AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಚಿತ್ರದ ಮೊದಲಾರ್ಧ ವಿಮರ್ಶೆ; ರಿಷಬ್ ಚಿತ್ರದಲ್ಲಿ ಏನೆಲ್ಲ ಇದೆ?

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಮೂಲಕ ವಿಶ್ವಾದ್ಯಂತ ಜನಪ್ರಿಯತೆ ಪಡೆದರು. ಈಗ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ರುಕ್ಮಿಣಿ ವಸಂತ್ ಅವರು ಈ ಚಿತ್ರಕ್ಕೆ ನಾಯಕಿ. ಸಿನಿಮಾನ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಈ ಚಿತ್ರದ ಮೊದಲಾರ್ಧದ ವಿಮರ್ಶೆ ಇಲ್ಲಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರದ ಮೊದಲಾರ್ಧ ವಿಮರ್ಶೆ; ರಿಷಬ್ ಚಿತ್ರದಲ್ಲಿ ಏನೆಲ್ಲ ಇದೆ?
ರಿಷಬ್-ರುಕ್ಮಿಣಿ
ರಾಜೇಶ್ ದುಗ್ಗುಮನೆ
| Edited By: |

Updated on:Oct 01, 2025 | 8:32 PM

Share

‘ಕಾಂತಾರ: ಚಾಪ್ಟರ್ 1’ (Kantara Chapter 1) ಚಿತ್ರ ಅನೌನ್ಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿಸುತ್ತಾ ಬಂದಿದೆ. ಈಗ ಈ ಚಿತ್ರ ರಿಲೀಸ್ ಆಗಿದೆ. ರಾಜ್ಯಾದ್ಯಂತ ವಿವಿಧ ಕಡೆಗಳಲ್ಲಿ ಸಿನಿಮಾಗೆ ಪ್ರೀಮಿಯರ್ ಶೋನ ಆಯೋಜನೆ ಮಾಡಲಾಗಿದೆ. ಈ ಸಿನಿಮಾ ಟ್ರೇಲರ್ ಮೂಲಕ ಗಮನ ಸೆಳೆದಿದೆ. ರಿಷಬ್ ಶೆಟ್ಟಿ (Rishab Shetty) ಅವರು ಈ ಚಿತ್ರದ ಮೂಲಕ ಏನನ್ನು ಹೇಳಲು ಹೊರಟಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಿಗೆ ಇದೆ. ಹಾಗಾದರೆ ಈ ಚಿತ್ರದ ಇಂಟರ್​ವಲ್​ತನಕ ಏನೆಲ್ಲ ಇದೆ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಸಂಪೂರ್ಣ ವಿಮರ್ಶೆ ಇನ್ನು ಕೆಲವೇ ಗಂಟೆಗಳಲ್ಲಿ ಅಪ್​ಲೋಡ್ ಆಗಲಿದೆ.

  • ಮೊದಲ ದೃಶ್ಯವೇ ರೋಮಾಂಚಕವಾಗಿದೆ. ಬ್ರಹ್ಮರಾಕ್ಷಸನ ದರ್ಶನವಾಗಿದೆ.
  • ಸಿನಿಮಾ ಆರಂಭವಾದ ಕೆಲವೇ ಹೊತ್ತಲ್ಲಿ‌‌ ರಥದ ಚೇಸಿಂಗ್ ದೃಶ್ಯ ಬರುತ್ತದೆ. ಇದರಲ್ಲಿ ರಿಷಬ್ ತೆಗೆದುಕೊಂಡ‌ ರಿಸ್ಕ್ ಕಾಣಿಸುತ್ತದೆ.
  • ಪ್ರಕಾಶ್ ತುಮಿನಾಡ್ ಕಡೆಯಿಂದ ಹಾಸ್ಯದ ಹೊಳೆ ಹರಿಯುತ್ತದೆ. ಅವರು ಬಹುವಾಗಿ ನಗಿಸುತ್ತಾರೆ.
  • ರಿಷಬ್ ಹಾಗೂ ರುಕ್ಮಿಣಿ ಪ್ರೇಮಕತೆ ಮೊದಲಾರ್ಧದಲ್ಲಿ ಬರುತ್ತದೆ. ರೊಮ್ಯಾಂಟಿಕ್ ಸಾಂಗ್ ಕೂಡ ಇದೆ.
  • ‘ಕಾಂತಾರ: ಚಾಪ್ಟರ್ 1’ ಸಿನಿಮಾನ ರಿಷಬ್ ಶೆಟ್ಟಿ ಅವರು ಅದ್ದೂರಿಯಾಗಿ ಕಟ್ಟಿಕೊಟ್ಟಿದ್ದಾರೆ. ಮೊದಲಾರ್ಧದ ಎಲ್ಲಾ ಫ್ರೇಮ್ಗಳು ಅದ್ದೂರಿಯಾಗಿ ಮೂಡಿಬಂದಿವೆ.
  • ರುಕ್ಮಿಣಿ ವಸಂತ್ ಅವರು ಯುವರಾಣಿಯಾಗಿ ಕಾಣಿಸಿಕೊಂಡಿದ್ದಾರೆ. ಅವರ ಅಂದಕ್ಕೆ ಮನಸೋಲದವರೇ ಇಲ್ಲ ಎನ್ನಬಹುದು.
  • ‘ಕಾಂತಾರ’ ಚಿತ್ರದ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಗಮನ ಸೆಳೆದಿತ್ತು. ಎರಡನೇ ಪಾರ್ಟ್ನಲ್ಲೂ ಅದು ಮುಂದುವರಿದಿದೆ. ಸಿನಿಮಾ ಉದ್ದಕ್ಕೂ ಅವರ ಸಂಗೀತ ಗಮನ ಸೆಳೆಯುವಂತಿದೆ.
  • ಹಿನ್ನೆಲೆ ಸಂಗೀತ ಸಂಯೋಜನೆ ಸಿನಿಮಾಗೆ ತೂಕ ಕೊಡುತ್ತದೆ. ಛಾಯಾಗ್ರಹಣ ಕೂಡ ಅದ್ಭುತವಾಗಿ ಮೂಡಿಬಂದಿದೆ.
  • ಕಾಡು ಹಾಗೂ ನಾಡಿನ ತಿಕ್ಕಾಟವನ್ನು ತೋರಿಸುವ ಪ್ರಯತ್ನ ನಡೆದಿದೆ.
  • ಮೈವಿರೇಳಿಸುವ ದೃಶ್ಯ ಹಾಗೂ ಟ್ವಿಸ್ಟ್ ಮೂಲಕ ಮಧ್ಯಂತರದ ಬೋರ್ಡ್ ಬರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:31 pm, Wed, 1 October 25

Follow Us
ಇಷ್ಟಪಟ್ಟು ಕಾರು ತಗೊಂಡೆ, ಇಎಂಐ ಕಟ್ಟೋದು ಕಷ್ಟ ಆಗ್ತಿದೆ: ಮೋಕ್ಷಿತಾ
ಇಷ್ಟಪಟ್ಟು ಕಾರು ತಗೊಂಡೆ, ಇಎಂಐ ಕಟ್ಟೋದು ಕಷ್ಟ ಆಗ್ತಿದೆ: ಮೋಕ್ಷಿತಾ
ಪಾವಗಡ - ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು
ಪಾವಗಡ - ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ