Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್​ನಲ್ಲಿ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ದಾಖಲೆ; 24 ಗಂಟೆಯಲ್ಲಿ ಆದ ವೀವ್ಸ್ ಎಷ್ಟು?

‘ಕಾಂತಾರ’ ಚಿತ್ರದ ಪ್ರಿಕ್ವೆಲ್ ಆಗಿ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಫಸ್ಟ್ ಲುಕ್ ಟೀಸರ್ ನವೆಂಬರ್ 27ರಂದು ರಿಲೀಸ್ ಆಗಿದೆ. 24 ಗಂಟೆಯಲ್ಲಿ ಈ ಟೀಸರ್ 12 ಮಿಲಿಯನ್ ವೀಕ್ಷಣೆ ಕಂಡಿದೆ. ಅಂದರೆ, 1.2 ಕೋಟಿ ವೀವ್ಸ್ ಆಗಿದೆ.

ಯೂಟ್ಯೂಬ್​ನಲ್ಲಿ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ದಾಖಲೆ; 24 ಗಂಟೆಯಲ್ಲಿ ಆದ ವೀವ್ಸ್ ಎಷ್ಟು?
ರಿಷಬ್
Follow us
ರಾಜೇಶ್ ದುಗ್ಗುಮನೆ
|

Updated on: Nov 28, 2023 | 12:56 PM

‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಕಾರಣದಿಂದ ‘ಕಾಂತಾರ’ (Kantara Movie) ಪ್ರಿಕ್ವೆಲ್ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ನವೆಂಬರ್ 27ರಂದು ರಿಲೀಸ್ ಆದ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ಕಂಡ ವೀಕ್ಷಣೆಯೇ ಇದಕ್ಕೆ ಸಾಕ್ಷಿ. ಏಳು ಭಾಷೆಗಳಲ್ಲಿ ರಿಲೀಸ್ ಆಗಿರುವ ಈ ಟೀಸರ್ ಬರೋಬ್ಬರಿ 12 ಮಿಲಿಯನ್ ಅಂದರೆ 1.2 ಕೋಟಿ ಬಾರಿ ವೀಕ್ಷಣೆ ಕಂಡಿದೆ. ಈ ಮೂಲಕ ಹಲವು ದಾಖಲೆಗಳನ್ನು ಇದು ಸರಿಗಟ್ಟಿದೆ.

ಕಳೆದ ವರ್ಷ ‘ಕಾಂತಾರ’ ಸಿನಿಮಾ ರಿಲೀಸ್ ಆಯಿತು. ಇದಾದ ಬಳಿಕ ಎರಡನೇ ಪಾರ್ಟ್ ಮಾಡಲು ರಿಷಬ್ ಶೆಟ್ಟಿ ಮುಂದಾದರು. ಸ್ಕ್ರಿಪ್ಟ್ ಕೆಲಸಕ್ಕೆ ಅವರು ಸಾಕಷ್ಟು ಶ್ರಮ ಹಾಕಿದ್ದಾರೆ. ಬಹಳ ಶ್ರದ್ಧೆಯಿಂದ ಕುಳಿತು ಅವರು ಸ್ಕ್ರಿಪ್ಟ್ ರೆಡಿ ಮಾಡಿಕೊಂಡಿದ್ದಾರೆ. ನವೆಂಬರ್ 27ರಂದು ಕುಂದಾಪುರ ಆನೆಗುಡ್ಡೆ ದೇವಾಲಯದಲ್ಲಿ ಚಿತ್ರತಂಡ ಸ್ಕ್ರಿಪ್ಟ್ ಪೂಜೆ ಮಾಡಿದೆ. ಜೊತೆಗೆ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ.

ರಿಷಬ್ ಶೆಟ್ಟಿ ಅವರು ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಹಿಡಿದಿದ್ದಾರೆ. ಈ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ‘ಇದು ಬೆಳಕಲ್ಲ ದರ್ಶನ’ ಎನ್ನುವ ಡೈಲಾಗ್ ಕೇಳಿದೆ. ‘ಕಾಂತಾರ’ ಸಿನಿಮಾದಲ್ಲಿ ಈ ಡೈಲಾಗ್ ಹೆಚ್ಚು ಹೈಲೈಟ್ ಆಗಿತ್ತು. ಆ ಡೈಲಾಗ್ ಇಲ್ಲಿಯೂ ಇದೆ. ಕದಂಬರ ಕಾಲದ ಕಥೆ ಸಿನಿಮಾದಲ್ಲಿ ಇದೆ.

ಇದನ್ನೂ ಓದಿ: ‘ಕಥೆಯ ಬಗ್ಗೆ ಏನೂ ಹೇಳಲ್ಲ, ಸಿನಿಮಾನೇ ಮಾತನಾಡುತ್ತದೆ’; ‘ಕಾಂತಾರ ಚಾಪ್ಟರ್ 1’ ಬಗ್ಗೆ ರಿಷಬ್ ಶೆಟ್ಟಿ ಮಾತು

ಸದ್ಯ ರಿಷಬ್ ಶೆಟ್ಟಿ ಅವರು ಕಥೆಯ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ‘ಈ ಹಿಂದೆ ಏನಾಗಿತ್ತು ಎಂಬುದನ್ನು ಹೇಳ ಹೊರಟಿದ್ದೇವೆ. ಜವಾಬ್ದಾರಿ ಹೆಚ್ಚಿದೆ. ಕಥೆ ಹೇಳಲ್ಲ, ಸಿನಿಮಾನೇ ಮಾತನಾಡುತ್ತದೆ’ ಎಂದಿದ್ದರು ರಿಷಬ್ ಶೆಟ್ಟಿ. ‘ಕಾಂತಾರ’ ಸಿನಿಮಾದ ಆರಂಭದಲ್ಲಿ ರಾಜನ ಕಥೆ ಬರುತ್ತದೆ. ಅದೇ ‘ಕಾಂತಾರ ಚಾಪ್ಟರ್ 1’ ಚಿತ್ರದ ಜೀವಾಳವೇ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ