AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಜತೆ ಅಟ್ಯಾಚ್ ಆಗಿ ಬರಲಿದೆ ಎರಡು ಕನ್ನಡ ಚಿತ್ರಗಳ ಟೀಸರ್; ಗುಡ್​ ನ್ಯೂಸ್ ಕೊಟ್ಟ ಹೊಂಬಾಳೆ ಫಿಲ್ಮ್ಸ್​

ರಿಷಬ್​ ನಟನೆಯ ಜತೆಗೆ, ನಿರ್ದೇಶನದ ಜವಾಬ್ದಾರಿ ಹೊತ್ತಿರುವ ‘ಕಾಂತಾರ’ ಸಿನಿಮಾದ ಟೀಸರ್ ಕೂಡ ರಿಲೀಸ್ ಆಗುತ್ತಿದೆ. ‘ದಂತಕಥೆಯ ಮೊದಲ ಆಟ, ಕಾಂತಾರಾದ ಮೊದಲ ನೋಟ ನಾಳೆ ರಾತ್ರಿ 10:44ಕ್ಕೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್​​ನಲ್ಲಿ’ ಎಂದು ಬರೆಯಲಾಗಿದೆ.

‘ಕೆಜಿಎಫ್ 2’ ಜತೆ ಅಟ್ಯಾಚ್ ಆಗಿ ಬರಲಿದೆ ಎರಡು ಕನ್ನಡ ಚಿತ್ರಗಳ ಟೀಸರ್; ಗುಡ್​ ನ್ಯೂಸ್ ಕೊಟ್ಟ ಹೊಂಬಾಳೆ ಫಿಲ್ಮ್ಸ್​
ಜಗ್ಗೇಶ್-ಕಾಂತಾರಾ
TV9 Web
| Edited By: |

Updated on: Apr 12, 2022 | 10:04 PM

Share

‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾ (KGF Chapter 2) ಏಪ್ರಿಲ್​ 14ರಂದು ತೆರೆಗೆ ಬರುತ್ತಿದ್ದು, ಈ ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ಕನ್ನಡದ ಚಿತ್ರವೊಂದು ಇಷ್ಟು ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿರುವುದು ಇದೇ ಮೊದಲು. ಈಗ ‘ಕೆಜಿಎಫ್​ 2’ ತೆರೆಗೆ ಬರುವುದಕ್ಕೂ ಮೊದಲು ಎರಡು ಗುಡ್​ನ್ಯೂಸ್ ನೀಡಿದೆ ಹೊಂಬಾಳೆ ಫಿಲ್ಮ್ಸ್​ (Hombale Films). ಈ ನಿರ್ಮಾಣ ಸಂಸ್ಥೆ ಅಡಿಯಲ್ಲಿ ರಿಲೀಸ್​​ ಆಗುತ್ತಿರುವ ಎರಡು ಚಿತ್ರಗಳ ಟೀಸರ್ ಮಾರ್ಚ್​ 13 ರಾತ್ರಿ 10.45ಕ್ಕೆ ರಿಲೀಸ್ ಆಗಲಿದೆ. ಈ ಟೀಸರ್​ಗಳು ‘ಕೆಜಿಎಫ್​ 2’ ಜತೆ ಅಟ್ಯಾಚ್ ಆಗಿರಲಿದೆ.

ದೊಡ್ಡದೊಡ್ಡ ಚಿತ್ರಗಳು ರಿಲೀಸ್​ ಆಗುವಾಗ ಮುಂಬರುವ ಸಿನಿಮಾಗಳ ಟ್ರೇಲರ್ ಅಥವಾ ಟೀಸರ್​ಗಳನ್ನು ಇದೇ ರೀತಿ ಅಟ್ಯಾಚ್​ ಮಾಡಿ ರಿಲೀಸ್ ಮಾಡುವ ಪದ್ಧತಿ ನಡೆದುಕೊಂಡುಬಂದೇ ಇದೆ. ಮಾರ್ಚ್​ 17ರಂದು ತೆರೆಗೆ ಬಂದ ‘ಜೇಮ್ಸ್’ ಸಿನಿಮಾದ ಜತೆಗೆ ‘ಬೈರಾಗಿ’ ಸಿನಿಮಾದ ಟೀಸರ್​ ಪ್ರಸಾರಗೊಂಡಿತ್ತು. ಅದೇ ರೀತಿ ‘ಕೆಜಿಎಫ್​ 2’ ಜತೆಗೆ ರಿಷಬ್ ಶೆಟ್ಟಿ ನಟನೆಯ ‘ಕಾಂತಾರಾ’ ಹಾಗೂ ಸಂತೋಷ್ ಆನಂದ್​ರಾಮ್​ ಅಭಿನಯದ ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾದ ಟೀಸರ್ ಅಟ್ಯಾಚ್ ಆಗಿರಲಿದೆ.

‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾದಲ್ಲಿ ಜಗ್ಗೇಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂತೋಷ್​ ಆನಂದ್​ರಾಮ್​ ನಿರ್ದೇಶನ ಸಿನಿಮಾಗಿದೆ. ಜಗ್ಗೇಶ್​ ಬಾಣಸಿಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಲುಕ್​ ಅಭಿಮಾನಿಗಳಿಗೆ ಇಷ್ಟವಾಗಿದೆ. ಈಗ ಟೀಸರ್ ಮೂಲಕ ಸಿನಿಮಾದ ಝಲಕ್ ಸಿಗಲಿದೆ. ‘ಅಸಹಾಯಕ ಹಯವಧನನ ಸ್ವಸಹಾಯ ಪದ್ಧತಿಯ ಅನಾವರಣ’ ಎನ್ನುವ ಕ್ಯಾಪ್ಶನ್​ನೊಂದಿಗೆ ಪೋಸ್ಟರ್​ ಪೋಸ್ಟ್​ ಮಾಡಲಾಗಿದೆ.

ರಿಷಬ್​ ನಟನೆಯ ಜತೆಗೆ, ನಿರ್ದೇಶನದ ಜವಾಬ್ದಾರಿ ಹೊತ್ತಿರುವ ‘ಕಾಂತಾರ’ ಸಿನಿಮಾದ ಟೀಸರ್ ಕೂಡ ರಿಲೀಸ್ ಆಗುತ್ತಿದೆ. ‘ದಂತಕಥೆಯ ಮೊದಲ ಆಟ, ಕಾಂತಾರಾದ ಮೊದಲ ನೋಟ ನಾಳೆ ರಾತ್ರಿ 10:44ಕ್ಕೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್​​ನಲ್ಲಿ’ ಎಂದು ಹೊಂಬಾಳೆ ಫಿಲ್ಮ್ಸ್​ ಪೋಸ್ಟ್ ಮಾಡಿದೆ.

ಇದನ್ನೂ ಓದಿ: ‘ಗಂಧದ ಗುಡಿ ಬಗ್ಗೆ ನೀವು ಟ್ವೀಟ್ ಮಾಡಬೇಕು’; ಪುನೀತ್ ಹೇಳಿದ ಮಾತು ನೆನಪಿಸಿಕೊಂಡ ಯಶ್

ಕರ್ನಾಟಕದ ಯಾವ ನಗರದಲ್ಲಿ ಎಷ್ಟಿದೆ ‘ಕೆಜಿಎಫ್ 2’ ಟಿಕೆಟ್ ದರ? ಇಲ್ಲಿದೆ ವಿವರ

Follow Us
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು