AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ರೇಸ್​​ನಲ್ಲಿ ಸ್ಥಾನ ಪಡೆದ ‘ಕಾಂತಾರ: ಚಾಪ್ಟರ್ 1’ ಸಿನಿಮಾ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ರೇಸ್​​ಗೆ ಪ್ರವೇಶಿಸಿದೆ. ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ಭಾರತದಿಂದ ಅಧಿಕೃತ ಆಯ್ಕೆಯಲ್ಲದಿದ್ದರೂ, ಪ್ರತ್ಯೇಕ ಅರ್ಜಿ ಮೂಲಕ 'ಅತ್ಯುತ್ತಮ ಚಿತ್ರ' ವಿಭಾಗದಲ್ಲಿ ಸ್ಪರ್ಧಿಸುತ್ತಿದೆ. 850 ಕೋಟಿಗೂ ಹೆಚ್ಚು ಗಳಿಸಿ, ಒಟಿಟಿಯಲ್ಲೂ ಮೆಚ್ಚುಗೆ ಪಡೆದ ಈ ಚಿತ್ರ ಹಾಲಿವುಡ್ ಸಿನಿಮಾಗಳ ಜೊತೆ ಸ್ಪರ್ಧಿಸಲಿದೆ.

ಆಸ್ಕರ್ ರೇಸ್​​ನಲ್ಲಿ ಸ್ಥಾನ ಪಡೆದ ‘ಕಾಂತಾರ: ಚಾಪ್ಟರ್ 1’ ಸಿನಿಮಾ
ಕಾಂತಾರ
ರಾಜೇಶ್ ದುಗ್ಗುಮನೆ
|

Updated on: Jan 09, 2026 | 8:40 AM

Share

ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಈಗ ಆಸ್ಕರ್ ರೇಸ್​​ನಲ್ಲಿ ಸ್ಥಾನ ಪಡೆದಿದೆ. ಇದು ಭಾರತದಿಂದ ಅಧಿಕೃತವಾಗಿ ಆಯ್ಕೆ ಆದ ಸಿನಿಮಾ ಅಲ್ಲ. ಪ್ರತ್ಯೇಕವಾಗಿ ಅರ್ಜಿ ಸಲ್ಲಿಕೆ ಮಾಡಿ ಸಿನಿಮಾ ರೇಸ್​ಗೆ ಪ್ರವೇಶ ಪಡೆದುಕೊಂಡಿದೆ. ‘ಅತ್ಯುತ್ತಮ ಚಿತ್ರ’ ರೇಸ್​​ನಲ್ಲಿ ರಿಷಬ್ ನಿರ್ದೇಶನದ ಚಿತ್ರ ಇದೆ ಎಂಬುದು ಕನ್ನಡಿಗರ ಪಾಲಿಗೆ ಹೆಮ್ಮೆಯ ಸಂಗತಿ. ಹಾಲಿವುಡ್ ಸಿನಿಮಾಗಳ ಜೊತೆ ರಿಷಬ್ ಸಿನಿಮಾ ಸ್ಪರ್ಧೆ ಮಾಡಬೇಕಿದೆ.

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿರ್ದೇಶನ ಮಾಡಿದರು. ಈ ಚಿತ್ರವನ್ನು ಜನರು ಇಷ್ಟಪಟ್ಟಿದ್ದು, ಬಾಕ್ಸ್ ಆಫೀಸ್​​ನಲ್ಲಿ 850 ಕೋಟಿ ರೂಪಾಯಿಗೂ ಹೆಚ್ಚಿನ ಬಿಸ್ನೆಸ್ ಮಾಡಿದೆ.ಈ ಸಿನಿಮಾ ಒಟಿಟಿಯಲ್ಲೂ ಪ್ರಸಾರ ಕಂಡಿದೆ. ಹೀಗಿರುವಾಗಲೇ ಸಿನಿಮಾ ಆಸ್ಕರ್​ ರೇಸ್​​ನಲ್ಲಿ ಸ್ಥಾನ ಪಡೆದುಕೊಂಡಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ನಿರ್ಮಾಣ ಮಾಡಿದ್ದು ವಿಜಯ್ ಕಿರಗಂದೂರು ಅವರು ‘ಹೊಂಬಾಳೆ ಫಿಲ್ಮ್ಸ್’. ಈ ಸಂಸ್ಥೆ ಪ್ರಸ್ತುತಪಡಿಸಿದ ‘ಮಹಾವತಾರ ನರಸಿಂಹ’ ಕೂಡ ಸಾಮಾನ್ಯ ಪ್ರವೇಶ ಪಟ್ಟಿ ಮೂಲಕ ರೇಸ್​​ನಲ್ಲಿ ಸ್ಥಾನ ಪಡೆದಿದೆ. ಹಲವು ಹಂತಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಈ ಎರಡು ಸಿನಿಮಾಗಳ ಪೈಕಿ ಯಾವುದಾದರೂ ಚಿತ್ರಕ್ಕೆ ಗೆಲುವು ಸಿಗುತ್ತದೆಯೇ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಪ್ರೀತಿಯಿಂದ ವಿಶ್ ಮಾಡಿದ ರಿಷಬ್ ಶೆಟ್ಟಿ

ಈವರೆಗೆ ಭಾರತದಲ್ಲಿ ನಿರ್ಮಾಣವಾದ ಯಾವುದೇ ಚಿತ್ರಕ್ಕೆ ಆಸ್ಕರ್ ಸಿಕ್ಕಿಲ್ಲ. ಈ ಮೊದಲು ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ದಾಖಲೆ ಬರೆದಿತ್ತು. ಪ್ರತ್ಯೇಕವಾಗಿ ಅರ್ಜಿ ಸಲ್ಲಿಕೆ ಮಾಡಿ ರೇಸ್​​ನಲ್ಲಿ ಈ ಹಾಡು ಸ್ಥಾನ ಪಡೆದುಕೊಂಡಿತ್ತು. ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ರಿಷಬ್  ನಿರ್ದೇಶನ ಮಾಡಿ, ನಟಿಸಿದ್ದಾರೆ. ರುಕ್ಮಿಣಿ ವಸಂತ್, ಜಯರಾಮ್, ಗುಲ್ಶನ್ ದೇವಯ್ಯ ಸೇರಿದಂತೆ ಅನೇಕರು ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್