AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

200 ರೂ. ಸಿನಿಮಾ ಟಿಕೆಟ್ ದರ ನಿಗದಿ ಪ್ರಶ್ನಿಸಿ ಕೋರ್ಟ್​​ ಮೊರೆಹೋದ ಮಲ್ಟಿಪ್ಲೆಕ್ಸ್ ಒಕ್ಕೂಟ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ಈ ಸಂದರ್ಭದಲ್ಲಿ ಸಿನಿಮಾ ಟಿಕೆಟ್ ದರದ ಬಗ್ಗೆ ಮಲ್ಟಿಪ್ಲೆಕ್ಸ್ ಒಕ್ಕೂಟ ತಕರಾರು ತೆಗೆದಿದೆ. ಸರ್ಕಾರ ನಿಗದಿ ಮಾಡಿರುವ 200 ರೂಪಾಯಿ ಟಿಕೆಟ್ ದರವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

200 ರೂ. ಸಿನಿಮಾ ಟಿಕೆಟ್ ದರ ನಿಗದಿ ಪ್ರಶ್ನಿಸಿ ಕೋರ್ಟ್​​ ಮೊರೆಹೋದ ಮಲ್ಟಿಪ್ಲೆಕ್ಸ್ ಒಕ್ಕೂಟ
High Court
ಮದನ್​ ಕುಮಾರ್​
|

Updated on:Sep 15, 2025 | 6:03 PM

Share

ಕರ್ನಾಟಕದಲ್ಲಿ 200 ರೂಪಾಯಿ ಸಿನಿಮಾ ಟಿಕೆಟ್ ದರ (Movie Ticket Price) ನಿಗದಿ ಮಾಡಲಾಗಿದೆ. ಈ ಮೊದಲು ಇದ್ದ ದುಬಾರಿ ಟಿಕೆಟ್ ಬೆಲೆಗೆ ಕಡಿವಾಣ ಹಾಕಲು ಈ ಆದೇಶ ನೀಡಲಾಗಿದೆ. ಇತ್ತೀಚೆಗೆ ಈ ನಿಯಮ ಜಾರಿಗೆ ಬಂದಿದೆ. ಇದರಿಂದಾಗಿ ಪ್ರೇಕ್ಷಕರಿಗೆ ಅನುಕೂಲ ಆಗಲಿದೆ. ಆದರೆ ಕೆಲವರು ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಮಲ್ಟಿಪ್ಲೆಕ್ಸ್ ಒಕ್ಕೂಟವು (Multiplex Association) ಹೈಕೋರ್ಟ್​​​ನಲ್ಲಿ ಅರ್ಜಿ ಸಲ್ಲಿಸಿದೆ. ‘ಹೊಂಬಾಳೆ ಫಿಲ್ಮ್ಸ್’ ನಿರ್ಮಾಣ ಮಾಡಿರುವ ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾದ ಬಿಡುಗಡೆಗೂ ಮುನ್ನ ಈ ಬೆಳವಣಿಗೆ ನಡೆದಿದೆ.

ಸೆಪ್ಟೆಂಬರ್ 16ರಂದು ಈ ಅರ್ಜಿಯ ವಿಚಾರಣೆ ನಡೆಯಲಿದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಅಕ್ಟೋಬರ್ 2ರಂದು ಈ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಸಿನಿಮಾ ಟಿಕೆಟ್ ದರ ಕಡಿಮೆ ಮಾಡಿರುವುದರಿಂದ ಕಲೆಕ್ಷನ್ ಕಡಿಮೆ ಆಗುವ ಸಾಧ್ಯತೆ ಇದೆ. ಮುಂಬರುವ ಹಲವು ಬಿಗ್ ಬಜೆಟ್ ಸಿನಿಮಾಗಳಿಗೂ ಇದರ ಬಿಸಿ ತಟ್ಟಬಹುದು. ಈ ಹಿನ್ನೆಲೆಯಲ್ಲಿ ಕೋರ್ಟ್ ಮೊರೆ ಹೋಗಲಾಗಿದೆ.

ಆಂಧ್ರದಲ್ಲಿ ಕೂಡ ಟಿಕೆಟ್ ಬೆಲೆ ಏರಿಕೆಗೆ ಕಡಿವಾಣ ಇದೆ. ಆದರೆ ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆ ಆದಾಗ ನಿರ್ಮಾಪಕರು ಸರ್ಕಾರದ ಬಳಿ ಅರ್ಜಿ ಹಾಕಿಕೊಂಡು ಬಿಡುಗಡೆ ಆದ ಮೊದಲ ವಾರ ಅಥವಾ 3 ದಿನ ಅಥವಾ 10 ದಿನಗಳ ಅವಧಿಯವರೆಗೆ ಟಿಕೆಟ್ ಬೆಲೆಯನ್ನು ಹೆಚ್ಚು ಮಾಡಲು ಅನುಮತಿ ಪಡೆಯುವ ಅವಕಾಶ ನೀಡಲಾಗಿದೆ. ಕರ್ನಾಟಕದಲ್ಲಿ ಕೂಡ ಈ ರೀತಿ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’: ರಿಷಬ್ ಶೆಟ್ಟಿಯ ಕೊಂಡಾಡಿದ ಪರಭಾಷೆ ಖ್ಯಾತ ಕಲಾ ನಿರ್ದೇಶಕ

ಕರ್ನಾಟಕದಲ್ಲಿ ಹಲವು ಬಿಗ್ ಬಜೆಟ್ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 1ರಂದು ‘ಕಾಂತಾರ: ಚಾಪ್ಟರ್ 1’ ಬಿಡುಗಡೆ ಆಗಲಿದೆ. ಡಿಸೆಂಬರ್​​ ತಿಂಗಳಲ್ಲಿ ದರ್ಶನ್ ನಟನೆಯ ‘ಡೆವಿಲ್’, ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:45 pm, Mon, 15 September 25

Follow Us
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್