AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ ಚಾಪ್ಟರ್ 1’ ವಿತರಣೆ ಹಕ್ಕು ಖರೀದಿಸಿದ ಸ್ಟಾರ್ ನಟ

Kantara Chapter 1: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿ, ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಕೊನೆಯ ಪ್ರಿಂಟ್ ಬಹುತೇಕ ರೆಡಿಯಾಗಿದ್ದು ಸಿನಿಮಾದ ಪ್ರಚಾರ ಕಾರ್ಯ ಕೆಲವೇ ದಿನಗಳಲ್ಲಿ ಆರಂಭ ಆಗಲಿದ್ದು, ಸಿನಿಮಾದ ವಿತರಣೆ ಇನ್ನಿತರೆ ಬ್ಯುಸಿನೆಸ್​ ಅನ್ನು ಹೊಂಬಾಳೆ ಫಿಲಮ್ಸ್ ಆರಂಭ ಮಾಡಿದೆ. ಇದೀಗ ಸಿನಿಮಾದ ವಿತರಣೆ ಹಕ್ಕನ್ನು ಪ್ಯಾನ್ ಇಂಡಿಯಾ ಸ್ಟಾರ್ ನಟರೊಬ್ಬರು ಖರೀದಿ ಮಾಡಿದ್ದಾರೆ.

‘ಕಾಂತಾರ ಚಾಪ್ಟರ್ 1’ ವಿತರಣೆ ಹಕ್ಕು ಖರೀದಿಸಿದ ಸ್ಟಾರ್ ನಟ
Kantara Chapter 1
ಮಂಜುನಾಥ ಸಿ.
|

Updated on: Sep 09, 2025 | 4:05 PM

Share

ಹೊಂಬಾಳೆ (Hombale) ನಿರ್ಮಿಸಿ, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಕೊನೆಯ ಪ್ರಿಂಟ್ ಬಹುತೇಕ ರೆಡಿಯಾಗಿದ್ದು ಸಿನಿಮಾದ ಪ್ರಚಾರ ಕಾರ್ಯ ಕೆಲವೇ ದಿನಗಳಲ್ಲಿ ಆರಂಭ ಆಗಲಿದ್ದು, ಸಿನಿಮಾದ ವಿತರಣೆ ಇನ್ನಿತರೆ ಬ್ಯುಸಿನೆಸ್​ ಅನ್ನು ಹೊಂಬಾಳೆ ಫಿಲಮ್ಸ್ ಆರಂಭ ಮಾಡಿದೆ. ಇದೀಗ ಸಿನಿಮಾದ ವಿತರಣೆ ಹಕ್ಕನ್ನು ಪ್ಯಾನ್ ಇಂಡಿಯಾ ಸ್ಟಾರ್ ನಟರೊಬ್ಬರು ಖರೀದಿ ಮಾಡಿದ್ದಾರೆ.

‘ಕಾಂತಾರ ಚಾಪ್ಟರ್ 1’ ಸಿನಿಮಾದ ಕೇರಳ ವಿತರಣೆ ಹಕ್ಕನ್ನು ಪ್ಯಾನ್ ಇಂಡಿಯಾ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ ಖರೀದಿ ಮಾಡಿದ್ದಾರೆ. ಹೊಂಬಾಳೆ ಮತ್ತು ಪೃಥ್ವಿರಾಜ್ ಸುಕುಮಾರನ್ ನಡುವೆ ಬಲು ಆಪ್ತ ನಂಟಿದ್ದು, ಹೊಂಬಾಳೆ ನಿರ್ಮಾಣ ಮಾಡಿದ್ದ ‘ಕೆಜಿಎಫ್’, ‘ಕೆಜಿಎಫ್ 2’ ಮತ್ತು ‘ಕಾಂತಾರ’ ಸಿನಿಮಾಗಳ ಕೇರಳ ರಾಜ್ಯ ವಿತರಣೆ ಹಕ್ಕನ್ನು ಈ ಹಿಂದೆ ಪೃಥ್ವಿರಾಜ್ ಸುಕುಮಾರನ್ ಅವರೇ ಖರೀದಿ ಮಾಡಿದ್ದರು. ಇದೀಗ ‘ಕಾಂತಾರ ಚಾಪ್ಟರ್ 1’ ಸಿನಿಮಾದ ವಿತರಣೆ ಹಕ್ಕನ್ನು ಸಹ ಪೃಥ್ವಿರಾಜ್ ಅವರೇ ಖರೀದಿ ಮಾಡಿದ್ದಾರೆ.

‘ಕಾಂತಾರ ಚಾಪ್ಟರ್ 1’ ಸಿನಿಮಾ ಪ್ಯಾನ್ ಇಂಡಿಯಾ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಸಹ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಇನ್ನೂ ಹಲವೆಡೆ ‘ಕಾಂತಾರ ಚಾಪ್ಟರ್ 1’ ಸಿನಿಮಾ ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗಲಿದ್ದು, ವಿದೇಶದ ವಿತರಣೆ ಹಕ್ಕನ್ನು ಭಾರಿ ದೊಡ್ಡ ಮೊತ್ತಕ್ಕೆ ಹೊಂಬಾಳೆ ಫಿಲಮ್ಸ್ ಮಾರಾಟ ಮಾಡಿದೆಯಂತೆ.

ಇದನ್ನೂ ಓದಿ:ಹೊಸ ದಾಖಲೆ ಬರೆದ ಹೊಂಬಾಳೆಯ ‘ಮಹಾವತಾರ ನರಸಿಂಹ’

ಇನ್ನು ಸಿನಿಮಾದ ಉತ್ತರ ಭಾರತ ಬಿಡುಗಡೆ ಹಕ್ಕನ್ನು ಈ ಹಿಂದೆ ಹೊಂಬಾಳೆಯ ಸಿನಿಮಾಗಳನ್ನು ಉತ್ತರ ಭಾರತದಲ್ಲಿ ಬಿಡುಗಡೆ ಮಾಡಿದ್ದ ಅನಿಲ್ ಟಂಡಾನಿ ಅವರೇ ಬಿಡುಗಡೆ ಮಾಡಲಿದ್ದಾರಂತೆ. ಇನ್ನೂ ಕೆಲ ರಾಜ್ಯಗಳ ಬಿಡುಗಡೆ ಹಕ್ಕುಗಳ ಮಾರಾಟಕ್ಕೆ ಹೊಂಬಾಳೆ ಫಿಲಮ್ಸ್ ಮಾತುಕತೆ ನಡೆಸುತ್ತಿದೆ. ಇನ್ನು ಕರ್ನಾಟಕದಲ್ಲಿ ಸ್ವತಃ ಹೊಂಬಾಳೆಯವರೇ ವಿತರಣೆ ಮಾಡಲಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ, ಈ ಹಿಂದೆ ಬಿಡುಗಡೆ ಆಗಿದ್ದ ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್ ಆಗಿದೆ. ‘ಕಾಂತಾರ’ ಸಿನಿಮಾದ ಐದಾರು ಪಟ್ಟು ಹೆಚ್ಚಿನ ಬಂಡವಾಳ ಹಾಕಲಾಗಿದೆ. ಸಿನಿಮಾನಲ್ಲಿ ರುಕ್ಮಿಣಿ ವಸಂತ್ ನಾಯಕಿ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾಕ್ಕಾಗಿ ಕೆಲವು ಹಾಲಿವುಡ್ ತಂತ್ರಜ್ಞರು ಕೆಲಸ ಮಾಡಿದ್ದಾರೆ. ಸಿನಿಮಾ ಅಕ್ಟೋಬರ್ 02 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ