AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್; ‘ಪಠಾಣ್’ ದಾಖಲೆಯೇ ಉಡೀಸ್

ರಿಷಬ್ ಶೆಟ್ಟಿ ನಟನೆಯ 'ಕಾಂತಾರ: ಚಾಪ್ಟರ್ 1' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಯಶಸ್ಸು ಕಂಡಿದೆ. ಮೊದಲ ದಿನವೇ ಶಾರುಖ್ ಖಾನ್ ನಟನೆಯ'ಪಠಾಣ್' ಚಿತ್ರದ ದಾಖಲೆ ಮುರಿದಿದೆ. ತೆಲುಗು ರಾಜ್ಯಗಳಲ್ಲಿ ಬ್ಯಾನ್ ಕೂಗಿದ್ದರೂ, ಹೈದರಾಬಾದ್‌ನಲ್ಲಿ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಈ ಮೂಲಕ ರಿಷಬ್ ಶೆಟ್ಟಿ ಮತ್ತೊಂದು ದೊಡ್ಡ ಗೆಲುವು ಸಾಧಿಸಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್; ‘ಪಠಾಣ್’ ದಾಖಲೆಯೇ ಉಡೀಸ್
ಕಾಂತಾರ: ಚಾಪ್ಟರ್ 1
ರಾಜೇಶ್ ದುಗ್ಗುಮನೆ
|

Updated on: Oct 03, 2025 | 6:58 AM

Share

ರಿಷಬ್ ಶೆಟ್ಟಿ (Rishab Shetty) ನಟನೆಯ ಕಲೆಕ್ಷನ್ ಅಬ್ಬರಕ್ಕೆ ಇಡೀ ಬಾಕ್ಸ್ ಆಫೀಸ್ ಶೇಕ್ ಆಗಿದೆ. ಈ ಚಿತ್ರ ಎಲ್ಲರ ಊಹೇಗೂ ಮೀರಿದ ಕಲೆಕ್ಷನ್ ಮಾಡಿದೆ. ಈ ಚಿತ್ರದ ಅಬ್ಬರಕ್ಕೆ ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಬಾಕ್ಸ್ ಆಫೀಸ್​ ದಾಖಲೆಯೇ ಉಡೀಸ್ ಆಗಿದೆ. ಈ ಚಿತ್ರದ ಮೂಲಕ ರಿಷಬ್ ಶೆಟ್ಟಿ ಅವರು ಮತ್ತೊಂದು ದೊಡ್ಡ ಗೆಲುವು ಕಂಡಿದ್ದಾರೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರತದಲ್ಲಿ ಕನ್ನಡ, ತೆಲುಗು ಸೇರಿದಂತೆ ಐದು ಭಾಷೆಗಳಲ್ಲಿ ರಿಲೀಸ್ ಆಗಿದೆ. ಸಿನಿಮಾ ಕನ್ನಡದವರ ಜೊತೆಗೆ ತೆಲುಗಿನಲ್ಲೂ ರಿಲೀಸ್ ಆಗಿ ಯಶಸ್ಸು ಕಂಡಿದೆ. ಈ ಸಿನಿಮಾ ಮೊದಲ ದಿನ ಬರೋಬ್ಬರಿ 60 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಂದಹಾಗೆ ಇದು ಭಾರತದ ಕಲೆಕ್ಷನ್ ಮಾತ್ರ. ವಿದೇಶದ ಗಳಿಕೆಯೂ ಸೇರಿದರೆ ಸಿನಿಮಾದ ಕಲೆಕ್ಷನ್ ಮತ್ತಷ್ಟು ಏರಿಕೆ ಆಗುವ ನಿರೀಕ್ಷೆ ಇದೆ.

ರಿಷಬ್ ಶೆಟ್ಟಿ ಅವರು ಹೈದರಾಬಾದ್​ನಲ್ಲಿ ಕನ್ನಡ ಮಾತನಾಡಿದ್ದಕ್ಕೆ ಸಿನಿಮಾ ಮೇಲೆ ಬ್ಯಾನ್ ಹೇರಬೇಕು ಎಂಬ ಕೂಗು ತೆಲುಗು ರಾಜ್ಯಗಳಲ್ಲಿ ಕೇಳಿ ಬಂತು. ಆದರೆ, ಆ ಭಾಗದಲ್ಲಿಯೂ ಸಿನಿಮಾ ಅಬ್ಬರಿಸುತ್ತಿದೆ. ಹೈದರಾಬಾದ್ ಮೊದಲಾದ ಕಡೆಗಳಲ್ಲಿ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಇದು ಚಿತ್ರದ ಹೆಚ್ಚುಗಾರಿಕೆ.

ಇದನ್ನೂ ಓದಿ
Image
ಕ್ಲೈಮ್ಯಾಕ್ಸ್​ನಲ್ಲಿ ‘ಕಾಂತಾರ: ಚಾಪ್ಟರ್ 2’ ಬಗ್ಗೆ ಘೋಷಣೆ
Image
ಪ್ರೀಮಿಯರ್ ಶೋಗಳಿಂದಲೇ ಕೋಟಿ ಕೋಟಿ ಬಾಚಿದ ‘ಕಾಂತಾರ: ಚಾಪ್ಟರ್ 1’
Image
‘ಕಾಂತಾರ: ಚಾಪ್ಟರ್1’ ವಿಮರ್ಶೆ: ದಂತಕಥೆಯಲ್ಲಿ ಅದ್ದೂರಿತನ; ಇದು ದೈವದ ಕಥನ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಬ್ಬರಕ್ಕೆ ಹಲವು ದಾಖಲೆಗಳು ಸೃಷ್ಟಿ ಆಗಿವೆ. ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಮೊದಲ ದಿನ ಭಾರತದಲ್ಲಿ ಗಳಿಕೆ ಮಾಡಿದ್ದು 57 ಕೋಟಿ ರೂಪಾಯಿ. ಈಗ ಈ ದಾಖಲೆಯನ್ನು ‘ಕಾಂತಾರ: ಚಾಪ್ಟರ್ 1’ ಉಡೀಸ್ ಮಾಡಿದೆ.

ಇದನ್ನೂ ಓದಿ: ಹೈದರಾಬಾದ್​​ನಲ್ಲಿ ಶುರುವಾದ ವಿವಾದಕ್ಕೆ ವಿಜಯವಾಡನಲ್ಲಿ ಅಂತ್ಯ ಹಾಡಿದ ರಿಷಬ್ ಶೆಟ್ಟಿ

ಇಂದು ವಾರದ ದಿನ ಆಗಿರುವುದರಿಂದ ಗಳಿಕೆ ಕೊಂಚ ಕುಗ್ಗಬಹುದು. ಆದರೆ, ಶನಿವಾರ ಹಾಗೂ ಭಾನುವಾರ ಸಿನಿಮಾ ಅಬ್ಬರಿಸೋದು ಪಕ್ಕಾ. ಈಗಾಗಲೇ ಬೆಂಗಳೂರಿನಲ್ಲಿ ವೀಕೆಂಡ್ ಟಿಕೆಟ್​ಗಳು ಬಹುತೇಕ ಸೋಲ್ಡ್ ಔಟ್ ಆಗಿದೆ. ಇದು ಸಿನಿಮಾದ ಮೇಲಿನ ಹೈಪ್ ಎಷ್ಟು ಎಂಬುದನ್ನು ತೋರಿಸುತ್ತದೆ. ದುಬಾರಿ ಟಿಕೆಟ್ ದರ ಕೂಡ ಸಿನಿಮಾದ ಕಲೆಕ್ಷನ್ ಹೆಚ್ಚಲು ಕಾರಣ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ