AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ‘ಕಾಂತಾರ: ಚಾಪ್ಟರ್ 1’ ಬುಕಿಂಗ್ ಸುನಾಮಿ; ದುಬಾರಿ ಆಯ್ತು ಟಿಕೆಟ್ ದರ

Kantara Chapter 1 Advance Booking: ‘ಕಾಂತಾರ’: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಗಲಿದೆ. ಈ ಚಿತ್ರ ಸದ್ಯ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುವ ಸೂಚನೆ ನೀಡಿದೆ. ಅಡ್ವಾನ್ಸ್ ಬುಕಿಂಗ್​ನಿಂದಲೇ ಚಿತ್ರಕ್ಕೆ ಕೋಟ್ಯಂತರ ರೂಪಾಯಿ ಹರಿದು ಬರಲಿದೆ. ಅಡ್ವಾನ್ಸ್ ಬುಕಿಂಗ್​​ನಲ್ಲಿ ‘ಕಾಂತಾರ’ ಸುನಾಮಿ ಸೃಷ್ಟಿ ಮಾಡಿದೆ.

ಬೆಂಗಳೂರಲ್ಲಿ ‘ಕಾಂತಾರ: ಚಾಪ್ಟರ್ 1’ ಬುಕಿಂಗ್ ಸುನಾಮಿ; ದುಬಾರಿ ಆಯ್ತು ಟಿಕೆಟ್ ದರ
ಕಾಂತಾರ
ರಾಜೇಶ್ ದುಗ್ಗುಮನೆ
|

Updated on:Sep 26, 2025 | 2:30 PM

Share

‘ಕಾಂತಾರ: ಚಾಪ್ಟರ್ 1’ ಚಿತ್ರದ (Kantara: Chapter 1) ಬಿಡುಗಡೆಗೆ ಇನ್ನೊಂದು ವಾರ ಮಾತ್ರ ಬಾಕಿ ಉಳಿದಿವೆ. ಹೀಗಿರುವಾಗಲೇ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ. ಪಿವಿಆರ್, ಐನಾಕ್ಸ್ ಸೇರಿ ಹಲವು ಮಲ್ಟಿಪ್ಲೆಕ್ಸ್​ಗಳಲ್ಲಿ ಚಿತ್ರಕ್ಕೆ ಸಾಕಷ್ಟು ಶೋಗಳನ್ನು ನೀಡಲಾಗಿದೆ. ಇದರ ಜೊತೆಗೆ ಸಿಂಗಲ್​ ಸ್ಕ್ರೀನ್​ಗಳ ಟಿಕೆಟ್​ಗಳನ್ನು ಆನ್​ಲೈನ್​​ನಲ್ಲಿ ಬಿಡಲಾಗಿದೆ. ಬುಕಿಂಗ್ ಆರಂಭ ಆಗುತ್ತಿದ್ದಂತೆ ಹಲವು ಶೋಗಳು ಸೋಲ್ಡ್​ಔಟ್ ಆಗಿವೆ. ಇನ್ನು, ಸಿನಿಮಾ ಟಿಕೆಟ್ ದರವನ್ನು ದುಬಾರಿ ಮೊತ್ತಕ್ಕೆ ಮಾರಟ ಮಾಡಲಾಗುತ್ತಿದೆ.

‘ಕಾಂತಾರ’: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಗಲಿದೆ. ಈ ಚಿತ್ರ ಸದ್ಯ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುವ ಸೂಚನೆ ನೀಡಿದೆ. ಅಡ್ವಾನ್ಸ್ ಬುಕಿಂಗ್​ನಿಂದಲೇ ಚಿತ್ರಕ್ಕೆ ಕೋಟ್ಯಂತರ ರೂಪಾಯಿ ಹರಿದು ಬರಲಿದೆ. ಅಡ್ವಾನ್ಸ್ ಬುಕಿಂಗ್​​ನಲ್ಲಿ ‘ಕಾಂತಾರ’ ಸುನಾಮಿ ಸೃಷ್ಟಿ ಮಾಡಿದೆ.

ಬೆಂಗಳೂರು ಒಂದರಲ್ಲೇ ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ನೂರಾರು ಶೋಗಳನ್ನು ನೀಡಲಾಗಿದೆ. ಸಿಂಗಲ್ ಸ್ಕ್ರೀನ್ ಥಿಯೇಟರ್​ಗಳಲ್ಲಿ ಮೊದಲ ದಿನ ಆರು ಶೋಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ಪಿವಿಆರ್​ ಜೊತೆ ಹೊಂಬಾಳೆ ಒಪ್ಪಂದ ಮಾಡಿಕೊಂಡಿದ್ದು, ಇದರ ಅನ್ವಯ ಐನಾಕ್ಸ್ ಹಾಗೂ ಪಿವಿಆರ್​​ ಇದ್ದ ಕಡೆ ಸಿನಿಮಾಗೆ ಹೆಚ್ಚಿನ ಶೋ ಸಿಗೋ ನಿರೀಕ್ಷೆ ಇದೆ.

ಇದನ್ನೂ ಓದಿ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ
Image
‘ನಾನು ಒಂದು ದಿನ ಮಗು ಹೊಂದುತ್ತೇನೆ’; ಮನದ ಆಸೆ ಹೊರಹಾಕಿದ ಸಲ್ಮಾನ್ ಖಾನ್
Image
ಬಿಗ್ ಬಾಸ್​ಗೆ ಶಾಕ್; ಬಿತ್ತು ಎರಡು ಕೋಟಿ ರೂಪಾಯಿ ಕೇಸ್
Image
‘ಓಜಿ’ ಅಬ್ಬರದ ಕಲೆಕ್ಷನ್; ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಕೆ

ಬೆಂಗಳೂರಿನ ಜನಪ್ರಿಯ ಮಲ್ಟಿಪ್ಲೆಕ್ಸ್​ಗಳಲ್ಲಿ ಒರಾಯನ್​ ಪಿವಿಆರ್ ಕೂಡ ಒಂದು. ಇಲ್ಲಿ ಸದ್ಯ ಅಕ್ಟೋಬರ್ 2ಕ್ಕೆ 15 ಶೋಗಳನ್ನು ನೀಡಲಾಗಿದೆ. ಈ ಎಲ್ಲಾ ಶೋಗಳ ಹೌಸ್​ಫುಲ್ ಆಗುತ್ತಿವೆ. ಕೆಲವೇ ಸೀಟ್​ಗಳು ಮಾರಾಟ ಆದರೆ, ಈ ಶೋಗಳು ಸೋಲ್ಡ್​ಔಟ್ ಆಗಲಿವೆ.

ಟಿಕೆಟ್ ಬೆಲೆ ಎಷ್ಟು?

ಈ ಮೊದಲು ರಾಜ್ಯ ಸರ್ಕಾರ ಏಕರೂಪ ಟಿಕೆಟ್ ದರ ಜಾರಿಗೆ ತಂದಿತ್ತು. ಇದರ ಅನ್ವಯ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್​ಗಳಲ್ಲಿ ಟಿಕೆಟ್ ದರ 200 ರೂಪಾಯಿ ಮೀರುವಂತಿರಲಿಲ್ಲ. ಶೇ.18 ಟ್ಯಾಕ್ಸ್ ಮೊತ್ತ ಸೇರಿದರೆ ಟಿಕೆಟ್ ದರ 236 ರೂಪಾಯಿ ಆಗುತ್ತಿತ್ತು. ಆದರೆ, ಇದನ್ನು ಪಿವಿಆರ್ ಹಾಗೂ ಹೊಂಬಾಳೆ ಫಿಲ್ಮ್ಸ್ ಕೋರ್ಟ್​ನಲ್ಲಿ ಪ್ರಶ್ನೆ ಮಾಡಿತ್ತು. ಸದ್ಯ ಕೋರ್ಟ್ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಪರಿಣಾಮ ‘ಕಾಂತಾರ: ಚಾಪ್ಟರ್ 1’ ಟಿಕೆಟ್ ದರದಲ್ಲಿ ಏರಿಕೆ ಆಗಿದೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ರಿಷಬ್ ಪಡೆದ ಸಂಭಾವನೆ ಎಷ್ಟು? ಊಹೆಗೂ ಮೀರಿದ್ದು

ಮಲ್ಟಿಪ್ಲೆಕ್ಸ್​ಗಳಲ್ಲಿ ಕ್ಲಾಸಿಕ್ ಅಂದರೆ ಕೆಳ ಹಂತದ ಆಸನಗಳಿಗೆ 340-400 ರೂಪಾಯಿ ಆಸುಪಾಸಿನಲ್ಲಿ ಟಿಕೆಟ್ ದರ ನಿಗದಿ ಮಾಡಲಾಗಿದೆ. ಪ್ರೈಮ್​ ಆಸನಗಳಿಗೆ 450-500 ರೂಪಾಯಿ ಟಿಕೆಟ್ ದರ ನಿಗದಿ ಆಗಿದೆ. ರಿಕ್ಲೈನರ್​ ಆಸನಗಳಿಗೆ 800 ರೂಪಾಯಿ ಆಸುಪಾಸಿನಲ್ಲಿ ಟಿಕೆಟ್ ದರ ಇದೆ. ಥಿಯೇಟರ್​ನಲ್ಲಿ 200 ರೂಪಾಯಿಯಿಂದ 350 ರೂಪಾಯಿ ಆಸುಪಾಸಿನಲ್ಲಿ ದರ ನಿಗದಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:30 pm, Fri, 26 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ