AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಚಿತ್ರದ ಭಾನುವಾರದ ಕಲೆಕ್ಷನ್ ಇಷ್ಟೊಂದಾ? ನಾಲ್ಕೇ ದಿನಕ್ಕೆ 200 ಕೋಟಿ ಕಲೆಕ್ಷನ್

‘ಕಾಂತಾರ: ಚಾಪ್ಟರ್ 1’ ಚಿತ್ರ ನಾಲ್ಕೇ ದಿನಕ್ಕೆ 200 ಕೋಟಿ ರೂಪಾಯಿ ಗಳಿಸಿ ಅದ್ಭುತ ಯಶಸ್ಸು ಕಂಡಿದೆ. ಭಾನುವಾರದ ಕಲೆಕ್ಷನ್ ಎಲ್ಲರನ್ನೂ ಅಚ್ಚರಿಗೊಳಿಸಿದ್ದು, ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ಸೆಳೆದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದು ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರದ ಭಾನುವಾರದ ಕಲೆಕ್ಷನ್ ಇಷ್ಟೊಂದಾ? ನಾಲ್ಕೇ ದಿನಕ್ಕೆ 200 ಕೋಟಿ ಕಲೆಕ್ಷನ್
ರಿಷಬ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Oct 06, 2025 | 6:58 AM

Share

‘ಕಾಂತಾರ: ಚಾಪ್ಟರ್ 1’ (Kantara: Chapter 1) ಅಬ್ಬರದ ಗಳಿಕೆ ಮಾಡುತ್ತಾ ಸಾಗುತ್ತಿದೆ. ಈ ಚಿತ್ರದ ಭಾನುವಾರದ ಕಲೆಕ್ಷನ್ ನೋಡಿ ಎಲ್ಲರಿಗೂ ಶಾಕ್ ಆಗಿದೆ. ಈ ಸಿನಿಮಾ ಮೊದಲ ಮೂರು ದಿನ ಅಬ್ಬರದ ಕಲೆಕ್ಷನ್ ಮಾಡಿದೆ. ನಾಲ್ಕನೇ ದಿನ ಈ ಅಬ್ಬರ ಮತ್ತಷ್ಟು ಜೋರಾಗಿದೆ. ಊಹೆಗೂ ಮೀರಿದ ಕಲೆಕ್ಷನ್ ಚಿತ್ರಕ್ಕೆ ಆಗುತ್ತಿದೆ. ಈ ಸಿನಿಮಾ ಕೇವಲ ನಾಲ್ಕೇ ದಿನಕ್ಕೆ 200 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಇದು ಚಿತ್ರದ ಹೆಚ್ಚುಗಾರಿಕೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೊಬರ 2ರಂದು ರಿಲೀಸ್ ಆಯಿತು. ಅಂದು ದಸರಾ ಹಾಗೂ ಗಾಂಧೀ ಜಯಂತಿ ಪ್ರಯುಕ್ತ ರಜೆ ಇತ್ತು. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಸಿನಿಮಾಗೆ ಸಿಕ್ಕ ಪಾಸಿಟಿವ್ ಪ್ರತಿಕ್ರಿಯೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಚಿತ್ರಮಂದಿರದತ್ತ ನುಗ್ಗಿದರು. ಮೊದಲ ದಿನ ಸಿನಿಮಾ 62 ಕೋಟಿ ರೂಪಾಯಿ ಅಷ್ಟು ಕಲೆಕ್ಷನ್ ಮಾಡಿತು.

ಎರಡನೇ ದಿನ ಚಿತ್ರಕ್ಕೆ 45.4 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಮೂರನೇ ದಿನ 55 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಯಾವುದೇ ಸಿನಿಮಾಗೆ ಭಾನುವಾರ ಎಷ್ಟು ಉತ್ತಮ ಗಳಿಕೆ ಆಗುತ್ತದೆ ಎನ್ನುವ ಕುತೂಹಲ ಇರುತ್ತದೆ. ಅದೇ ರೀತಿ, ಈ ಚಿತ್ರದ ಭಾನುವಾರದ ಕಲೆಕ್ಷನ್ ಮೇಲೆ ಎಲ್ಲರ ದೃಷ್ಟಿ ಇತ್ತು. ಈಗ ಇದರ ಲೆಕ್ಕ ಸಿಕ್ಕಿದ್ದು, 61 ಕೋಟಿ ರೂಪಾಯಿ ಆಗಿದೆ ಎಂದು sacnilk ಹೇಳಿದೆ.

ಇದನ್ನೂ ಓದಿ
Image
‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ
Image
‘ನೀವು ಆಂಟಿ ಲವರ್ ಅನಿಸುತ್ತೆ’; ಅಭಿಷೇಕ್​ಗೆ ನೇರವಾಗಿ ಹೇಳಿದ ಜಾನ್ವಿ
Image
ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ: ಚಾಪ್ಟರ್ 1’ ಅಬ್ಬರ; 100 ಕೋಟಿ ಕಲೆಕ್ಷನ್
Image
ಗುಟ್ಟಾಗಿ ನಡೆಯಿತು ರಶ್ಮಿಕಾ-ವಿಜಯ್ ನಿಶ್ಚಿತಾರ್ಥ? ಫೆಬ್ರವರಿಯಲ್ಲಿ ಮದುವೆ

ಸದ್ಯ ಚಿತ್ರದ ಒಟ್ಟಾರೆ ಗಳಿಕೆ 223.25 ಕೋಟಿ ರೂಪಾಯಿ ಆಗಿದೆ ಎಂದು sacnilk ವರದಿ ಮಾಡಿದೆ. ಈ ವಾರವೂ ಸಿನಿಮಾ ಒಳ್ಳೆಯ ರೀತಿಯ ಕಲೆಕ್ಷನ್ ಮಾಡಿ ಸಾಗಲಿದೆ. ಆ ಬಳಿಕ ದೀಪಾವಳಿ ಹಬ್ಬದ ಸಮಯದಲ್ಲಿ ಸಿನಿಮಾ ಅದ್ಭುತ ಗಳಿಕೆ ಮಾಡುವುದನ್ನು ಮುಂದುವರಿಸಲಿದೆ.

ಇದನ್ನೂ ಓದಿ: 3ನೇ ದಿನವೂ ‘ಕಾಂತಾರ: ಚಾಪ್ಟರ್ 1’ ಅಬ್ಬರದ ಕಲೆಕ್ಷನ್; ಒಟ್ಟು ಎಷ್ಟಾಯ್ತು?

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ರಿಷಬ್ ಶೆಟ್ಟಿ ನಿರ್ದೇಶನ ಇದೆ. ಅವರು ಈ ಚಿತ್ರದಲ್ಲಿ ಬೆರ್ಮೆ ಹೆಸರಿನ ಪಾತ್ರ ಮಾಡಿದ್ದಾರೆ. ಈ ಸಿನಿಮಾಗೆ ರುಕ್ಮಿಣಿ ವಸಂತ್ ನಾಯಕಿ. ಗುಲ್ಶನ್​ ದೇವಯ್ಯ, ಜಯರಾಂ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಈ ಸಿನಿಮಾದ ಕೊನೆಯಲ್ಲಿ ‘ಕಾಂತಾರ: ಚಾಪ್ಟರ್ 2’ ಬರುವ ಸೂಚನೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ