AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಚಿತ್ರದ ಮೊದಲಾರ್ಧ ವಿಮರ್ಶೆ; ರಿಷಬ್ ಚಿತ್ರದಲ್ಲಿ ಏನೆಲ್ಲ ಇದೆ?

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಮೂಲಕ ವಿಶ್ವಾದ್ಯಂತ ಜನಪ್ರಿಯತೆ ಪಡೆದರು. ಈಗ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ರುಕ್ಮಿಣಿ ವಸಂತ್ ಅವರು ಈ ಚಿತ್ರಕ್ಕೆ ನಾಯಕಿ. ಸಿನಿಮಾನ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಈ ಚಿತ್ರದ ಮೊದಲಾರ್ಧದ ವಿಮರ್ಶೆ ಇಲ್ಲಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರದ ಮೊದಲಾರ್ಧ ವಿಮರ್ಶೆ; ರಿಷಬ್ ಚಿತ್ರದಲ್ಲಿ ಏನೆಲ್ಲ ಇದೆ?
ರಿಷಬ್-ರುಕ್ಮಿಣಿ
ರಾಜೇಶ್ ದುಗ್ಗುಮನೆ
| Edited By: |

Updated on:Oct 01, 2025 | 8:32 PM

Share

‘ಕಾಂತಾರ: ಚಾಪ್ಟರ್ 1’ (Kantara Chapter 1) ಚಿತ್ರ ಅನೌನ್ಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿಸುತ್ತಾ ಬಂದಿದೆ. ಈಗ ಈ ಚಿತ್ರ ರಿಲೀಸ್ ಆಗಿದೆ. ರಾಜ್ಯಾದ್ಯಂತ ವಿವಿಧ ಕಡೆಗಳಲ್ಲಿ ಸಿನಿಮಾಗೆ ಪ್ರೀಮಿಯರ್ ಶೋನ ಆಯೋಜನೆ ಮಾಡಲಾಗಿದೆ. ಈ ಸಿನಿಮಾ ಟ್ರೇಲರ್ ಮೂಲಕ ಗಮನ ಸೆಳೆದಿದೆ. ರಿಷಬ್ ಶೆಟ್ಟಿ (Rishab Shetty) ಅವರು ಈ ಚಿತ್ರದ ಮೂಲಕ ಏನನ್ನು ಹೇಳಲು ಹೊರಟಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಿಗೆ ಇದೆ. ಹಾಗಾದರೆ ಈ ಚಿತ್ರದ ಇಂಟರ್​ವಲ್​ತನಕ ಏನೆಲ್ಲ ಇದೆ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಸಂಪೂರ್ಣ ವಿಮರ್ಶೆ ಇನ್ನು ಕೆಲವೇ ಗಂಟೆಗಳಲ್ಲಿ ಅಪ್​ಲೋಡ್ ಆಗಲಿದೆ.

  • ಮೊದಲ ದೃಶ್ಯವೇ ರೋಮಾಂಚಕವಾಗಿದೆ. ಬ್ರಹ್ಮರಾಕ್ಷಸನ ದರ್ಶನವಾಗಿದೆ.
  • ಸಿನಿಮಾ ಆರಂಭವಾದ ಕೆಲವೇ ಹೊತ್ತಲ್ಲಿ‌‌ ರಥದ ಚೇಸಿಂಗ್ ದೃಶ್ಯ ಬರುತ್ತದೆ. ಇದರಲ್ಲಿ ರಿಷಬ್ ತೆಗೆದುಕೊಂಡ‌ ರಿಸ್ಕ್ ಕಾಣಿಸುತ್ತದೆ.
  • ಪ್ರಕಾಶ್ ತುಮಿನಾಡ್ ಕಡೆಯಿಂದ ಹಾಸ್ಯದ ಹೊಳೆ ಹರಿಯುತ್ತದೆ. ಅವರು ಬಹುವಾಗಿ ನಗಿಸುತ್ತಾರೆ.
  • ರಿಷಬ್ ಹಾಗೂ ರುಕ್ಮಿಣಿ ಪ್ರೇಮಕತೆ ಮೊದಲಾರ್ಧದಲ್ಲಿ ಬರುತ್ತದೆ. ರೊಮ್ಯಾಂಟಿಕ್ ಸಾಂಗ್ ಕೂಡ ಇದೆ.
  • ‘ಕಾಂತಾರ: ಚಾಪ್ಟರ್ 1’ ಸಿನಿಮಾನ ರಿಷಬ್ ಶೆಟ್ಟಿ ಅವರು ಅದ್ದೂರಿಯಾಗಿ ಕಟ್ಟಿಕೊಟ್ಟಿದ್ದಾರೆ. ಮೊದಲಾರ್ಧದ ಎಲ್ಲಾ ಫ್ರೇಮ್ಗಳು ಅದ್ದೂರಿಯಾಗಿ ಮೂಡಿಬಂದಿವೆ.
  • ರುಕ್ಮಿಣಿ ವಸಂತ್ ಅವರು ಯುವರಾಣಿಯಾಗಿ ಕಾಣಿಸಿಕೊಂಡಿದ್ದಾರೆ. ಅವರ ಅಂದಕ್ಕೆ ಮನಸೋಲದವರೇ ಇಲ್ಲ ಎನ್ನಬಹುದು.
  • ‘ಕಾಂತಾರ’ ಚಿತ್ರದ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಗಮನ ಸೆಳೆದಿತ್ತು. ಎರಡನೇ ಪಾರ್ಟ್ನಲ್ಲೂ ಅದು ಮುಂದುವರಿದಿದೆ. ಸಿನಿಮಾ ಉದ್ದಕ್ಕೂ ಅವರ ಸಂಗೀತ ಗಮನ ಸೆಳೆಯುವಂತಿದೆ.
  • ಹಿನ್ನೆಲೆ ಸಂಗೀತ ಸಂಯೋಜನೆ ಸಿನಿಮಾಗೆ ತೂಕ ಕೊಡುತ್ತದೆ. ಛಾಯಾಗ್ರಹಣ ಕೂಡ ಅದ್ಭುತವಾಗಿ ಮೂಡಿಬಂದಿದೆ.
  • ಕಾಡು ಹಾಗೂ ನಾಡಿನ ತಿಕ್ಕಾಟವನ್ನು ತೋರಿಸುವ ಪ್ರಯತ್ನ ನಡೆದಿದೆ.
  • ಮೈವಿರೇಳಿಸುವ ದೃಶ್ಯ ಹಾಗೂ ಟ್ವಿಸ್ಟ್ ಮೂಲಕ ಮಧ್ಯಂತರದ ಬೋರ್ಡ್ ಬರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:31 pm, Wed, 1 October 25

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು