವತಃ ಕಿಶೋರ್​ (Kantara Actor Kishore) ಅವರು ಈಗ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಟ್ವಿಟರ್​ ಅಕೌಂಟ್​ ಸಸ್ಪೆಂಡ್​ ಆಗಲು ಕಾರಣ ಏನು ಎಂಬುದನ್ನು ಅವರು ತಿಳಿಸಿದ್ದಾರೆ. ಈ ಕುರಿತು ಅವರು ಫೇಸ್​ಬುಕ್​ ಮತ್ತು ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ. ಕಿಶೋರ್​ ಅವರ ಟ್ವಿಟರ್​ ಖಾತೆ (Kishore Twitter Account) ಮೇಲೆ ಹ್ಯಾಕರ್​ಗಳ ಕಣ್ಣು ಬಿದ್ದಿದೆ. ಅಕೌಂಟ್​ ಸಸ್ಪೆಂಡ್​ ಆಗಲು ಇದು ಮುಖ್ಯ ಕಾರಣ ಎಂದು ಅವರು ತಿಳಿಸಿದ್ದಾರೆ.

‘ಕಾಂತಾರ’ ಸಿನಿಮಾದಲ್ಲಿ ಕಿಶೋರ್​ ಮಾಡಿದ ಪಾತ್ರ ಸಖತ್​ ಹೈಲೈಟ್​ ಆಗಿದೆ. ಅರಣ್ಯಾಧಿಕಾರಿಯಾಗಿ ಅವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ತುಳುನಾಡಿನ ದೈವದ ಬಗ್ಗೆ ತೋರಿಸಲಾಗಿದೆ. ಆ ದೈವಕ್ಕೆ ಅಪಮಾನ ಮಾಡಿದ ಯುವಕನೊಬ್ಬ ರಕ್ತಕಾರಿ ಸತ್ತಿದ್ದಾನೆ ಎಂಬ ಸುದ್ದಿಗೆ ಕಿಶೋರ್​ ಅವರು ಇತ್ತೀಚೆಗೆ ಪ್ರತಿಕ್ರಿಯೆ ನೀಡಿದ್ದರು. ಆದ್ದರಿಂದ ಅವರ ಟ್ವಿಟರ್​ ಅಕೌಂಟ್​ ಸಸ್ಪೆಂಡ್​ ಆಗಿದೆ ಎಂದೇ ಸುದ್ದಿ ಹಬ್ಬಿಸಲಾಗಿತ್ತು. ಆದರೆ ಅದು ನಿಜವಲ್ಲ ಎಂದು ಕಿಶೋರ್​ ಈಗ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: CM of Karnataka: ಮುಖ್ಯಮಂತ್ರಿಯ ಟ್ವಿಟರ್​ ಖಾತೆಯನ್ನೇ ಹ್ಯಾಕ್​ ಮಾಡಿದ ಕಿಡಿಗೇಡಿಗಳು

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

‘ಅನವಶ್ಯಕ ಊಹಾಪೋಹಗಳನ್ನು ತಡೆಯಲಿಕ್ಕಾಗಿಯಷ್ಟೆ. ನನ್ನ ಟ್ವಿಟರ್ ಅಕೌಂಟ್ ಸಸ್ಪೆಂಡ್ ಆದದ್ದು ನನ್ನ ಯಾವ ಪೋಸ್ಟಿನಿಂದಲೂ ಅಲ್ಲ. ಡಿಸೆಂಬರ್ 20ನೇ ತಾರೀಕು 2022ರಂದು ಹ್ಯಾಕ್ ಮಾಡಲಾಗಿದ್ದರಿಂದ ಎಂದು ತಿಳಿದುಬಂದಿದೆ. ತಕ್ಕ ಕ್ರಮ ಕೈಗೊಳ್ಳುವ ಭರವಸೆ ಟ್ವಿಟರ್ ಕೂಡ ಕೊಟ್ಟಿದೆ. ಎಲ್ಲರ ಕಾಳಜಿಗೆ ಧನ್ಯವಾದಗಳು’ ಎಂದು ಕಿಶೋರ್​ ಈಗ ಪೋಸ್ಟ್​ ಮಾಡಿದ್ದಾರೆ.

ವೈರಲ್​ ಆಗಿತ್ತು ಕಿಶೋರ್​ ಪೋಸ್ಟ್​:

‘ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ? ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೋ ವಾಟ್ಸಾಪಿನಲ್ಲಿ ಹರಿದು ಬಂತು. ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ. ಕೊಲ್ಲುವ ಶಕ್ತಿಯಿರುವ  ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ? ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ. ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ. ಸಿನಿಮಾವಾಗಲಿ ಪುರಾಣವಾಗಲಿ. ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ. ಅದರ ಹೆಸರಲ್ಲಿ ದ್ವೇಷವೂ’ ಎಂದು ಕಿಶೋರ್​ ಮಾಡಿದ ಪೋಸ್ಟ್​ ವೈರಲ್​ ಆದ ಬೆನ್ನಲ್ಲೇ ಟ್ವಿಟರ್​ ಖಾತೆಯ ಸಸ್ಪೆಂಡ್​ ಕುರಿತು ಊಹಾಪೋಹಗಳು ಹುಟ್ಟಿಕೊಂಡವು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:02 pm, Wed, 4 January 23

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ