AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಜತೆ ಅಟ್ಯಾಚ್ ಆಗಿ ಬರಲಿದೆ ಎರಡು ಕನ್ನಡ ಚಿತ್ರಗಳ ಟೀಸರ್; ಗುಡ್​ ನ್ಯೂಸ್ ಕೊಟ್ಟ ಹೊಂಬಾಳೆ ಫಿಲ್ಮ್ಸ್​

ರಿಷಬ್​ ನಟನೆಯ ಜತೆಗೆ, ನಿರ್ದೇಶನದ ಜವಾಬ್ದಾರಿ ಹೊತ್ತಿರುವ ‘ಕಾಂತಾರ’ ಸಿನಿಮಾದ ಟೀಸರ್ ಕೂಡ ರಿಲೀಸ್ ಆಗುತ್ತಿದೆ. ‘ದಂತಕಥೆಯ ಮೊದಲ ಆಟ, ಕಾಂತಾರಾದ ಮೊದಲ ನೋಟ ನಾಳೆ ರಾತ್ರಿ 10:44ಕ್ಕೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್​​ನಲ್ಲಿ’ ಎಂದು ಬರೆಯಲಾಗಿದೆ.

‘ಕೆಜಿಎಫ್ 2’ ಜತೆ ಅಟ್ಯಾಚ್ ಆಗಿ ಬರಲಿದೆ ಎರಡು ಕನ್ನಡ ಚಿತ್ರಗಳ ಟೀಸರ್; ಗುಡ್​ ನ್ಯೂಸ್ ಕೊಟ್ಟ ಹೊಂಬಾಳೆ ಫಿಲ್ಮ್ಸ್​
ಜಗ್ಗೇಶ್-ಕಾಂತಾರಾ
TV9 Web
| Edited By: |

Updated on: Apr 12, 2022 | 10:04 PM

Share

‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾ (KGF Chapter 2) ಏಪ್ರಿಲ್​ 14ರಂದು ತೆರೆಗೆ ಬರುತ್ತಿದ್ದು, ಈ ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ಕನ್ನಡದ ಚಿತ್ರವೊಂದು ಇಷ್ಟು ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿರುವುದು ಇದೇ ಮೊದಲು. ಈಗ ‘ಕೆಜಿಎಫ್​ 2’ ತೆರೆಗೆ ಬರುವುದಕ್ಕೂ ಮೊದಲು ಎರಡು ಗುಡ್​ನ್ಯೂಸ್ ನೀಡಿದೆ ಹೊಂಬಾಳೆ ಫಿಲ್ಮ್ಸ್​ (Hombale Films). ಈ ನಿರ್ಮಾಣ ಸಂಸ್ಥೆ ಅಡಿಯಲ್ಲಿ ರಿಲೀಸ್​​ ಆಗುತ್ತಿರುವ ಎರಡು ಚಿತ್ರಗಳ ಟೀಸರ್ ಮಾರ್ಚ್​ 13 ರಾತ್ರಿ 10.45ಕ್ಕೆ ರಿಲೀಸ್ ಆಗಲಿದೆ. ಈ ಟೀಸರ್​ಗಳು ‘ಕೆಜಿಎಫ್​ 2’ ಜತೆ ಅಟ್ಯಾಚ್ ಆಗಿರಲಿದೆ.

ದೊಡ್ಡದೊಡ್ಡ ಚಿತ್ರಗಳು ರಿಲೀಸ್​ ಆಗುವಾಗ ಮುಂಬರುವ ಸಿನಿಮಾಗಳ ಟ್ರೇಲರ್ ಅಥವಾ ಟೀಸರ್​ಗಳನ್ನು ಇದೇ ರೀತಿ ಅಟ್ಯಾಚ್​ ಮಾಡಿ ರಿಲೀಸ್ ಮಾಡುವ ಪದ್ಧತಿ ನಡೆದುಕೊಂಡುಬಂದೇ ಇದೆ. ಮಾರ್ಚ್​ 17ರಂದು ತೆರೆಗೆ ಬಂದ ‘ಜೇಮ್ಸ್’ ಸಿನಿಮಾದ ಜತೆಗೆ ‘ಬೈರಾಗಿ’ ಸಿನಿಮಾದ ಟೀಸರ್​ ಪ್ರಸಾರಗೊಂಡಿತ್ತು. ಅದೇ ರೀತಿ ‘ಕೆಜಿಎಫ್​ 2’ ಜತೆಗೆ ರಿಷಬ್ ಶೆಟ್ಟಿ ನಟನೆಯ ‘ಕಾಂತಾರಾ’ ಹಾಗೂ ಸಂತೋಷ್ ಆನಂದ್​ರಾಮ್​ ಅಭಿನಯದ ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾದ ಟೀಸರ್ ಅಟ್ಯಾಚ್ ಆಗಿರಲಿದೆ.

‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾದಲ್ಲಿ ಜಗ್ಗೇಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂತೋಷ್​ ಆನಂದ್​ರಾಮ್​ ನಿರ್ದೇಶನ ಸಿನಿಮಾಗಿದೆ. ಜಗ್ಗೇಶ್​ ಬಾಣಸಿಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಲುಕ್​ ಅಭಿಮಾನಿಗಳಿಗೆ ಇಷ್ಟವಾಗಿದೆ. ಈಗ ಟೀಸರ್ ಮೂಲಕ ಸಿನಿಮಾದ ಝಲಕ್ ಸಿಗಲಿದೆ. ‘ಅಸಹಾಯಕ ಹಯವಧನನ ಸ್ವಸಹಾಯ ಪದ್ಧತಿಯ ಅನಾವರಣ’ ಎನ್ನುವ ಕ್ಯಾಪ್ಶನ್​ನೊಂದಿಗೆ ಪೋಸ್ಟರ್​ ಪೋಸ್ಟ್​ ಮಾಡಲಾಗಿದೆ.

ರಿಷಬ್​ ನಟನೆಯ ಜತೆಗೆ, ನಿರ್ದೇಶನದ ಜವಾಬ್ದಾರಿ ಹೊತ್ತಿರುವ ‘ಕಾಂತಾರ’ ಸಿನಿಮಾದ ಟೀಸರ್ ಕೂಡ ರಿಲೀಸ್ ಆಗುತ್ತಿದೆ. ‘ದಂತಕಥೆಯ ಮೊದಲ ಆಟ, ಕಾಂತಾರಾದ ಮೊದಲ ನೋಟ ನಾಳೆ ರಾತ್ರಿ 10:44ಕ್ಕೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್​​ನಲ್ಲಿ’ ಎಂದು ಹೊಂಬಾಳೆ ಫಿಲ್ಮ್ಸ್​ ಪೋಸ್ಟ್ ಮಾಡಿದೆ.

ಇದನ್ನೂ ಓದಿ: ‘ಗಂಧದ ಗುಡಿ ಬಗ್ಗೆ ನೀವು ಟ್ವೀಟ್ ಮಾಡಬೇಕು’; ಪುನೀತ್ ಹೇಳಿದ ಮಾತು ನೆನಪಿಸಿಕೊಂಡ ಯಶ್

ಕರ್ನಾಟಕದ ಯಾವ ನಗರದಲ್ಲಿ ಎಷ್ಟಿದೆ ‘ಕೆಜಿಎಫ್ 2’ ಟಿಕೆಟ್ ದರ? ಇಲ್ಲಿದೆ ವಿವರ

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ