AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಿಂದೆಂದಿಗೂ ನೋಡದ ವಿಸ್ಮಯ ಕಣ್ತುಂಬಿಕೊಳ್ಳಿ’; ‘ಕಾಂತಾರ 2’ ಬಗ್ಗೆ ಬಿಗ್ ಅಪ್​ಡೇಟ್

Kantara Chapter 1: ‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ ಗೆದ್ದಿದ್ದರು. ಎರಡು ಶೇಡ್​ನ ಪಾತ್ರವನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದ್ದರು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್ ಬರುತ್ತಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ.

‘ಹಿಂದೆಂದಿಗೂ ನೋಡದ ವಿಸ್ಮಯ ಕಣ್ತುಂಬಿಕೊಳ್ಳಿ’; ‘ಕಾಂತಾರ 2’ ಬಗ್ಗೆ ಬಿಗ್ ಅಪ್​ಡೇಟ್
ಕಾಂತಾರ
ರಾಜೇಶ್ ದುಗ್ಗುಮನೆ
|

Updated on:Nov 25, 2023 | 9:52 AM

Share

‘ಕಾಂತಾರ’ ಸಿನಿಮಾ (Kantar Movie) ರಿಲೀಸ್ ಆಗಿ ವರ್ಷದ ಮೇಲಾಗಿದೆ. ಈ ಚಿತ್ರಕ್ಕೆ ಪ್ರೀಕ್ವೆಲ್ ಬರಲಿದೆ ಎಂದು ಈ ಮೊದಲೇ ಘೋಷಣೆ ಆಗಿತ್ತು. ಸಿನಿಮಾ ಶೂಟಿಂಗ್ ಶುರುವಿನ ಬಗ್ಗೆ ಆಗೊಂದು, ಈಗೊಂದು ಸುದ್ದಿ ಹರಿದಾಡುತ್ತಲೇ ಇತ್ತು. ಆದರೆ, ಯಾವುದೂ ಅಧಿಕೃತ ಆಗಿರಲಿಲ್ಲ. ಈಗ ‘ಹೊಂಬಾಳೆ ಫಿಲ್ಮ್ಸ್’ ಕಡೆಯಿಂದ ಈ ಬಗ್ಗೆ ಮಾಹಿತಿ ಸಿಕ್ಕಿದೆ. ‘ಕಾಂತಾರ 2’ ಚಿತ್ರದ ಫಸ್ಟ್ ಪೋಸ್ಟರ್ ನವೆಂಬರ್ 27ರ ಮಧ್ಯಾಹ್ನ 12:25ಕ್ಕೆ ಅನಾವರಣಗೊಳ್ಳಲಿದೆ. ಈ ವಿಚಾರ ತಿಳಿದು ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ ಗೆದ್ದಿದ್ದರು. ಎರಡು ಶೇಡ್​ನ ಪಾತ್ರವನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದ್ದರು. ದೈವ ಬಂದಂತೆ ಆಡುವಾಗ ಅವರ ಹಾವ-ಭಾವ ನೋಡಿ ಎಲ್ಲರೂ ಬೆಕ್ಕಸ ಬೆರಗಾಗಿದ್ದರು. ಈಗ ಈ ಚಿತ್ರಕ್ಕೆ ಎರಡನೇ ಪಾರ್ಟ್ ಬರುತ್ತಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ.

‘ಪ್ರತಿ ಕ್ಷಣವೂ ದೈವಿಕ ಸ್ಪರ್ಶವನ್ನು ಅನುಭವಿಸುವುದರ ಜೊತೆ ಇತಿಹಾಸದ ನಿಗೂಢ ಸತ್ಯವನ್ನು ಅನ್ವೇಷಿಸಿ. ಹಿಂದೆಂದಿಗೂ ನೋಡದ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಕಾತುರರಾಗಿ. ಇದು ಬರಿ ಬೆಳಕಲ್ಲ, ದರ್ಶನ. ಕಾಂತಾರ ಚಾಪ್ಟರ್ 1 ಫಸ್ಟ್ ಲುಕ್ ನವೆಂಬರ್ 27, ಮಧ್ಯಾಹ್ನ 12:25ಕ್ಕೆ’ ಎಂದು ಹೊಂಬಾಳೆ ಫಿಲ್ಮ್ಸ್ ಬರೆದುಕೊಂಡಿದೆ.

ಇದನ್ನೂ ಓದಿ: ‘ಕಾಂತಾರ 2’ಗಾಗಿ ಗೆಟಪ್ ಬದಲಿಸಿದ ರಿಷಬ್ ಶೆಟ್ಟಿ?

ಟೈಟಲ್ ಕಾರ್ಡ್​ನಲ್ಲಿ ಕೇವಲ ‘ಕಾಂತಾರ’ ಎಂದಷ್ಟೇ ಇದೆ. ‘ಕಾಂತಾರ ಚಾಪ್ಟರ್ 1’ ಎಂದು ಹ್ಯಾಶ್​ಟ್ಯಾಗ್ ಹಾಕಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ರಿಷಬ್ ಶೆಟ್ಟಿ ಅವರ ಹೊಸ ಅವತಾರ ನೋಡಲು ಫ್ಯಾನ್ಸ್ ಕಾದಿದ್ದಾರೆ. ಇದಕ್ಕೆ ಸೋಮವಾರದವರೆಗೆ ಕಾಯಲೇಬೇಕು.

‘ಕಾಂತಾರ 2’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಸಿನಿಮಾ ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲಿಷ್​ನಲ್ಲಿ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:47 am, Sat, 25 November 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ