AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Top 5 Googled Films in India: ‘ಗೂಗಲ್​ ಟಾಪ್​ 5’ ಪಟ್ಟಿಯಲ್ಲಿ ಕಾಂತಾರ, ಕೆಜಿಎಫ್​ 2; ಇಡೀ ದೇಶಕ್ಕೆ ಗೊತ್ತು ಕನ್ನಡದ ತಾಕತ್ತು

KGF 2 | Kantara: 2022ರಲ್ಲಿ ಜನರು ಅತಿ ಹೆಚ್ಚು ಹುಡುಕಿದ ಭಾರತೀಯ ಸಿನಿಮಾಗಳ ಪಟ್ಟಿ ಲಭ್ಯವಾಗಿದೆ. ಟಾಪ್​ 5 ಸಿನಿಮಾಗಳಲ್ಲಿ ಕನ್ನಡದ ಎರಡು ಚಿತ್ರಗಳು ಇವೆ ಎಂಬುದು ವಿಶೇಷ.

Top 5 Googled Films in India: ‘ಗೂಗಲ್​ ಟಾಪ್​ 5’ ಪಟ್ಟಿಯಲ್ಲಿ ಕಾಂತಾರ, ಕೆಜಿಎಫ್​ 2; ಇಡೀ ದೇಶಕ್ಕೆ ಗೊತ್ತು ಕನ್ನಡದ ತಾಕತ್ತು
‘ಕೆಜಿಎಫ್: ಚಾಪ್ಟರ್ 2’, ‘ಕಾಂತಾರ’
TV9 Web
| Edited By: |

Updated on:Dec 08, 2022 | 8:40 AM

Share

2022ರ ವರ್ಷ ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿದೆ. ಈ ವರ್ಷ ಕನ್ನಡದ ಹಲವು ಸಿನಿಮಾಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿವೆ. ಅದರಲ್ಲೂ ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಹಾಗೂ ರಿಷಬ್​ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾಗಳು ಮಾಡಿದ ಮೋಡಿಗೆ ಸಾಟಿಯೇ ಇಲ್ಲ. ಇಡೀ ವಿಶ್ವವೇ ಕರುನಾಡಿನ ಕಡೆಗೆ ತಿರುಗಿ ನೋಡುವಂತಹ ಸಾಧನೆಯನ್ನು ಈ ಚಿತ್ರಗಳು ಮಾಡಿವೆ. ಈ ಎರಡೂ ಸಿನಿಮಾಗಳು ಮೂಡಿಬಂದಿದ್ದು ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಿಂದ ಎಂಬುದು ವಿಶೇಷ. ಗೂಗಲ್​ ಹುಡುಕಾಟದಲ್ಲಿಯೂ ‘ಕಾಂತಾರ’ (Kantara) ಮತ್ತು ‘ಕೆಜಿಎಫ್​ 2’ ಸಿನಿಮಾಗಳು ಸದ್ದು ಮಾಡಿವೆ. 2022ರಲ್ಲಿ ಜನರು ಅತಿ ಹೆಚ್ಚು ಸರ್ಜ್​ ಮಾಡಿದ ಭಾರತದ ಟಾಪ್ 5 ಸಿನಿಮಾಗಳಲ್ಲಿ (Top Five Googled Movies in India) ಈ ಎರಡು ಚಿತ್ರಗಳು ಸ್ಥಾನ ಪಡೆದುಕೊಂಡಿವೆ.

ಈ ವರ್ಷ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ. ಇಡೀ ವರ್ಷದ ಆಗುಹೋಗುಗಳನ್ನು ಜನರು ಮೆಲುಕು ಹಾಕುತ್ತಿದ್ದಾರೆ. ಅದೇ ರೀತಿ ಗೂಗಲ್​ ಕೂಡ ತನ್ನ ಕೆಲವು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ವರ್ಷ ಜನರು ಅತಿ ಹೆಚ್ಚು ಹುಡುಕಿದ ಭಾರತೀಯ ಸಿನಿಮಾಗಳ ಪಟ್ಟಿ ಲಭ್ಯವಾಗಿದೆ. 5 ಸಿನಿಮಾಗಳಲ್ಲಿ ಕನ್ನಡದ ಎರಡು ಚಿತ್ರಗಳು ಇವೆ ಎಂಬುದು ವಿಶೇಷ.

ಮೊದಲ ಸ್ಥಾನದಲ್ಲಿ ರಣಬೀರ್​ ಕಪೂರ್​-ಆಲಿಯಾ ಭಟ್​ ಜೋಡಿಯ ‘ಬ್ರಹ್ಮಾಸ್ತ್ರ’ ಸಿನಿಮಾ ಇದೆ. ಈ ಚಿತ್ರ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಒಳ್ಳೆಯ ಕಮಾಯಿ ಮಾಡಿದೆ. ಸೆಪ್ಟೆಂಬರ್​ 9ರಂದು ಬಿಡುಗಡೆಯಾದ ಈ ಚಿತ್ರಕ್ಕೆ ಅಯಾನ್​ ಮುಖರ್ಜಿ ನಿರ್ದೇಶನವಿದೆ. ಈ ವರ್ಷ ಸೋತು ಸೊರಗಿದ್ದ ಬಾಲಿವುಡ್​ಗೆ​ ಹೊಸ ಚೈತನ್ಯ ನೀಡಿದ ಸಿನಿಮಾ ಇದು.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಇದನ್ನೂ ಓದಿ: Kantara Hindi OTT: ‘ಕಾಂತಾರ’ ಹಿಂದಿ ವರ್ಷನ್​ ಒಟಿಟಿ ರಿಲೀಸ್​ ಯಾವಾಗ? ಪ್ರಶ್ನೆಗಳಿಗೆ ಸುಸ್ತಾಗಿ ಡೇಟ್​ ತಿಳಿಸಿದ ರಿಷಬ್​ ಶೆಟ್ಟಿ

ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಎರಡನೇ ಸ್ಥಾನ ಪಡೆದುಕೊಂಡಿದೆ. ಮೂರನೇ ಸ್ಥಾನದಲ್ಲಿ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಇದೆ. ನಾಲ್ಕನೇ ಸ್ಥಾನವನ್ನು ‘ಕಾಂತಾರ’ ಚಿತ್ರ ಪಡೆದುಕೊಂಡಿದ್ದರೆ, ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ 5ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Rishab Shetty: ‘ಕಾಂತಾರ’ ಹೀರೋ ರಿಷಬ್​ ಶೆಟ್ಟಿ ಜೊತೆ ಸೆಲ್ಫಿಗೆ ಮುಗಿಬಿದ್ದ ಕಲಬುರಗಿ ಅಭಿಮಾನಿಗಳು

ಕನ್ನಡದ ಸಿನಿಮಾಗಳು ಇಂಥ ಸಾಧನೆ ಮಾಡಿರುವುದು ಕರುನಾಡಿನ ಎಲ್ಲರಿಗೂ ಹೆಮ್ಮೆ ತಂದಿದೆ. ಆ ಮೂಲಕ ಕನ್ನಡದ ಗತ್ತು ಇಡೀ ದೇಶಕ್ಕೆ ಗೊತ್ತು ಎಂಬಂತಾಗಿದೆ. ಇಷ್ಟೇ ಅಲ್ಲದೇ, ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಜಾಗತಿಕ ಮಟ್ಟದ ‘ಟಾಪ್​ 10’ ಪಟ್ಟಿಯಲ್ಲಿ 7ನೇ ಸ್ಥಾನ ಪಡೆದುಕೊಂಡು ಹವಾ ಮಾಡುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:40 am, Thu, 8 December 22

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?