AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಚಿತ್ರದ ಮೊದಲಾರ್ಧ ವಿಮರ್ಶೆ; ರಿಷಬ್ ಚಿತ್ರದಲ್ಲಿ ಏನೆಲ್ಲ ಇದೆ?

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಮೂಲಕ ವಿಶ್ವಾದ್ಯಂತ ಜನಪ್ರಿಯತೆ ಪಡೆದರು. ಈಗ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ರುಕ್ಮಿಣಿ ವಸಂತ್ ಅವರು ಈ ಚಿತ್ರಕ್ಕೆ ನಾಯಕಿ. ಸಿನಿಮಾನ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಈ ಚಿತ್ರದ ಮೊದಲಾರ್ಧದ ವಿಮರ್ಶೆ ಇಲ್ಲಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರದ ಮೊದಲಾರ್ಧ ವಿಮರ್ಶೆ; ರಿಷಬ್ ಚಿತ್ರದಲ್ಲಿ ಏನೆಲ್ಲ ಇದೆ?
ರಿಷಬ್-ರುಕ್ಮಿಣಿ
ರಾಜೇಶ್ ದುಗ್ಗುಮನೆ
| Edited By: |

Updated on:Oct 01, 2025 | 8:32 PM

Share

‘ಕಾಂತಾರ: ಚಾಪ್ಟರ್ 1’ (Kantara Chapter 1) ಚಿತ್ರ ಅನೌನ್ಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿಸುತ್ತಾ ಬಂದಿದೆ. ಈಗ ಈ ಚಿತ್ರ ರಿಲೀಸ್ ಆಗಿದೆ. ರಾಜ್ಯಾದ್ಯಂತ ವಿವಿಧ ಕಡೆಗಳಲ್ಲಿ ಸಿನಿಮಾಗೆ ಪ್ರೀಮಿಯರ್ ಶೋನ ಆಯೋಜನೆ ಮಾಡಲಾಗಿದೆ. ಈ ಸಿನಿಮಾ ಟ್ರೇಲರ್ ಮೂಲಕ ಗಮನ ಸೆಳೆದಿದೆ. ರಿಷಬ್ ಶೆಟ್ಟಿ (Rishab Shetty) ಅವರು ಈ ಚಿತ್ರದ ಮೂಲಕ ಏನನ್ನು ಹೇಳಲು ಹೊರಟಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಿಗೆ ಇದೆ. ಹಾಗಾದರೆ ಈ ಚಿತ್ರದ ಇಂಟರ್​ವಲ್​ತನಕ ಏನೆಲ್ಲ ಇದೆ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಸಂಪೂರ್ಣ ವಿಮರ್ಶೆ ಇನ್ನು ಕೆಲವೇ ಗಂಟೆಗಳಲ್ಲಿ ಅಪ್​ಲೋಡ್ ಆಗಲಿದೆ.

  • ಮೊದಲ ದೃಶ್ಯವೇ ರೋಮಾಂಚಕವಾಗಿದೆ. ಬ್ರಹ್ಮರಾಕ್ಷಸನ ದರ್ಶನವಾಗಿದೆ.
  • ಸಿನಿಮಾ ಆರಂಭವಾದ ಕೆಲವೇ ಹೊತ್ತಲ್ಲಿ‌‌ ರಥದ ಚೇಸಿಂಗ್ ದೃಶ್ಯ ಬರುತ್ತದೆ. ಇದರಲ್ಲಿ ರಿಷಬ್ ತೆಗೆದುಕೊಂಡ‌ ರಿಸ್ಕ್ ಕಾಣಿಸುತ್ತದೆ.
  • ಪ್ರಕಾಶ್ ತುಮಿನಾಡ್ ಕಡೆಯಿಂದ ಹಾಸ್ಯದ ಹೊಳೆ ಹರಿಯುತ್ತದೆ. ಅವರು ಬಹುವಾಗಿ ನಗಿಸುತ್ತಾರೆ.
  • ರಿಷಬ್ ಹಾಗೂ ರುಕ್ಮಿಣಿ ಪ್ರೇಮಕತೆ ಮೊದಲಾರ್ಧದಲ್ಲಿ ಬರುತ್ತದೆ. ರೊಮ್ಯಾಂಟಿಕ್ ಸಾಂಗ್ ಕೂಡ ಇದೆ.
  • ‘ಕಾಂತಾರ: ಚಾಪ್ಟರ್ 1’ ಸಿನಿಮಾನ ರಿಷಬ್ ಶೆಟ್ಟಿ ಅವರು ಅದ್ದೂರಿಯಾಗಿ ಕಟ್ಟಿಕೊಟ್ಟಿದ್ದಾರೆ. ಮೊದಲಾರ್ಧದ ಎಲ್ಲಾ ಫ್ರೇಮ್ಗಳು ಅದ್ದೂರಿಯಾಗಿ ಮೂಡಿಬಂದಿವೆ.
  • ರುಕ್ಮಿಣಿ ವಸಂತ್ ಅವರು ಯುವರಾಣಿಯಾಗಿ ಕಾಣಿಸಿಕೊಂಡಿದ್ದಾರೆ. ಅವರ ಅಂದಕ್ಕೆ ಮನಸೋಲದವರೇ ಇಲ್ಲ ಎನ್ನಬಹುದು.
  • ‘ಕಾಂತಾರ’ ಚಿತ್ರದ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಗಮನ ಸೆಳೆದಿತ್ತು. ಎರಡನೇ ಪಾರ್ಟ್ನಲ್ಲೂ ಅದು ಮುಂದುವರಿದಿದೆ. ಸಿನಿಮಾ ಉದ್ದಕ್ಕೂ ಅವರ ಸಂಗೀತ ಗಮನ ಸೆಳೆಯುವಂತಿದೆ.
  • ಹಿನ್ನೆಲೆ ಸಂಗೀತ ಸಂಯೋಜನೆ ಸಿನಿಮಾಗೆ ತೂಕ ಕೊಡುತ್ತದೆ. ಛಾಯಾಗ್ರಹಣ ಕೂಡ ಅದ್ಭುತವಾಗಿ ಮೂಡಿಬಂದಿದೆ.
  • ಕಾಡು ಹಾಗೂ ನಾಡಿನ ತಿಕ್ಕಾಟವನ್ನು ತೋರಿಸುವ ಪ್ರಯತ್ನ ನಡೆದಿದೆ.
  • ಮೈವಿರೇಳಿಸುವ ದೃಶ್ಯ ಹಾಗೂ ಟ್ವಿಸ್ಟ್ ಮೂಲಕ ಮಧ್ಯಂತರದ ಬೋರ್ಡ್ ಬರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:31 pm, Wed, 1 October 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ