AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ: ಚಾಪ್ಟರ್ 1’ ಅಬ್ಬರ; ಎರಡೇ ದಿನಕ್ಕೆ 100 ಕೋಟಿ ರೂಪಾಯಿ ಕಲೆಕ್ಷನ್

Kantara: Chapter 1 Day 2 Collection: ಕಾಂತಾರ: ಚಾಪ್ಟರ್ 1 ಸಿನಿಮಾ ಕೇವಲ 2 ದಿನಗಳಲ್ಲಿ 100 ಕೋಟಿ ರೂಪಾಯಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿ ಧೂಳೆಬ್ಬಿಸಿದೆ. ಕನ್ನಡಿಗರ ಹೆಮ್ಮೆಯ ಈ ಸಿನಿಮಾ, ಈ ವರ್ಷದ ಎರಡನೇ 100 ಕೋಟಿ ಗಳಿಸಿದ ಕನ್ನಡ ಚಿತ್ರವಾಗಿದೆ. ರಿಷಬ್ ಶೆಟ್ಟಿ ಅವರ ಈ ಸಿನಿಮಾ 'ಕೆಜಿಎಫ್ 2' ನಂತರದ ದೊಡ್ಡ ಸಾಧನೆ ಮಾಡಿದೆ.

ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ: ಚಾಪ್ಟರ್ 1’ ಅಬ್ಬರ; ಎರಡೇ ದಿನಕ್ಕೆ 100 ಕೋಟಿ ರೂಪಾಯಿ ಕಲೆಕ್ಷನ್
ಕಾಂತಾರ
ರಾಜೇಶ್ ದುಗ್ಗುಮನೆ
|

Updated on:Oct 04, 2025 | 7:09 AM

Share

‘ಕಾಂತಾರ: ಚಾಪ್ಟರ್ 1’ (Kantara) ಸಿನಿಮಾ ಧೂಳೆಬ್ಬಿಸಿದೆ. ಈ ಸಿನಿಮಾ ಬಾಕ್ಸ್ ಆಫೀಸ್​​ನೇ ಉಡೀಸ್ ಮಾಡಿದೆ. ಕೇವಲ ಎರಡು ದಿನಕ್ಕೆ ಚಿತ್ರ ಬರೋಬ್ಬರಿ 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ರೀತಿಯ ಅಪರೂಪದ ಸಾಧನೆ ಮಾಡಿದ ಕನ್ನಡದ ಕೆಲವೇ ಚಿತ್ರಗಳ ಸಾಲಿಗೆ ಈ ಸಿನಿಮಾ ಕೂಡ ಸೇರ್ಪಡೆ ಆಗಿದೆ. ಈ ವರ್ಷದ ಎರಡನೇ 100 ಕೋಟಿ ರೂಪಾಯಿ ಕ್ಲಬ್ ಸಿನಿಮಾ ಇದು ಅನ್ನೋದು ವಿಶೇಷ. ಈ ಮೊದಲು ರಾಜ್ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ ಇಂತಹ ಸಾಧನೆ ಮಾಡಿತ್ತು.

ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ಜಯರಾಂ ಮೊದಲಾದವರು ನಟಿಸಿರೋ ‘ಕಾಂತಾರ: ಚಾಪ್ಟರ್ 1’ ಸಿನಿಮಾ ದಸರಾ ಪ್ರಯುಕ್ತ ಅಕ್ಟೋಬರ್ 2ರಂದು ರಿಲೀಸ್ ಆಯಿತು. ಈ ಚಿತ್ರ ಮೊದಲ ದಿನ 62 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಎರಡನೇ ದಿನ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಆಗಿದೆ. ಈ ಸಿನಿಮಾ ಶುಕ್ರವಾರ 43.65 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಚಿತ್ರದ ಹೆಚ್ಚುಗಾರಿಕೆ.

ಭಾರತದಲ್ಲಿ ‘ಕಾಂತಾರ: ಚಾಪ್ಟರ್ 1’ ಚಿತ್ರ 105.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ‘ಕೆಜಿಎಫ್ 2’ ಬಳಿಕ ಎರಡೇ ದಿನಕ್ಕೆ 100 ಕೋಟಿ ರೂಪಾಯಿ ಕ್ಲಬ್ ಸೇರಿದ ಚಿತ್ರ ಇದಾಗಿದೆ. ಕನ್ನಡದ ಸಿನಿಮಾ ಒಂದು ಇಷ್ಟು ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಿರೋದು ಕನ್ನಡಿಗರ ಪಾಲಿಗೆ ಖುಷಿ ತಂದಿದೆ.

ಇದನ್ನೂ ಓದಿ
Image
ಗುಟ್ಟಾಗಿ ನಡೆಯಿತು ರಶ್ಮಿಕಾ-ವಿಜಯ್ ನಿಶ್ಚಿತಾರ್ಥ? ಫೆಬ್ರವರಿಯಲ್ಲಿ ಮದುವೆ
Image
ರಚಿತಾ ರಾಮ್​ಗೆ ಡಿ ಬಾಸ್ ದರ್ಶನ್ ಮೇಲೆ ಯಾಕೆ ಅಷ್ಟು ವಿಶೇಷ ಗೌರವ ಗೊತ್ತಾ?
Image
ಕಾಕ್ರೋಚ್ ಸುಧಿ ಕಾರಣಕ್ಕೆ ಹೊತ್ತಿ ಉರಿಯಿತು ಬಿಗ್ ಬಾಸ್ ಮನೆ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್; ‘ಪಠಾಣ್’ ದಾಖಲೆಯೇ ಉಡೀಸ್

ಭಾಷಾ ವಾರು ಲೆಕ್ಕ..

‘ಕಾಂತಾರ: ಚಾಪ್ಟರ್ 1’ ಚಿತ್ರದ ಮೊದಲ ದಿನ 62 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದರಲ್ಲಿ ಭಾಷಾವಾರು ಲೆಕ್ಕ ಸಿಕ್ಕಿದೆ. ಕನ್ನಡದಿಂದ 20 ಕೋಟಿ ರೂಪಾಯಿ, ತೆಲುಗಿನಿಂದ 13 ಕೋಟಿ ರೂಪಾಯಿ, ಹಿಂದಿಯಿಂದ 18.5 ಕೋಟಿ ರೂಪಾಯಿ, ತಮಿಳಿನಿಂದ 5.5 ಕೋಟಿ ರೂಪಾಯಿ ಹಾಗೂ ಮಲಯಾಳಂನಿಂದ 5.25 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ಸಿನಿಮಾ ಅನಾಯಾಸವಾಗಿ 300 ಕೋಟಿ ರೂಪಾಯಿ ಕ್ಲಬ್ ಸೇರೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:09 am, Sat, 4 October 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!