Sapthami Gowda: ‘ಯುವ’ ಚಿತ್ರಕ್ಕೆ ಸಪ್ತಮಿ ಗೌಡ ನಾಯಕಿ: ‘ಹೊಂಬಾಳೆ ಫಿಲ್ಮ್ಸ್​’ ಜೊತೆ ಮತ್ತೆ ಕೈ ಜೋಡಿಸಿದ ‘ಕಾಂತಾರ’ ನಟಿ

|

Updated on: Mar 06, 2023 | 5:35 PM

Yuva Rajkumar | Hombale Films: ‘ಕಾಂತಾರ’ ಚಿತ್ರದ ಗೆಲುವಿನ ಬಳಿಕ ಸಪ್ತಮಿ ಗೌಡ ಅವರ ಜನಪ್ರಿಯತೆ ಹೆಚ್ಚಿತು. ಈಗ ‘ಯುವ’ ಚಿತ್ರಕ್ಕೆ ಅವರು ನಾಯಕಿ ಆಗಿದ್ದಾರೆ.

Sapthami Gowda: ‘ಯುವ’ ಚಿತ್ರಕ್ಕೆ ಸಪ್ತಮಿ ಗೌಡ ನಾಯಕಿ: ‘ಹೊಂಬಾಳೆ ಫಿಲ್ಮ್ಸ್​’ ಜೊತೆ ಮತ್ತೆ ಕೈ ಜೋಡಿಸಿದ ‘ಕಾಂತಾರ’ ನಟಿ
ಸಪ್ತಮಿ ಗೌಡ, ಯುವ ರಾಜ್​ಕುಮಾರ್​
Follow us on

ಡಾ. ರಾಜ್​ಕುಮಾರ್​ ಕುಟುಂಬದ ಹೊಸ ಪ್ರತಿಭೆ ಯುವ ರಾಜ್​ಕುಮಾರ್​ (Yuva Rajkumar) ಅವರ ‘ಯುವ’ ಸಿನಿಮಾ ಇತ್ತೀಚೆಗಷ್ಟೇ ಅನೌನ್ಸ್​ ಆಯಿತು. ಶೀರ್ಷಿಕೆ ಅನಾವರಣ ಆದ ಬೆನ್ನಲ್ಲೇ ಪಾತ್ರವರ್ಗದ ಬಗ್ಗೆಯೂ ಬಿಗ್​ ಅಪ್​ಡೇಟ್​ ಸಿಕ್ಕಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ಸಪ್ತಮಿ ಗೌಡ (Sapthami Gowda) ಅವರು ನಟಿಸಲಿದ್ದಾರೆ. ಚಿತ್ರತಂಡದಿಂದಲೇ ಈ ಬ್ರೇಕಿಂಗ್​ ನ್ಯೂಸ್​ ಹೊರಬಿದ್ದಿದೆ. ನಿರ್ದೇಶಕ ಸಂತೋಷ್​ ಆನಂದ್ ರಾಮ್​ ಅವರ ಸಾರಥ್ಯದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ‘ಹೊಂಬಾಳೆ ಫಿಲ್ಮ್ಸ್​’ ಬಂಡವಾಳ ಹೂಡುತ್ತಿದೆ. ‘ಯುವ’ ಚಿತ್ರಕ್ಕೆ (Yuva Movie) ಆಯ್ಕೆ ಆಗಿರುವುದಕ್ಕೆ ಸಪ್ತಮಿ ಗೌಡ ಅವರು ಖುಷಿ ಆಗಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

‘ಕಾಂತಾರ’ ಚಿತ್ರದಿಂದ ಸಪ್ತಮಿ ಗೌಡ ಅವರ ಜನಪ್ರಿಯತೆ ಹೆಚ್ಚಿತು. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರು ಫೇಮಸ್​ ಆದರು. ಆ ಬಳಿಕ ಸಾಲು ಸಾಲು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆ ಪೈಕಿ ಕೆಲವು ಬೆಸ್ಟ್​ ಪ್ರಾಜೆಕ್ಟ್​ಗಳನ್ನು ಸಪ್ತಮಿ ಗೌಡ ಆಯ್ದುಕೊಳ್ಳುತ್ತಿದ್ದಾರೆ. ಈಗ ಅವರು ಯುವ ರಾಜ್​ಕುಮಾರ್​ಗೆ ಜೋಡಿಯಾಗಲು ಒಪ್ಪಿದ್ದಾರೆ. ಇಬ್ಬರ ಕೆಮಿಸ್ಟ್ರಿ ಹೇಗಿರಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ
‘ಇನ್ನೂ ರೊಮ್ಯಾನ್ಸ್ ಮಾಡ್ಬೇಕು ರಿಷಬ್​’; ಸೆಟ್​ನಲ್ಲಿ ಪ್ರಗತಿ ಹೇಳುತ್ತಿದ್ದ ಮಾತಿದು
ಕರಾವಳಿ ಕನ್ನಡತಿ ಆದ ಪ್ರಕ್ರಿಯೆಯನ್ನು ವಿವರಿಸಿದ ನಟಿ ಸಪ್ತಮಿ ಗೌಡ
Sapthami Gowda: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ಹೆಚ್ಚಿತು ನಟಿ ಸಪ್ತಮಿ ಗೌಡ ಡಿಮ್ಯಾಂಡ್​
Sapthami Gowda: ಜನರ ಮಧ್ಯೆ ‘ಕಾಂತಾರ’ ನಾಯಕಿ ಸಪ್ತಮಿ ಗೌಡ ಬಿಂದಾಸ್​ ಡ್ಯಾನ್ಸ್​; ಇಲ್ಲಿದೆ ವಿಡಿಯೋ

ಇದನ್ನೂ ಓದಿ: Saptami Gowda: ಮಾಲ್ಡೀವ್ಸ್​ಗೆ ಹಾರಿದ ಸಪ್ತಮಿ ಗೌಡ, ಇಲ್ಲಿವೆ ಚಿತ್ರಗಳು

ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಇಡೀ ದೇಶದಲ್ಲೇ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ‘ಹೊಂಬಾಳೆ ಫಿಲ್ಮ್ಸ್​’ ಗುರುತಿಸಿಕೊಂಡಿದೆ. ‘ಕಾಂತಾರ’ ಚಿತ್ರಕ್ಕೆ ಬಂಡವಾಳ ಹೂಡಿದ್ದು ಇದೇ ಸಂಸ್ಥೆ. ಈ ಬ್ಯಾನರ್​ ಜೊತೆಯಲ್ಲಿ ಎರಡನೇ ಬಾರಿ ಕೆಲಸ ಮಾಡುವ ಅವಕಾಶ ನೀಡಿರುವುದಕ್ಕೆ ಸಪ್ತಮಿ ಗೌಡ ಅವರು ಧನ್ಯವಾದ ಅರ್ಪಿಸಿದ್ದಾರೆ. ‘ಯುವರಾಜನ ಅರಸಿಗೆ ಆದರದ ಸ್ವಾಗತ’ ಎಂದು ‘ಹೊಂಬಾಳೆ ಫಿಲ್ಮ್ಸ್​’ ಟ್ವೀಟ್​ ಮಾಡಿದೆ. ಸಪ್ತಮಿ ಗೌಡ ಅವರ ಪ್ರತಿಭೆಯನ್ನು ಕೊಂಡಾಡಲಾಗಿದೆ. ‘ಯುವ’ ಚಿತ್ರಕ್ಕೆ ಆಯ್ಕೆ ಆಗಿರುವುದಕ್ಕೆ ಅಭಿಮಾನಿಗಳು ಸಪ್ತಮಿಗೆ ಅಭಿನಂದನೆ ತಿಳಿಸುತ್ತಿದ್ದಾರೆ.

ಸಪ್ತಮಿ ಗೌಡ ನಟಿಸಿದ ಮೊದಲ ಸಿನಿಮಾ ‘ಪಾಪ್​ ಕಾರ್ನ್​ ಮಂಕಿ ಟೈಗರ್​’. ಆ ಸಿನಿಮಾದಲ್ಲಿ ಅವರು ಡಾಲಿ ಧನಂಜಯ್​ ಜೊತೆ ತೆರೆ ಹಂಚಿಕೊಂಡಿದ್ದರು. ಎರಡನೇ ಸಿನಿಮಾ ‘ಕಾಂತಾರ’ದಲ್ಲಿ ರಿಷಬ್​ ಶೆಟ್ಟಿ ಜೊತೆ ನಟಿಸುವ ಅವಕಾಶ ಅವರಿಗೆ ಸಿಕ್ಕಿತು. ಅಭಿಷೇಕ್​ ಅಂಬರೀಷ್​ ನಾಯಕತ್ವದ ‘ಕಾಳಿ’ ಸಿನಿಮಾ ಅವರ ಮೂರನೇ ಚಿತ್ರ ಆಗಲಿದೆ. 4ನೇ ಚಿತ್ರದ ಮೂಲಕ ಸಪ್ತಮಿ ಗೌಡ ನೇರವಾಗಿ ಬಾಲಿವುಡ್​ ಟಿಕೆಟ್​ ಪಡೆದರು. ವಿವೇಕ್​ ಅಗ್ನಿಹೋತ್ರಿ ನಿರ್ದೇಶಿಸುತ್ತಿರುವ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರಕ್ಕೆ ಅವರು ನಾಯಕಿಯಾಗಿದ್ದಾರೆ. ಆ ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:35 pm, Mon, 6 March 23