AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಚಿತ್ರದ ಮೊದಲಾರ್ಧ ವಿಮರ್ಶೆ; ರಿಷಬ್ ಚಿತ್ರದಲ್ಲಿ ಏನೆಲ್ಲ ಇದೆ?

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಮೂಲಕ ವಿಶ್ವಾದ್ಯಂತ ಜನಪ್ರಿಯತೆ ಪಡೆದರು. ಈಗ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ರುಕ್ಮಿಣಿ ವಸಂತ್ ಅವರು ಈ ಚಿತ್ರಕ್ಕೆ ನಾಯಕಿ. ಸಿನಿಮಾನ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಈ ಚಿತ್ರದ ಮೊದಲಾರ್ಧದ ವಿಮರ್ಶೆ ಇಲ್ಲಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರದ ಮೊದಲಾರ್ಧ ವಿಮರ್ಶೆ; ರಿಷಬ್ ಚಿತ್ರದಲ್ಲಿ ಏನೆಲ್ಲ ಇದೆ?
ರಿಷಬ್-ರುಕ್ಮಿಣಿ
ರಾಜೇಶ್ ದುಗ್ಗುಮನೆ
| Edited By: |

Updated on:Oct 01, 2025 | 8:32 PM

Share

‘ಕಾಂತಾರ: ಚಾಪ್ಟರ್ 1’ (Kantara Chapter 1) ಚಿತ್ರ ಅನೌನ್ಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿಸುತ್ತಾ ಬಂದಿದೆ. ಈಗ ಈ ಚಿತ್ರ ರಿಲೀಸ್ ಆಗಿದೆ. ರಾಜ್ಯಾದ್ಯಂತ ವಿವಿಧ ಕಡೆಗಳಲ್ಲಿ ಸಿನಿಮಾಗೆ ಪ್ರೀಮಿಯರ್ ಶೋನ ಆಯೋಜನೆ ಮಾಡಲಾಗಿದೆ. ಈ ಸಿನಿಮಾ ಟ್ರೇಲರ್ ಮೂಲಕ ಗಮನ ಸೆಳೆದಿದೆ. ರಿಷಬ್ ಶೆಟ್ಟಿ (Rishab Shetty) ಅವರು ಈ ಚಿತ್ರದ ಮೂಲಕ ಏನನ್ನು ಹೇಳಲು ಹೊರಟಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಿಗೆ ಇದೆ. ಹಾಗಾದರೆ ಈ ಚಿತ್ರದ ಇಂಟರ್​ವಲ್​ತನಕ ಏನೆಲ್ಲ ಇದೆ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಸಂಪೂರ್ಣ ವಿಮರ್ಶೆ ಇನ್ನು ಕೆಲವೇ ಗಂಟೆಗಳಲ್ಲಿ ಅಪ್​ಲೋಡ್ ಆಗಲಿದೆ.

  • ಮೊದಲ ದೃಶ್ಯವೇ ರೋಮಾಂಚಕವಾಗಿದೆ. ಬ್ರಹ್ಮರಾಕ್ಷಸನ ದರ್ಶನವಾಗಿದೆ.
  • ಸಿನಿಮಾ ಆರಂಭವಾದ ಕೆಲವೇ ಹೊತ್ತಲ್ಲಿ‌‌ ರಥದ ಚೇಸಿಂಗ್ ದೃಶ್ಯ ಬರುತ್ತದೆ. ಇದರಲ್ಲಿ ರಿಷಬ್ ತೆಗೆದುಕೊಂಡ‌ ರಿಸ್ಕ್ ಕಾಣಿಸುತ್ತದೆ.
  • ಪ್ರಕಾಶ್ ತುಮಿನಾಡ್ ಕಡೆಯಿಂದ ಹಾಸ್ಯದ ಹೊಳೆ ಹರಿಯುತ್ತದೆ. ಅವರು ಬಹುವಾಗಿ ನಗಿಸುತ್ತಾರೆ.
  • ರಿಷಬ್ ಹಾಗೂ ರುಕ್ಮಿಣಿ ಪ್ರೇಮಕತೆ ಮೊದಲಾರ್ಧದಲ್ಲಿ ಬರುತ್ತದೆ. ರೊಮ್ಯಾಂಟಿಕ್ ಸಾಂಗ್ ಕೂಡ ಇದೆ.
  • ‘ಕಾಂತಾರ: ಚಾಪ್ಟರ್ 1’ ಸಿನಿಮಾನ ರಿಷಬ್ ಶೆಟ್ಟಿ ಅವರು ಅದ್ದೂರಿಯಾಗಿ ಕಟ್ಟಿಕೊಟ್ಟಿದ್ದಾರೆ. ಮೊದಲಾರ್ಧದ ಎಲ್ಲಾ ಫ್ರೇಮ್ಗಳು ಅದ್ದೂರಿಯಾಗಿ ಮೂಡಿಬಂದಿವೆ.
  • ರುಕ್ಮಿಣಿ ವಸಂತ್ ಅವರು ಯುವರಾಣಿಯಾಗಿ ಕಾಣಿಸಿಕೊಂಡಿದ್ದಾರೆ. ಅವರ ಅಂದಕ್ಕೆ ಮನಸೋಲದವರೇ ಇಲ್ಲ ಎನ್ನಬಹುದು.
  • ‘ಕಾಂತಾರ’ ಚಿತ್ರದ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಗಮನ ಸೆಳೆದಿತ್ತು. ಎರಡನೇ ಪಾರ್ಟ್ನಲ್ಲೂ ಅದು ಮುಂದುವರಿದಿದೆ. ಸಿನಿಮಾ ಉದ್ದಕ್ಕೂ ಅವರ ಸಂಗೀತ ಗಮನ ಸೆಳೆಯುವಂತಿದೆ.
  • ಹಿನ್ನೆಲೆ ಸಂಗೀತ ಸಂಯೋಜನೆ ಸಿನಿಮಾಗೆ ತೂಕ ಕೊಡುತ್ತದೆ. ಛಾಯಾಗ್ರಹಣ ಕೂಡ ಅದ್ಭುತವಾಗಿ ಮೂಡಿಬಂದಿದೆ.
  • ಕಾಡು ಹಾಗೂ ನಾಡಿನ ತಿಕ್ಕಾಟವನ್ನು ತೋರಿಸುವ ಪ್ರಯತ್ನ ನಡೆದಿದೆ.
  • ಮೈವಿರೇಳಿಸುವ ದೃಶ್ಯ ಹಾಗೂ ಟ್ವಿಸ್ಟ್ ಮೂಲಕ ಮಧ್ಯಂತರದ ಬೋರ್ಡ್ ಬರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:31 pm, Wed, 1 October 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್