AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ

Kantara | Rishab Shetty: ನಟಿ ಅನುಷ್ಕಾ ಶೆಟ್ಟಿ ಅವರು ‘ಕಾಂತಾರ’ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಕನ್ನಡದ ಚಿತ್ರಕ್ಕೆ ಈ ಪರಿ ಬೆಂಬಲ ಸೂಚಿಸಿದ್ದಕ್ಕೆ ಅವರಿಗೆ ಅಭಿಮಾನಿಗಳು ಭೇಷ್​ ಎಂದಿ​ದ್ದಾರೆ.

Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
ಅನುಷ್ಕಾ ಶೆಟ್ಟಿ, ರಿಷಬ್ ಶೆಟ್ಟಿ
TV9 Web
| Edited By: |

Updated on:Oct 16, 2022 | 2:47 PM

Share

ಕನ್ನಡದ ‘ಕಾಂತಾರ’ (Kantara) ಸಿನಿಮಾ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ. ಈ ಚಿತ್ರವನ್ನು ನೋಡಿದ ಎಲ್ಲರೂ ವಾವ್​ ಎನ್ನುತ್ತಿದ್ದಾರೆ. ಮೊದಲು ಕನ್ನಡದಲ್ಲಿ ರಿಲೀಸ್​ ಆಗಿದ್ದ ಈ ಚಿತ್ರ ಬಳಿಕ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿಯೂ ತೆರೆಕಂಡಿತು. ಪರಭಾಷೆಯ ಅನೇಕ ಸ್ಟಾರ್​ ಕಲಾವಿದರು ‘ಕಾಂತಾರ’ ನೋಡಿ ಮೆಚ್ಚಿಕೊಂಡಿದ್ದಾರೆ. ಟಾಲಿವುಡ್​ನಲ್ಲಿ ಭಾರಿ ಜನಪ್ರಿಯತೆ ಗಳಿಸಿರುವ ಕನ್ನಡತಿ ಅನುಷ್ಕಾ ಶೆಟ್ಟಿ (Anushka Shetty) ಅವರಿಗೂ ಈ ಚಿತ್ರ ಸಖತ್​ ಇಷ್ಟ ಆಗಿದೆ. ಸಿನಿಮಾ ನೋಡಿದ ಬಳಿಕ ಅವರು ಅಭಿಪ್ರಾಯ ತಿಳಿಸಿದ್ದಾರೆ. ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ವಿಶೇಷವಾಗಿ ರಿಷಬ್​ ಶೆಟ್ಟಿ (Rishab Shetty) ಪ್ರತಿಭೆಗೆ ಅನುಷ್ಕಾ ಭೇಷ್​ ಎಂದಿದ್ದಾರೆ. ಇದರಿಂದ ‘ಕಾಂತಾರ’ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ.

‘ಕಾಂತಾರ’ ಚಿತ್ರವನ್ನು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ನಿರ್ಮಾಣ ಮಾಡಿದೆ. ದೇಶಾದ್ಯಂತ ಬಿಡುಗಡೆ ಮಾಡುವ ಮೂಲಕ ಚಿತ್ರವನ್ನು ಎಲ್ಲ ಪ್ರೇಕ್ಷಕರಿಗೂ ತಲುಪಿಸುವ ಕಾರ್ಯ ಆಗಿದೆ. ಸೆಲೆಬ್ರಿಟಿಗಳು ಕೂಡ ಈ ಚಿತ್ರವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಪ್ರಭಾಸ್​ ಅವರು ಎರಡು ಸಲ ಸಿನಿಮಾ ನೋಡಿದ್ದಾಗಿ ಹೇಳಿದರು. ಅದರ ಬೆನ್ನಲ್ಲೇ ಅನುಷ್ಕಾ ಶೆಟ್ಟಿ ಕಡೆಯಿಂದ ಮೆಚ್ಚುಗೆಯ ಮಾತು ಕೇಳಿಬಂದಿದೆ.

ಇದನ್ನೂ ಓದಿ: Rishab Shetty: ರಿಷಬ್​ ಶೆಟ್ಟಿ ಕಾಲಿಗೆ ಬಿದ್ದ ಖ್ಯಾತ ಯೂಟ್ಯೂಬರ್​; ಹಿಂದಿ ಪ್ರೇಕ್ಷಕರಲ್ಲಿ ಹೆಚ್ಚಿತು ‘ಕಾಂತಾರ’ ಸೆನ್ಸೇಷನ್​

ಇದನ್ನೂ ಓದಿ
Image
ರೇಟಿಂಗ್ ವಿಧಾನ ಬದಲಿಸಿದ ‘ಬುಕ್ ಮೈ ಶೋ’; ಈಗ ‘ಕಾಂತಾರ’ ಚಿತ್ರಕ್ಕೆ ಸಿಕ್ಕ ರೇಟಿಂಗ್ ಎಷ್ಟು?
Image
Kantara: ಹಿಂದಿಯಲ್ಲೂ ಅಬ್ಬರಿಸಲಿದೆ ‘ಕಾಂತಾರ’; ಅ.14ರಿಂದ 2500 ಪರದೆಗಳಲ್ಲಿ ರಿಲೀಸ್​
Image
Rishab Shetty: ಐಎಂಡಿಬಿಯಲ್ಲಿ ಗಮ್ಮತ್​ ರೇಟಿಂಗ್​ ಪಡೆದ ‘ಕಾಂತಾರ’; ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದ ರಿಷಬ್​ ಸಿನಿಮಾ
Image
Kantara Review: ‘ಕಾಂತಾರ’ ವಿಮರ್ಶೆ ಮಾಡಿದ ರಮ್ಯಾ; ರಿಷಬ್​ ಶೆಟ್ಟಿ ಚಿತ್ರದ ಬಗ್ಗೆ ‘ಮೋಹಕ ತಾರೆ’ ಹೇಳಿದ್ದೇನು?

‘ಕಾಂತಾರ ಸಿನಿಮಾ ನೋಡಿದೆ. ಪೂರ್ತಿಯಾಗಿ ಈ ಚಿತ್ರ ನನಗೆ ಇಷ್ಟ ಆಯ್ತು. ಪ್ರತಿಯೊಬ್ಬ ಕಲಾವಿದರು, ತಂತ್ರಜ್ಞರು, ನಿರ್ಮಾಪಕರು ಸೇರಿ ಇಡೀ ತಂಡಕ್ಕೆ ಅಭಿನಂದನೆಗಳು. ಈ ಅನುಭವ ನೀಡಿದ್ದಕ್ಕಾಗಿ ಧನ್ಯವಾದಗಳು. ರಿಷಬ್​ ಶೆಟ್ಟಿ ನೀವು ಅಮೇಜಿಂಗ್​. ಎಲ್ಲವೂ ಈ ಸಿನಿಮಾವನ್ನು ಚಿತ್ರಮಂದಿರದಲ್ಲೇ ನೋಡಿ’ ಎಂದು ಅನುಷ್ಕಾ ಶೆಟ್ಟಿ ಹೊಗಳಿದ್ದಾರೆ. ಕನ್ನಡದ ಸಿನಿಮಾಗೆ ಈ ಪರಿ ಬೆಂಬಲ ಸೂಚಿಸಿದ್ದಕ್ಕೆ ಅವರಿಗೆ ಅಭಿಮಾನಿಗಳು ಭೇಷ್​ ಎಂದಿ​ದ್ದಾರೆ.

ಈ ಸಿನಿಮಾದಲ್ಲಿ ರಿಷಬ್​ ಶೆಟ್ಟಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಅಚ್ಯುತ್​ ಕುಮಾರ್​, ಕಿಶೋರ್ ಮುಂತಾದ ಪಾತ್ರಗಳು ಕೂಡ ಹೈಲೈಟ್​ ಆಗಿವೆ. ಎಲ್ಲರಿಗೂ ಈ ಚಿತ್ರದಿಂದ ಒಳ್ಳೆಯ ಮೈಲೇಜ್​ ಸಿಕ್ಕಿದೆ. ಅಜನೀಶ್​ ಲೋಕನಾಥ್ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಹಾಡುಗಳು ಸೂಪರ್​ ಹಿಟ್​ ಆಗಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:47 pm, Sun, 16 October 22

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​