Rishab Shetty: ಆಸ್ಕರ್​ಗೆ ಕಾಂತಾರ​ ಪೈಪೋಟಿ, ಕಮಲ್​ ಪತ್ರ ಸೇರಿದಂತೆ ಅನೇಕ ವಿಚಾರಕ್ಕೆ ರಿಷಬ್​ ಶೆಟ್ಟಿ ಪ್ರತಿಕ್ರಿಯೆ

| Updated By: ಮದನ್​ ಕುಮಾರ್​

Updated on: Jan 13, 2023 | 9:45 PM

Chikkaballapur Utsava | Rishab Shetty Interview: ಚಿಕ್ಕಬಳ್ಳಾಪುರ ಉತ್ಸವದಲ್ಲಿ ನಟ ರಿಷಬ್​ ಶೆಟ್ಟಿ ಭಾಗಿ ಆಗಿದ್ದಾರೆ. ಈ ವೇಳೆ ಅವರು ಟಿವಿ9 ಜೊತೆ ಎಕ್ಸ್​ಕ್ಲೂಸಿವ್​ ಆಗಿ ಮಾತನಾಡಿದ್ದಾರೆ.

Rishab Shetty: ಆಸ್ಕರ್​ಗೆ ಕಾಂತಾರ​ ಪೈಪೋಟಿ, ಕಮಲ್​ ಪತ್ರ ಸೇರಿದಂತೆ ಅನೇಕ ವಿಚಾರಕ್ಕೆ ರಿಷಬ್​ ಶೆಟ್ಟಿ ಪ್ರತಿಕ್ರಿಯೆ
ಚಿಕ್ಕಬಳ್ಳಾಪುರ ಉತ್ಸವದ ವೇಳೆ ಮಾತನಾಡಿದ ರಿಷಬ್ ಶೆಟ್ಟಿ
Follow us on

ನಟ ರಿಷಬ್​ ಶೆಟ್ಟಿ (Rishab Shetty) ಅವರು ‘ಕಾಂತಾರ’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಸೂಪರ್​ ಹಿಟ್​ ಆದ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಿತು. ಅನೇಕ ಸಮಾರಂಭಗಳಿಗೆ ಅವರು ಅತಿಥಿಯಾಗಿ ತೆರಳುತ್ತಿದ್ದಾರೆ. ಇಂದು (ಜ.13) ಚಿಕ್ಕಬಳ್ಳಾಪುರ ಉತ್ಸವದಲ್ಲಿ (Chikkaballapur Festival) ರಿಷಬ್​ ಶೆಟ್ಟಿ ಭಾಗಿ ಆಗಿದ್ದಾರೆ. ಈ ವೇಳೆ ‘ಟಿವಿ9 ಕನ್ನಡ’ದ ಜೊತೆ ಮಾತಿಗೆ ಸಿಕ್ಕ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ಕಾಂತಾರ’ (Kantara Movie) ಸಿನಿಮಾದ ಗೆಲುವು, ಆಸ್ಕರ್​ ಪ್ರಶಸ್ತಿ ಸ್ಪರ್ಧೆಗೆ ಅರ್ಹತೆ ಪಡೆದಿದ್ದು, ಮುಂದಿನ ಪ್ಲ್ಯಾನ್​.. ಹೀಗೆ ಹಲವು ವಿಷಯಗಳ ಬಗ್ಗೆ ಅವರು ಮಾತನಾಡಿದ್ದಾರೆ. ‘ಚಿಕ್ಕಬಳ್ಳಾಪುರ ಉತ್ಸವದಲ್ಲಿ ನಾವು ಭಾಗಿ ಆಗುತ್ತಿರುವುದು ಖುಷಿಯ ಸಂಗತಿ’ ಎಂದು ಅವರು ಹೇಳಿದ್ದಾರೆ.

ಕಮಲ್​ ಹಾಸನ್​ ಪತ್ರಕ್ಕೆ ರಿಷಬ್​ ಪ್ರತಿಕ್ರಿಯೆ:

‘ಕಾಂತಾರ’ ಚಿತ್ರಕ್ಕೆ ಕಮಲ್​ ಹಾಸನ್​, ರಜನಿಕಾಂತ್​ ಮುಂತಾದ ದಿಗ್ಗಜ ನಟರು ಮೆಚ್ಚುಗೆ ಸೂಚಿಸಿದ್ದಾರೆ. ಕಮಲ್​ ಹಾಸನ್​ ಅವರು ಪತ್ರ ಬರೆದಿದ್ದಾರೆ. ಆ ಬಗ್ಗೆ ರಿಷಬ್​ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ‘ಈ ನಟರಿಂದ ನನಗೆ ದೊಡ್ಡ ಸ್ಫೂರ್ತಿ ಸಿಕ್ಕಿದೆ. ಅವರ ಸಿನಿಮಾಗಳಿಗೆ ನಾನು ಅಭಿಮಾನಿಯಾಗಿ ಚಿತ್ರರಂಗಕ್ಕೆ ಬಂದೆ. ನಾವು ಆರಾಧಿಸುವ ನಟರಿಂದ ಮೆಚ್ಚುಗೆ ಸಿಕ್ಕಾಗ ಖುಷಿ ಆಗುತ್ತದೆ. ಮುಂದಿನ ಕೆಲಸಕ್ಕೆ ಒಂದು ಪಾಸಿಟಿವ್​ ಶಕ್ತಿ ಸಿಕ್ಕಂತೆ ಆಗಿದೆ’ ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: Kamal Haasan: ‘ನಿಮ್ಮ ಮುಂದಿನ ಚಿತ್ರದಿಂದ ಕಾಂತಾರ ಸಿನಿಮಾ ದಾಖಲೆ ಮುರಿಯಿರಿ’; ರಿಷಬ್​ ಶೆಟ್ಟಿಗೆ ಕಮಲ್​ ಹಾಸನ್​ ಸಲಹೆ

ಇದನ್ನೂ ಓದಿ
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

400 ಕೋಟಿ ರೂಪಾಯಿ ನಿರೀಕ್ಷೆ ಇರಲಿಲ್ಲ:

‘ಕಾಂತಾರ’ ಸಿನಿಮಾ ವಿಶ್ವಾದ್ಯಂತ 400 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿತು. ಆ ಬಗ್ಗೆ ನಿರೀಕ್ಷೆ ಇತ್ತಾ ಎಂಬ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ‘ನಾನು ಮೊದಲ ಸಿನಿಮಾದಿಂದಲೂ ನಿರೀಕ್ಷೆ ಇಟ್ಟುಕೊಂಡವನಲ್ಲ. ಕೆಲಸದ ಮೇಲೆ ನನ್ನ ಗಮನ ಇರುತ್ತದೆ’ ಎಂದು ರಿಷಬ್​ ಹೇಳಿದ್ದಾರೆ.

ಆಸ್ಕರ್​ ರೇಸ್​ ಬಗ್ಗೆ ರಿಷಬ್​ ಮಾತು:

‘ನಮಗೆ ನಮ್ಮ ಸರ್ಕಾರ ನೀಡುವ ರಾಷ್ಟ್ರ ಪ್ರಶಸ್ತಿಯೇ ದೊಡ್ಡ ಮನ್ನಣೆ. ಆಸ್ಕರ್​ ರೀತಿಯ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ಬಗ್ಗೆಯೂ ಗೌರವ ಇದೆ. ಅದಕ್ಕೆ ಅರ್ಹತೆ ಪಡೆದ ಸಿನಿಮಾಗಳಲ್ಲಿ ನಮ್ಮ ಸಿನಿಮಾ ಕೂಡ ಇದೆ ಎಂಬುದು ತಿಳಿದಾಗ ಖುಷಿ ಆಗುತ್ತದೆ. ನಾವು ಸಿನಿಮಾ ಮಾಡೋಕೆ ಆಗಲ್ಲ. ತಾನಾಗಿಯೇ ಆಗುತ್ತದೆ’ ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:45 pm, Fri, 13 January 23