AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಿಂದೆಂದಿಗೂ ನೋಡದ ವಿಸ್ಮಯ ಕಣ್ತುಂಬಿಕೊಳ್ಳಿ’; ‘ಕಾಂತಾರ 2’ ಬಗ್ಗೆ ಬಿಗ್ ಅಪ್​ಡೇಟ್

Kantara Chapter 1: ‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ ಗೆದ್ದಿದ್ದರು. ಎರಡು ಶೇಡ್​ನ ಪಾತ್ರವನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದ್ದರು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್ ಬರುತ್ತಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ.

‘ಹಿಂದೆಂದಿಗೂ ನೋಡದ ವಿಸ್ಮಯ ಕಣ್ತುಂಬಿಕೊಳ್ಳಿ’; ‘ಕಾಂತಾರ 2’ ಬಗ್ಗೆ ಬಿಗ್ ಅಪ್​ಡೇಟ್
ಕಾಂತಾರ
Follow us
ರಾಜೇಶ್ ದುಗ್ಗುಮನೆ
|

Updated on:Nov 25, 2023 | 9:52 AM

‘ಕಾಂತಾರ’ ಸಿನಿಮಾ (Kantar Movie) ರಿಲೀಸ್ ಆಗಿ ವರ್ಷದ ಮೇಲಾಗಿದೆ. ಈ ಚಿತ್ರಕ್ಕೆ ಪ್ರೀಕ್ವೆಲ್ ಬರಲಿದೆ ಎಂದು ಈ ಮೊದಲೇ ಘೋಷಣೆ ಆಗಿತ್ತು. ಸಿನಿಮಾ ಶೂಟಿಂಗ್ ಶುರುವಿನ ಬಗ್ಗೆ ಆಗೊಂದು, ಈಗೊಂದು ಸುದ್ದಿ ಹರಿದಾಡುತ್ತಲೇ ಇತ್ತು. ಆದರೆ, ಯಾವುದೂ ಅಧಿಕೃತ ಆಗಿರಲಿಲ್ಲ. ಈಗ ‘ಹೊಂಬಾಳೆ ಫಿಲ್ಮ್ಸ್’ ಕಡೆಯಿಂದ ಈ ಬಗ್ಗೆ ಮಾಹಿತಿ ಸಿಕ್ಕಿದೆ. ‘ಕಾಂತಾರ 2’ ಚಿತ್ರದ ಫಸ್ಟ್ ಪೋಸ್ಟರ್ ನವೆಂಬರ್ 27ರ ಮಧ್ಯಾಹ್ನ 12:25ಕ್ಕೆ ಅನಾವರಣಗೊಳ್ಳಲಿದೆ. ಈ ವಿಚಾರ ತಿಳಿದು ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ ಗೆದ್ದಿದ್ದರು. ಎರಡು ಶೇಡ್​ನ ಪಾತ್ರವನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದ್ದರು. ದೈವ ಬಂದಂತೆ ಆಡುವಾಗ ಅವರ ಹಾವ-ಭಾವ ನೋಡಿ ಎಲ್ಲರೂ ಬೆಕ್ಕಸ ಬೆರಗಾಗಿದ್ದರು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್ ಬರುತ್ತಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ.

‘ಪ್ರತಿ ಕ್ಷಣವೂ ದೈವಿಕ ಸ್ಪರ್ಶವನ್ನು ಅನುಭವಿಸುವುದರ ಜೊತೆ ಇತಿಹಾಸದ ನಿಗೂಢ ಸತ್ಯವನ್ನು ಅನ್ವೇಷಿಸಿ. ಹಿಂದೆಂದಿಗೂ ನೋಡದ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಕಾತುರರಾಗಿ. ಇದು ಬರಿ ಬೆಳಕಲ್ಲ, ದರ್ಶನ. ಕಾಂತಾರ ಚಾಪ್ಟರ್ 1 ಫಸ್ಟ್ ಲುಕ್ ನವೆಂಬರ್ 27, ಮಧ್ಯಾಹ್ನ 12:25ಕ್ಕೆ’ ಎಂದು ಹೊಂಬಾಳೆ ಫಿಲ್ಮ್ಸ್ ಬರೆದುಕೊಂಡಿದೆ.

ಇದನ್ನೂ ಓದಿ: ‘ಕಾಂತಾರ 2’ಗಾಗಿ ಗೆಟಪ್ ಬದಲಿಸಿದ ರಿಷಬ್ ಶೆಟ್ಟಿ?

ಟೈಟಲ್ ಕಾರ್ಡ್​ನಲ್ಲಿ ಕೇವಲ ‘ಕಾಂತಾರ’ ಎಂದಷ್ಟೇ ಇದೆ. ‘ಕಾಂತಾರ ಚಾಪ್ಟರ್ 1’ ಎಂದು ಹ್ಯಾಶ್​ಟ್ಯಾಗ್ ಹಾಕಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ರಿಷಬ್ ಶೆಟ್ಟಿ ಅವರ ಹೊಸ ಅವತಾರ ನೋಡಲು ಫ್ಯಾನ್ಸ್ ಕಾದಿದ್ದಾರೆ. ಇದಕ್ಕೆ ಸೋಮವಾರದವರೆಗೆ ಕಾಯಲೇಬೇಕು.

‘ಕಾಂತಾರ 2’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಸಿನಿಮಾ ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲಿಷ್​ನಲ್ಲಿ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:47 am, Sat, 25 November 23

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!