AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಿಂದೆಂದಿಗೂ ನೋಡದ ವಿಸ್ಮಯ ಕಣ್ತುಂಬಿಕೊಳ್ಳಿ’; ‘ಕಾಂತಾರ 2’ ಬಗ್ಗೆ ಬಿಗ್ ಅಪ್​ಡೇಟ್

Kantara Chapter 1: ‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ ಗೆದ್ದಿದ್ದರು. ಎರಡು ಶೇಡ್​ನ ಪಾತ್ರವನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದ್ದರು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್ ಬರುತ್ತಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ.

‘ಹಿಂದೆಂದಿಗೂ ನೋಡದ ವಿಸ್ಮಯ ಕಣ್ತುಂಬಿಕೊಳ್ಳಿ’; ‘ಕಾಂತಾರ 2’ ಬಗ್ಗೆ ಬಿಗ್ ಅಪ್​ಡೇಟ್
ಕಾಂತಾರ
ರಾಜೇಶ್ ದುಗ್ಗುಮನೆ
|

Updated on:Nov 25, 2023 | 9:52 AM

Share

‘ಕಾಂತಾರ’ ಸಿನಿಮಾ (Kantar Movie) ರಿಲೀಸ್ ಆಗಿ ವರ್ಷದ ಮೇಲಾಗಿದೆ. ಈ ಚಿತ್ರಕ್ಕೆ ಪ್ರೀಕ್ವೆಲ್ ಬರಲಿದೆ ಎಂದು ಈ ಮೊದಲೇ ಘೋಷಣೆ ಆಗಿತ್ತು. ಸಿನಿಮಾ ಶೂಟಿಂಗ್ ಶುರುವಿನ ಬಗ್ಗೆ ಆಗೊಂದು, ಈಗೊಂದು ಸುದ್ದಿ ಹರಿದಾಡುತ್ತಲೇ ಇತ್ತು. ಆದರೆ, ಯಾವುದೂ ಅಧಿಕೃತ ಆಗಿರಲಿಲ್ಲ. ಈಗ ‘ಹೊಂಬಾಳೆ ಫಿಲ್ಮ್ಸ್’ ಕಡೆಯಿಂದ ಈ ಬಗ್ಗೆ ಮಾಹಿತಿ ಸಿಕ್ಕಿದೆ. ‘ಕಾಂತಾರ 2’ ಚಿತ್ರದ ಫಸ್ಟ್ ಪೋಸ್ಟರ್ ನವೆಂಬರ್ 27ರ ಮಧ್ಯಾಹ್ನ 12:25ಕ್ಕೆ ಅನಾವರಣಗೊಳ್ಳಲಿದೆ. ಈ ವಿಚಾರ ತಿಳಿದು ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ ಗೆದ್ದಿದ್ದರು. ಎರಡು ಶೇಡ್​ನ ಪಾತ್ರವನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದ್ದರು. ದೈವ ಬಂದಂತೆ ಆಡುವಾಗ ಅವರ ಹಾವ-ಭಾವ ನೋಡಿ ಎಲ್ಲರೂ ಬೆಕ್ಕಸ ಬೆರಗಾಗಿದ್ದರು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್ ಬರುತ್ತಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ.

‘ಪ್ರತಿ ಕ್ಷಣವೂ ದೈವಿಕ ಸ್ಪರ್ಶವನ್ನು ಅನುಭವಿಸುವುದರ ಜೊತೆ ಇತಿಹಾಸದ ನಿಗೂಢ ಸತ್ಯವನ್ನು ಅನ್ವೇಷಿಸಿ. ಹಿಂದೆಂದಿಗೂ ನೋಡದ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಕಾತುರರಾಗಿ. ಇದು ಬರಿ ಬೆಳಕಲ್ಲ, ದರ್ಶನ. ಕಾಂತಾರ ಚಾಪ್ಟರ್ 1 ಫಸ್ಟ್ ಲುಕ್ ನವೆಂಬರ್ 27, ಮಧ್ಯಾಹ್ನ 12:25ಕ್ಕೆ’ ಎಂದು ಹೊಂಬಾಳೆ ಫಿಲ್ಮ್ಸ್ ಬರೆದುಕೊಂಡಿದೆ.

ಇದನ್ನೂ ಓದಿ: ‘ಕಾಂತಾರ 2’ಗಾಗಿ ಗೆಟಪ್ ಬದಲಿಸಿದ ರಿಷಬ್ ಶೆಟ್ಟಿ?

ಟೈಟಲ್ ಕಾರ್ಡ್​ನಲ್ಲಿ ಕೇವಲ ‘ಕಾಂತಾರ’ ಎಂದಷ್ಟೇ ಇದೆ. ‘ಕಾಂತಾರ ಚಾಪ್ಟರ್ 1’ ಎಂದು ಹ್ಯಾಶ್​ಟ್ಯಾಗ್ ಹಾಕಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ರಿಷಬ್ ಶೆಟ್ಟಿ ಅವರ ಹೊಸ ಅವತಾರ ನೋಡಲು ಫ್ಯಾನ್ಸ್ ಕಾದಿದ್ದಾರೆ. ಇದಕ್ಕೆ ಸೋಮವಾರದವರೆಗೆ ಕಾಯಲೇಬೇಕು.

‘ಕಾಂತಾರ 2’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಸಿನಿಮಾ ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲಿಷ್​ನಲ್ಲಿ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:47 am, Sat, 25 November 23

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ