AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ದಾಖಲೆಯನ್ನು ಒಂದೇ ವಾರದಲ್ಲಿ ಮುರಿದ ‘ಕಾಂತಾರ: ಚಾಪ್ಟರ್ 1’

Kantara Chapter 1: ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ಗಳಿಕೆ ಮಾಡುತ್ತಿದೆ. ಸಿನಿಮಾ ಬಿಡುಗಡೆ ಆಗಿ ಎಂಟು ದಿನಗಳಾಗಿದ್ದು ಸಿನಿಮಾದ ವರ್ಲ್ಡ್ ವೈಡ್ ಕಲೆಕ್ಷನ್ 500 ಕೋಟಿ ಕಲೆಕ್ಷನ್ ಮಾಡಿದೆ. ‘ಕೆಜಿಎಫ್: ಚಾಪ್ಟರ್ 1’ ಸಿನಿಮಾ, 2022ರ ‘ಕಾಂತಾರ’ ಸಿನಿಮಾದ ಲೈಫ್ ಟೈಮ್ ಕಲೆಕ್ಷನ್ ದಾಖಲೆಯನ್ನು ಒಂದೇ ವಾರಕ್ಕೆ ಮುರಿದಿದೆ.

‘ಕಾಂತಾರ’ ದಾಖಲೆಯನ್ನು ಒಂದೇ ವಾರದಲ್ಲಿ ಮುರಿದ ‘ಕಾಂತಾರ: ಚಾಪ್ಟರ್ 1’
Kantara Chapter 1
ಮಂಜುನಾಥ ಸಿ.
|

Updated on:Oct 10, 2025 | 1:17 PM

Share

ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ನಿನ್ನೆಗೆ (ಅಕ್ಟೋಬರ್ 09) ಎಂಟು ದಿನಗಳಾಗಿವೆ. ಬಾಕ್ಸ್ ಆಫೀಸ್​​ನಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಭಾರತದಲ್ಲಿ ಮಾತ್ರವೇ ಅಲ್ಲದೆ ವಿದೇಶಗಳಲ್ಲಿಯೂ ಸಹ ಸಿನಿಮಾ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುತ್ತಿದೆ. ಸಿನಿಮಾ ಬಿಡುಗಡೆ ಆದ ಎಂಟು ದಿನಗಳಲ್ಲಿ 2022ರ ‘ಕಾಂತಾರ’ ಮತ್ತು ‘ಕೆಜಿಎಫ್ 1’ ಸಿನಿಮಾದ ಕಲೆಕ್ಷನ್ ದಾಖಲೆಗಳನ್ನು ಮುರಿದಿದೆ ‘ಕಾಂತಾರ: ಚಾಪ್ಟರ್ 1’ ಸಿನಿಮಾ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆದ ಎಂಟು ದಿನಗಳಲ್ಲಿ ಭಾರತದಲ್ಲಿ 330 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತವನ್ನು ಗಳಿಕೆ ಮಾಡಿದೆ. ವಾರದ ದಿನಗಳಲ್ಲಿಯೂ ಸಹ ಸಿನಿಮಾದ ಕಲೆಕ್ಷನ್​​​ನಲ್ಲಿ ದೊಡ್ಡ ಮಟ್ಟದ ಕುಸಿತ ಉಂಟಾಗಿಲ್ಲ ಎನ್ನುವುದು ವಿಶೇಷ. ಕಳೆದ ಸೋಮವಾರದಂದು 31.5 ಕೋಟಿ, ಮಂಗಳವಾರದಂದು 33.50 ಕೋಟಿ ಗಳಿಕೆ ಮಾಡಿದ್ದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬುಧವಾರ ಕಲೆಕ್ಷನ್​​​ನಲ್ಲಿ ತುಸು ಕಡಿಮೆ ಆಗಿತ್ತು, 25 ಕೋಟಿ, ನಿನ್ನೆ ಗುರುವಾರದಂದು ಸಿನಿಮಾ 20.50 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಆದರೆ ಶುಕ್ರವಾರದಿಂದ ಮತ್ತೆ ಸಿನಿಮಾದ ಕಲೆಕ್ಷನ್ ಹೆಚ್ಚಾಗುವ ಸೂಚನೆಗಳಿವೆ. ವೀಕೆಂಡ್​​​ನಲ್ಲಿ ಮತ್ತೆ ಸಿನಿಮಾದ ಕಲೆಕ್ಷನ್ ಏರಿಕೆ ಆಗುವುದು ಪಕ್ಕಾ ಎನ್ನಲಾಗುತ್ತಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಒಂದೇ ವಾರಕ್ಕೆ 2022 ರಲ್ಲಿ ಬಿಡುಗಡೆ ಆಗಿದ್ದ ‘ಕಾಂತಾರ’ ಮತ್ತು ಕನ್ನಡದ ಮೊದಲ ಬಾಕ್ಸ್ ಆಫೀಸ್ ಬ್ಲಾಕ್ ಬಸ್ಟರ್ ಸಿನಿಮಾ ‘ಕೆಜಿಎಫ್ 1’ ದಾಖಲೆಗಳನ್ನು ಹಿಂದಿಕ್ಕಿದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರತದಲ್ಲಿ ಎಂಟು ದಿನಗಳಲ್ಲಿ ಸುಮಾರು 350 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಿಶ್ವದಾದ್ಯಂತ ಸುಮಾರು 500 ಕೋಟಿ ಗಳಿಕೆ ಮಾಡಿದೆ.

ಇದನ್ನೂ ಓದಿ:‘ಕಾಂತಾರ’ದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆದ ರುಕ್ಮಿಣಿ ವಸಂತ್

2022ರ ‘ಕಾಂತಾರ’ ಸಿನಿಮಾ ವಿಶ್ವದಾದ್ಯಂತ 450 ಕೋಟಿ ಗಳಿಕೆ ಮಾಡಿತ್ತು. 2018 ರಲ್ಲಿ ಬಿಡುಗಡೆ ಆಗಿದ್ದ ‘ಕೆಜಿಎಫ್ 1’ ಸಿನಿಮಾ 250 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಇದೀಗ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೇವಲ ಒಂದು ವಾರದಲ್ಲಿ ಎರಡೂ ಸಿನಿಮಾಗಳ ದಾಖಲೆಗಳನ್ನು ಅಳಿಸಿ ಹಾಕಿದೆ. ಮಾತ್ರವಲ್ಲದೆ ರಜನೀಕಾಂತ್​​ರ ‘ಕೂಲಿ’ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಅನ್ನೂ ಸಹ ಹಿಂದಿಕ್ಕಿ ಮುಂದೆ ನುಗ್ಗುತ್ತಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ಸುಮಾರು 125 ಕೋಟಿ ರೂಪಾಯಿ ಬಜೆಟ್ ಅನ್ನು ಹೊಂಬಾಳೆ ಫಿಲಮ್ಸ್ ಹಾಕಿದೆ. ಇತ್ತೀಚೆಗಿನ ಕೆಲ ಪ್ಯಾನ್ ಇಂಡಿಯಾ ಸಿನಿಮಾಗಳಿಗೆ ಹೋಲಿಸಿದರೆ ಈ ಬಜೆಟ್ ಬಹಳ ಸಣ್ಣದು. ಹಾಗಿದ್ದರೂ ಸಹ ಸಿನಿಮಾ ಭಾರಿ ದೊಡ್ಡ ಕಲೆಕ್ಷನ್ ಅನ್ನೇ ಮಾಡುತ್ತಿದೆ. ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸುಮಾರು 600 ಕೋಟಿಗೂ ಹೆಚ್ಚಿನ ಮೊತ್ತವನ್ನು ಗಳಿಕೆ ಮಾಡುವ ಅಂದಾಜಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:24 am, Fri, 10 October 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ