AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಜತೆ ಅಟ್ಯಾಚ್ ಆಗಿ ಬರಲಿದೆ ಎರಡು ಕನ್ನಡ ಚಿತ್ರಗಳ ಟೀಸರ್; ಗುಡ್​ ನ್ಯೂಸ್ ಕೊಟ್ಟ ಹೊಂಬಾಳೆ ಫಿಲ್ಮ್ಸ್​

ರಿಷಬ್​ ನಟನೆಯ ಜತೆಗೆ, ನಿರ್ದೇಶನದ ಜವಾಬ್ದಾರಿ ಹೊತ್ತಿರುವ ‘ಕಾಂತಾರ’ ಸಿನಿಮಾದ ಟೀಸರ್ ಕೂಡ ರಿಲೀಸ್ ಆಗುತ್ತಿದೆ. ‘ದಂತಕಥೆಯ ಮೊದಲ ಆಟ, ಕಾಂತಾರಾದ ಮೊದಲ ನೋಟ ನಾಳೆ ರಾತ್ರಿ 10:44ಕ್ಕೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್​​ನಲ್ಲಿ’ ಎಂದು ಬರೆಯಲಾಗಿದೆ.

‘ಕೆಜಿಎಫ್ 2’ ಜತೆ ಅಟ್ಯಾಚ್ ಆಗಿ ಬರಲಿದೆ ಎರಡು ಕನ್ನಡ ಚಿತ್ರಗಳ ಟೀಸರ್; ಗುಡ್​ ನ್ಯೂಸ್ ಕೊಟ್ಟ ಹೊಂಬಾಳೆ ಫಿಲ್ಮ್ಸ್​
ಜಗ್ಗೇಶ್-ಕಾಂತಾರಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Apr 12, 2022 | 10:04 PM

Share

‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾ (KGF Chapter 2) ಏಪ್ರಿಲ್​ 14ರಂದು ತೆರೆಗೆ ಬರುತ್ತಿದ್ದು, ಈ ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ಕನ್ನಡದ ಚಿತ್ರವೊಂದು ಇಷ್ಟು ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿರುವುದು ಇದೇ ಮೊದಲು. ಈಗ ‘ಕೆಜಿಎಫ್​ 2’ ತೆರೆಗೆ ಬರುವುದಕ್ಕೂ ಮೊದಲು ಎರಡು ಗುಡ್​ನ್ಯೂಸ್ ನೀಡಿದೆ ಹೊಂಬಾಳೆ ಫಿಲ್ಮ್ಸ್​ (Hombale Films). ಈ ನಿರ್ಮಾಣ ಸಂಸ್ಥೆ ಅಡಿಯಲ್ಲಿ ರಿಲೀಸ್​​ ಆಗುತ್ತಿರುವ ಎರಡು ಚಿತ್ರಗಳ ಟೀಸರ್ ಮಾರ್ಚ್​ 13 ರಾತ್ರಿ 10.45ಕ್ಕೆ ರಿಲೀಸ್ ಆಗಲಿದೆ. ಈ ಟೀಸರ್​ಗಳು ‘ಕೆಜಿಎಫ್​ 2’ ಜತೆ ಅಟ್ಯಾಚ್ ಆಗಿರಲಿದೆ.

ದೊಡ್ಡದೊಡ್ಡ ಚಿತ್ರಗಳು ರಿಲೀಸ್​ ಆಗುವಾಗ ಮುಂಬರುವ ಸಿನಿಮಾಗಳ ಟ್ರೇಲರ್ ಅಥವಾ ಟೀಸರ್​ಗಳನ್ನು ಇದೇ ರೀತಿ ಅಟ್ಯಾಚ್​ ಮಾಡಿ ರಿಲೀಸ್ ಮಾಡುವ ಪದ್ಧತಿ ನಡೆದುಕೊಂಡುಬಂದೇ ಇದೆ. ಮಾರ್ಚ್​ 17ರಂದು ತೆರೆಗೆ ಬಂದ ‘ಜೇಮ್ಸ್’ ಸಿನಿಮಾದ ಜತೆಗೆ ‘ಬೈರಾಗಿ’ ಸಿನಿಮಾದ ಟೀಸರ್​ ಪ್ರಸಾರಗೊಂಡಿತ್ತು. ಅದೇ ರೀತಿ ‘ಕೆಜಿಎಫ್​ 2’ ಜತೆಗೆ ರಿಷಬ್ ಶೆಟ್ಟಿ ನಟನೆಯ ‘ಕಾಂತಾರಾ’ ಹಾಗೂ ಸಂತೋಷ್ ಆನಂದ್​ರಾಮ್​ ಅಭಿನಯದ ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾದ ಟೀಸರ್ ಅಟ್ಯಾಚ್ ಆಗಿರಲಿದೆ.

‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾದಲ್ಲಿ ಜಗ್ಗೇಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂತೋಷ್​ ಆನಂದ್​ರಾಮ್​ ನಿರ್ದೇಶನ ಸಿನಿಮಾಗಿದೆ. ಜಗ್ಗೇಶ್​ ಬಾಣಸಿಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಲುಕ್​ ಅಭಿಮಾನಿಗಳಿಗೆ ಇಷ್ಟವಾಗಿದೆ. ಈಗ ಟೀಸರ್ ಮೂಲಕ ಸಿನಿಮಾದ ಝಲಕ್ ಸಿಗಲಿದೆ. ‘ಅಸಹಾಯಕ ಹಯವಧನನ ಸ್ವಸಹಾಯ ಪದ್ಧತಿಯ ಅನಾವರಣ’ ಎನ್ನುವ ಕ್ಯಾಪ್ಶನ್​ನೊಂದಿಗೆ ಪೋಸ್ಟರ್​ ಪೋಸ್ಟ್​ ಮಾಡಲಾಗಿದೆ.

ರಿಷಬ್​ ನಟನೆಯ ಜತೆಗೆ, ನಿರ್ದೇಶನದ ಜವಾಬ್ದಾರಿ ಹೊತ್ತಿರುವ ‘ಕಾಂತಾರ’ ಸಿನಿಮಾದ ಟೀಸರ್ ಕೂಡ ರಿಲೀಸ್ ಆಗುತ್ತಿದೆ. ‘ದಂತಕಥೆಯ ಮೊದಲ ಆಟ, ಕಾಂತಾರಾದ ಮೊದಲ ನೋಟ ನಾಳೆ ರಾತ್ರಿ 10:44ಕ್ಕೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್​​ನಲ್ಲಿ’ ಎಂದು ಹೊಂಬಾಳೆ ಫಿಲ್ಮ್ಸ್​ ಪೋಸ್ಟ್ ಮಾಡಿದೆ.

ಇದನ್ನೂ ಓದಿ: ‘ಗಂಧದ ಗುಡಿ ಬಗ್ಗೆ ನೀವು ಟ್ವೀಟ್ ಮಾಡಬೇಕು’; ಪುನೀತ್ ಹೇಳಿದ ಮಾತು ನೆನಪಿಸಿಕೊಂಡ ಯಶ್

ಕರ್ನಾಟಕದ ಯಾವ ನಗರದಲ್ಲಿ ಎಷ್ಟಿದೆ ‘ಕೆಜಿಎಫ್ 2’ ಟಿಕೆಟ್ ದರ? ಇಲ್ಲಿದೆ ವಿವರ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ