AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ವಿಶ್ವ ಬಾಕ್ಸ್ ಆಫೀಸ್​​ ಲೆಕ್ಕ ನೀಡಿದ ಹೊಂಬಾಳೆ ಫಿಲ್ಮ್ಸ್; ದಾಖಲೆ ಮೇಲೆ ದಾಖಲೆ

‘ಕಾಂತಾರ: ಚಾಪ್ಟರ್ 1’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಹೊಂಬಾಳೆ ಫಿಲ್ಮ್ಸ್ ನೀಡಿರುವ ಅಧಿಕೃತ ಮಾಹಿತಿ ಪ್ರಕಾರ, ಚಿತ್ರ ಮೂರು ವಾರಗಳಲ್ಲಿ 818 ಕೋಟಿ ರೂಪಾಯಿ ಗಳಿಕೆ ಮಾಡಿದೆ. ದೀಪಾವಳಿ ರಜೆಗಳ ಲಾಭ ಪಡೆದ ಈ ಚಿತ್ರ 'ಕೆಜಿಎಫ್ 2' ನಂತರ ಅತಿ ಹೆಚ್ಚು ಗಳಿಕೆ ಮಾಡಿದ ಕನ್ನಡದ ಸಿನಿಮಾ ಇದಾಗಿದೆ.

‘ಕಾಂತಾರ: ಚಾಪ್ಟರ್ 1’ ವಿಶ್ವ ಬಾಕ್ಸ್ ಆಫೀಸ್​​ ಲೆಕ್ಕ ನೀಡಿದ ಹೊಂಬಾಳೆ ಫಿಲ್ಮ್ಸ್; ದಾಖಲೆ ಮೇಲೆ ದಾಖಲೆ
ಕಾಂತಾರ
ರಾಜೇಶ್ ದುಗ್ಗುಮನೆ
|

Updated on: Oct 24, 2025 | 12:47 PM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ (Kantara: Chapter 1) ಭಾರತದ ಬಾಕ್ಸ್ ಆಫೀಸ್​​ನಲ್ಲಿ 600 ಕೋಟಿ ರೂಪಾಯಿ ಗಳಿಕೆ ಮಾಡುವ ಸನಿಹದಲ್ಲಿ ಇದೆ. ಈಗ ವಿಶ್ವ ಬಾಕ್ಸ್ ಆಫೀಸ್ ಲೆಕ್ಕದ ಬಗ್ಗೆ ತಂಡದ ಕಡೆಯಿಂದ ಅಧಿಕೃತ ಮಾಹಿತಿ ಸಿಕ್ಕಿದೆ. ಈ ಸಿನಿಮಾ ಬರೋಬ್ಬರಿ 800 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ ಎಂದು ಹೊಂಬಾಳೆ ಫಿಲ್ಮ್ಸ್ ಹೇಳಿದೆ. ಈ ಮೂಲಕ ಚಿತ್ರ ಹಲವು ದಾಖಲೆಗಳನ್ನು ಈ ಚಿತ್ರ ಉಡೀಸ್ ಮಾಡಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರ ಅಕ್ಟೊಬರ್ 22ರಂದು ರಿಲೀಸ್ ಆಯಿತು. ಈ ಸಿನಿಮಾ ಬಿಡುಗಡೆ ಆಗಿ ಮೂರು ವಾರಗಳು ಕಳೆದಿವೆ. ಈ ಸಂದರ್ಭದಲ್ಲಿ ಹೊಂಬಾಳೆ ಫಿಲ್ಮ್ಸ್ ಅಧಿಕೃತ ಲೆಕ್ಕಾಚಾರದೊಂದಿಗೆ ಜನರ ಎದುರು ಬಂದಿದೆ. ಈ ಸಿನಿಮಾ ಮುರು ವಾರಗಳಲ್ಲಿ 818 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಹೇಳಿದೆ. ಕಳೆದ ವಾರವೂ ಹೊಂಬಾಳೆ ಫಿಲ್ಮ್ಸ್ ಗಳಿಕೆ ಲೆಕ್ಕ ನೀಡಿತ್ತು. ಈ ಸಂದರ್ಭದಲ್ಲಿ 700+ ಕೋಟಿ ರೂಪಾಯಿ ಗಳಿಕೆ ಆಗಿದ್ದಾಗಿ ಹೇಳಿತ್ತು. ಅಂದರೆ ಕಳೆದ ಒಂದು ವಾರದಲ್ಲಿ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದಂತೆ ಆಗಿದೆ. ‘ಕೆಜಿಎಫ್ 2’ ಬಳಿಕ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರ ಎಂಬ ಹೆಗ್ಗಳಿಕೆ ಈ ಸಿನಿಮಾಗೆ ಸಿಕ್ಕಿದೆ.

ಇದನ್ನೂ ಓದಿ: ಮೊದಲ ಬಾರಿಗೆ ಅತೀ ಕಡಿಮೆ ಕಲೆಕ್ಷನ್ ಮಾಡಿದ ‘ಕಾಂತಾರ: ಚಾಪ್ಟರ 1’; ಮುಂದಿದೆ ದೊಡ್ಡ ಸವಾಲು

‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ದೀಪಾವಳಿ ಸಹಕಾರಿ ಆಗಿದೆ. ದೀಪಾವಳಿ ಸಂದರ್ಭದಲ್ಲಿ ಸಾಲು ಸಾಲು ರಜೆಗಳು ಇದ್ದಿದ್ದರಿಂದ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ ಡಬಲ್ ಡಿಜಿಟ್ ಕಲೆಕ್ಷನ್ ಮಾಡಿದೆ. ಸದ್ಯ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಸಿನಿಮಾ ಅಬ್ಬರಿಸುತ್ತಾ ಇದೆ.

ಹಿಂದಿಯಲ್ಲೇ ಮೇಲುಗೈ

ಕನ್ನಡದ ಸಿನಿಮಾಗಳಿಗೆ ಪರಭಾಷೆಯಲ್ಲೂ ಬೇಡಿಕೆ ಬಂದಿದೆ ಎಂಬುದಕ್ಕೆ ‘ಕಾಂತಾರ: ಚಾಪ್ಟರ್ 1’ ಒಳ್ಳೆಯ ಉದಾಹರಣೆ. ಈ ಸಿನಿಮಾ ವೀಕ್ಷಣೆಗೆ ಬಾಲಿವುಡ್​ನವರೂ ಕಾದಿದ್ದರು. ಈ ಸಿನಿಮಾ ಹಿಂದಿ ಭಾಷೆಯಲ್ಲಿ ಕನ್ನಡಕ್ಕಿಂತ ಹೆಚ್ಚಿನ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಭಾಷಾವಾರು ಲೆಕ್ಕವನ್ನು ಹೊಂಬಾಳೆ ಫಿಲ್ಮ್ಸ್ ನೀಡಲಿ ಎಂದು ಫ್ಯಾನ್ಸ್ ಕಾಯುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ