AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಚಿತ್ರದ ಭಾನುವಾರದ ಕಲೆಕ್ಷನ್ ಇಷ್ಟೊಂದಾ? ನಾಲ್ಕೇ ದಿನಕ್ಕೆ 200 ಕೋಟಿ ಕಲೆಕ್ಷನ್

‘ಕಾಂತಾರ: ಚಾಪ್ಟರ್ 1’ ಚಿತ್ರ ನಾಲ್ಕೇ ದಿನಕ್ಕೆ 200 ಕೋಟಿ ರೂಪಾಯಿ ಗಳಿಸಿ ಅದ್ಭುತ ಯಶಸ್ಸು ಕಂಡಿದೆ. ಭಾನುವಾರದ ಕಲೆಕ್ಷನ್ ಎಲ್ಲರನ್ನೂ ಅಚ್ಚರಿಗೊಳಿಸಿದ್ದು, ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ಸೆಳೆದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದು ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರದ ಭಾನುವಾರದ ಕಲೆಕ್ಷನ್ ಇಷ್ಟೊಂದಾ? ನಾಲ್ಕೇ ದಿನಕ್ಕೆ 200 ಕೋಟಿ ಕಲೆಕ್ಷನ್
ರಿಷಬ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Oct 06, 2025 | 6:58 AM

Share

‘ಕಾಂತಾರ: ಚಾಪ್ಟರ್ 1’ (Kantara: Chapter 1) ಅಬ್ಬರದ ಗಳಿಕೆ ಮಾಡುತ್ತಾ ಸಾಗುತ್ತಿದೆ. ಈ ಚಿತ್ರದ ಭಾನುವಾರದ ಕಲೆಕ್ಷನ್ ನೋಡಿ ಎಲ್ಲರಿಗೂ ಶಾಕ್ ಆಗಿದೆ. ಈ ಸಿನಿಮಾ ಮೊದಲ ಮೂರು ದಿನ ಅಬ್ಬರದ ಕಲೆಕ್ಷನ್ ಮಾಡಿದೆ. ನಾಲ್ಕನೇ ದಿನ ಈ ಅಬ್ಬರ ಮತ್ತಷ್ಟು ಜೋರಾಗಿದೆ. ಊಹೆಗೂ ಮೀರಿದ ಕಲೆಕ್ಷನ್ ಚಿತ್ರಕ್ಕೆ ಆಗುತ್ತಿದೆ. ಈ ಸಿನಿಮಾ ಕೇವಲ ನಾಲ್ಕೇ ದಿನಕ್ಕೆ 200 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಇದು ಚಿತ್ರದ ಹೆಚ್ಚುಗಾರಿಕೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೊಬರ 2ರಂದು ರಿಲೀಸ್ ಆಯಿತು. ಅಂದು ದಸರಾ ಹಾಗೂ ಗಾಂಧೀ ಜಯಂತಿ ಪ್ರಯುಕ್ತ ರಜೆ ಇತ್ತು. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಸಿನಿಮಾಗೆ ಸಿಕ್ಕ ಪಾಸಿಟಿವ್ ಪ್ರತಿಕ್ರಿಯೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಚಿತ್ರಮಂದಿರದತ್ತ ನುಗ್ಗಿದರು. ಮೊದಲ ದಿನ ಸಿನಿಮಾ 62 ಕೋಟಿ ರೂಪಾಯಿ ಅಷ್ಟು ಕಲೆಕ್ಷನ್ ಮಾಡಿತು.

ಎರಡನೇ ದಿನ ಚಿತ್ರಕ್ಕೆ 45.4 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಮೂರನೇ ದಿನ 55 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಯಾವುದೇ ಸಿನಿಮಾಗೆ ಭಾನುವಾರ ಎಷ್ಟು ಉತ್ತಮ ಗಳಿಕೆ ಆಗುತ್ತದೆ ಎನ್ನುವ ಕುತೂಹಲ ಇರುತ್ತದೆ. ಅದೇ ರೀತಿ, ಈ ಚಿತ್ರದ ಭಾನುವಾರದ ಕಲೆಕ್ಷನ್ ಮೇಲೆ ಎಲ್ಲರ ದೃಷ್ಟಿ ಇತ್ತು. ಈಗ ಇದರ ಲೆಕ್ಕ ಸಿಕ್ಕಿದ್ದು, 61 ಕೋಟಿ ರೂಪಾಯಿ ಆಗಿದೆ ಎಂದು sacnilk ಹೇಳಿದೆ.

ಇದನ್ನೂ ಓದಿ
Image
‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ
Image
‘ನೀವು ಆಂಟಿ ಲವರ್ ಅನಿಸುತ್ತೆ’; ಅಭಿಷೇಕ್​ಗೆ ನೇರವಾಗಿ ಹೇಳಿದ ಜಾನ್ವಿ
Image
ಬಾಕ್ಸ್ ಆಫೀಸ್​ನಲ್ಲಿ ‘ಕಾಂತಾರ: ಚಾಪ್ಟರ್ 1’ ಅಬ್ಬರ; 100 ಕೋಟಿ ಕಲೆಕ್ಷನ್
Image
ಗುಟ್ಟಾಗಿ ನಡೆಯಿತು ರಶ್ಮಿಕಾ-ವಿಜಯ್ ನಿಶ್ಚಿತಾರ್ಥ? ಫೆಬ್ರವರಿಯಲ್ಲಿ ಮದುವೆ

ಸದ್ಯ ಚಿತ್ರದ ಒಟ್ಟಾರೆ ಗಳಿಕೆ 223.25 ಕೋಟಿ ರೂಪಾಯಿ ಆಗಿದೆ ಎಂದು sacnilk ವರದಿ ಮಾಡಿದೆ. ಈ ವಾರವೂ ಸಿನಿಮಾ ಒಳ್ಳೆಯ ರೀತಿಯ ಕಲೆಕ್ಷನ್ ಮಾಡಿ ಸಾಗಲಿದೆ. ಆ ಬಳಿಕ ದೀಪಾವಳಿ ಹಬ್ಬದ ಸಮಯದಲ್ಲಿ ಸಿನಿಮಾ ಅದ್ಭುತ ಗಳಿಕೆ ಮಾಡುವುದನ್ನು ಮುಂದುವರಿಸಲಿದೆ.

ಇದನ್ನೂ ಓದಿ: 3ನೇ ದಿನವೂ ‘ಕಾಂತಾರ: ಚಾಪ್ಟರ್ 1’ ಅಬ್ಬರದ ಕಲೆಕ್ಷನ್; ಒಟ್ಟು ಎಷ್ಟಾಯ್ತು?

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ರಿಷಬ್ ಶೆಟ್ಟಿ ನಿರ್ದೇಶನ ಇದೆ. ಅವರು ಈ ಚಿತ್ರದಲ್ಲಿ ಬೆರ್ಮೆ ಹೆಸರಿನ ಪಾತ್ರ ಮಾಡಿದ್ದಾರೆ. ಈ ಸಿನಿಮಾಗೆ ರುಕ್ಮಿಣಿ ವಸಂತ್ ನಾಯಕಿ. ಗುಲ್ಶನ್​ ದೇವಯ್ಯ, ಜಯರಾಂ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಈ ಸಿನಿಮಾದ ಕೊನೆಯಲ್ಲಿ ‘ಕಾಂತಾರ: ಚಾಪ್ಟರ್ 2’ ಬರುವ ಸೂಚನೆ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!