AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ವಿಶ್ವ ಬಾಕ್ಸ್ ಆಫೀಸ್​​ ಲೆಕ್ಕ ನೀಡಿದ ಹೊಂಬಾಳೆ ಫಿಲ್ಮ್ಸ್; ದಾಖಲೆ ಮೇಲೆ ದಾಖಲೆ

‘ಕಾಂತಾರ: ಚಾಪ್ಟರ್ 1’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಹೊಂಬಾಳೆ ಫಿಲ್ಮ್ಸ್ ನೀಡಿರುವ ಅಧಿಕೃತ ಮಾಹಿತಿ ಪ್ರಕಾರ, ಚಿತ್ರ ಮೂರು ವಾರಗಳಲ್ಲಿ 818 ಕೋಟಿ ರೂಪಾಯಿ ಗಳಿಕೆ ಮಾಡಿದೆ. ದೀಪಾವಳಿ ರಜೆಗಳ ಲಾಭ ಪಡೆದ ಈ ಚಿತ್ರ 'ಕೆಜಿಎಫ್ 2' ನಂತರ ಅತಿ ಹೆಚ್ಚು ಗಳಿಕೆ ಮಾಡಿದ ಕನ್ನಡದ ಸಿನಿಮಾ ಇದಾಗಿದೆ.

‘ಕಾಂತಾರ: ಚಾಪ್ಟರ್ 1’ ವಿಶ್ವ ಬಾಕ್ಸ್ ಆಫೀಸ್​​ ಲೆಕ್ಕ ನೀಡಿದ ಹೊಂಬಾಳೆ ಫಿಲ್ಮ್ಸ್; ದಾಖಲೆ ಮೇಲೆ ದಾಖಲೆ
ಕಾಂತಾರ
ರಾಜೇಶ್ ದುಗ್ಗುಮನೆ
|

Updated on: Oct 24, 2025 | 12:47 PM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ (Kantara: Chapter 1) ಭಾರತದ ಬಾಕ್ಸ್ ಆಫೀಸ್​​ನಲ್ಲಿ 600 ಕೋಟಿ ರೂಪಾಯಿ ಗಳಿಕೆ ಮಾಡುವ ಸನಿಹದಲ್ಲಿ ಇದೆ. ಈಗ ವಿಶ್ವ ಬಾಕ್ಸ್ ಆಫೀಸ್ ಲೆಕ್ಕದ ಬಗ್ಗೆ ತಂಡದ ಕಡೆಯಿಂದ ಅಧಿಕೃತ ಮಾಹಿತಿ ಸಿಕ್ಕಿದೆ. ಈ ಸಿನಿಮಾ ಬರೋಬ್ಬರಿ 800 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ ಎಂದು ಹೊಂಬಾಳೆ ಫಿಲ್ಮ್ಸ್ ಹೇಳಿದೆ. ಈ ಮೂಲಕ ಚಿತ್ರ ಹಲವು ದಾಖಲೆಗಳನ್ನು ಈ ಚಿತ್ರ ಉಡೀಸ್ ಮಾಡಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರ ಅಕ್ಟೊಬರ್ 22ರಂದು ರಿಲೀಸ್ ಆಯಿತು. ಈ ಸಿನಿಮಾ ಬಿಡುಗಡೆ ಆಗಿ ಮೂರು ವಾರಗಳು ಕಳೆದಿವೆ. ಈ ಸಂದರ್ಭದಲ್ಲಿ ಹೊಂಬಾಳೆ ಫಿಲ್ಮ್ಸ್ ಅಧಿಕೃತ ಲೆಕ್ಕಾಚಾರದೊಂದಿಗೆ ಜನರ ಎದುರು ಬಂದಿದೆ. ಈ ಸಿನಿಮಾ ಮುರು ವಾರಗಳಲ್ಲಿ 818 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಹೇಳಿದೆ. ಕಳೆದ ವಾರವೂ ಹೊಂಬಾಳೆ ಫಿಲ್ಮ್ಸ್ ಗಳಿಕೆ ಲೆಕ್ಕ ನೀಡಿತ್ತು. ಈ ಸಂದರ್ಭದಲ್ಲಿ 700+ ಕೋಟಿ ರೂಪಾಯಿ ಗಳಿಕೆ ಆಗಿದ್ದಾಗಿ ಹೇಳಿತ್ತು. ಅಂದರೆ ಕಳೆದ ಒಂದು ವಾರದಲ್ಲಿ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದಂತೆ ಆಗಿದೆ. ‘ಕೆಜಿಎಫ್ 2’ ಬಳಿಕ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರ ಎಂಬ ಹೆಗ್ಗಳಿಕೆ ಈ ಸಿನಿಮಾಗೆ ಸಿಕ್ಕಿದೆ.

ಇದನ್ನೂ ಓದಿ: ಮೊದಲ ಬಾರಿಗೆ ಅತೀ ಕಡಿಮೆ ಕಲೆಕ್ಷನ್ ಮಾಡಿದ ‘ಕಾಂತಾರ: ಚಾಪ್ಟರ 1’; ಮುಂದಿದೆ ದೊಡ್ಡ ಸವಾಲು

‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ದೀಪಾವಳಿ ಸಹಕಾರಿ ಆಗಿದೆ. ದೀಪಾವಳಿ ಸಂದರ್ಭದಲ್ಲಿ ಸಾಲು ಸಾಲು ರಜೆಗಳು ಇದ್ದಿದ್ದರಿಂದ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ ಡಬಲ್ ಡಿಜಿಟ್ ಕಲೆಕ್ಷನ್ ಮಾಡಿದೆ. ಸದ್ಯ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಸಿನಿಮಾ ಅಬ್ಬರಿಸುತ್ತಾ ಇದೆ.

ಹಿಂದಿಯಲ್ಲೇ ಮೇಲುಗೈ

ಕನ್ನಡದ ಸಿನಿಮಾಗಳಿಗೆ ಪರಭಾಷೆಯಲ್ಲೂ ಬೇಡಿಕೆ ಬಂದಿದೆ ಎಂಬುದಕ್ಕೆ ‘ಕಾಂತಾರ: ಚಾಪ್ಟರ್ 1’ ಒಳ್ಳೆಯ ಉದಾಹರಣೆ. ಈ ಸಿನಿಮಾ ವೀಕ್ಷಣೆಗೆ ಬಾಲಿವುಡ್​ನವರೂ ಕಾದಿದ್ದರು. ಈ ಸಿನಿಮಾ ಹಿಂದಿ ಭಾಷೆಯಲ್ಲಿ ಕನ್ನಡಕ್ಕಿಂತ ಹೆಚ್ಚಿನ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಭಾಷಾವಾರು ಲೆಕ್ಕವನ್ನು ಹೊಂಬಾಳೆ ಫಿಲ್ಮ್ಸ್ ನೀಡಲಿ ಎಂದು ಫ್ಯಾನ್ಸ್ ಕಾಯುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ