AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿ ಜನ್ಮದಿನಕ್ಕೆ ‘ಕಾಂತಾರ: ಚಾಪ್ಟರ್ 1’ ಚಿತ್ರದ ಕಡೆಯಿಂದ ಬಿಗ್ ಅಪ್​ಡೇಟ್​

Rishab Shetty Birthday: ರಿಷಬ್ ಶೆಟ್ಟಿ ಅವರಿಗೆ ಇಂದು ಜನ್ಮದಿನ. ಇದರ ಪ್ರಯುಕ್ತ ‘ಕಾಂತಾರ: ಚಾಪ್ಟರ್ 1’ಹೊಸ ಪೋಸ್ಟರ್ ಬಿಡುಗಡೆ ಆಗಿದೆ. ಈ ಸಿನಿಮಾ ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದೆ ಎಂದು ತಿಳಿಸಲಾಗಿದೆ. ಇದು ಅಭಿಮಾನಿಗಳಲ್ಲಿ ಭಾರಿ ಉತ್ಸಾಹ ಮೂಡಿಸಿದೆ. ಪೋಸ್ಟರ್‌ನಲ್ಲಿ ರಿಷಬ್ ಶೆಟ್ಟಿ ಆಕ್ರೋಶದಿಂದ ಕೂಡಿದ್ದಾರೆ.

ರಿಷಬ್ ಶೆಟ್ಟಿ ಜನ್ಮದಿನಕ್ಕೆ ‘ಕಾಂತಾರ: ಚಾಪ್ಟರ್ 1’ ಚಿತ್ರದ ಕಡೆಯಿಂದ ಬಿಗ್ ಅಪ್​ಡೇಟ್​
ಕಾಂತಾರ
ರಾಜೇಶ್ ದುಗ್ಗುಮನೆ
|

Updated on: Jul 07, 2025 | 9:59 AM

Share

ರಿಷಬ್ ಶೆಟ್ಟಿ (Rishab Shetty) ಅವರಿಗೆ ಇಂದು (ಜುಲೈ 7) ಜನ್ಮದಿನ. ಅವರಿಗೆ ಅಭಿಮಾನಿಗಳ ಕಡೆಯಿಂದ ವಿಶ್​ಗಳು ಬರುತ್ತಿವೆ. ವಿಶೇಷ ಎಂದರೆ ‘ಕಾಂತಾರ: ಚಾಪ್ಟರ್ 1’ ಕಡೆಯಿಂದ ದೊಡ್ಡ ಅಪ್​​ಡೇಟ್ ಒಂದು ಬಂದಿದೆ. ಈ ಸಿನಿಮಾದ ಹೊಸ ಪೋಸ್ಟರ್​ ರಿಲೀಸ್ ಮಾಡಿರೋ ತಂಡ ವಿಶೇಷ ಮಾಹಿತಿ ಒಂದನ್ನು ನೀಡಿದೆ. ಇದನ್ನು ಕೇಳಿ ಫ್ಯಾನ್ಸ್ ಭರ್ಜರಿ ಖುಷಿಪಟ್ಟಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಕಾಂತಾರ: ಚಾಪ್ಟರ್ 1’ ಚಿತ್ರದ ಸೆಟ್​ನಲ್ಲಿ ಸಾಕಷ್ಟ ಅವಘಡಗಳು ಸಂಭವಿಸಿದವು. ಈ ಕಾರಣದಿಂದ ಸಿನಿಮಾ ರಿಲೀಸ್ ವಿಳಂಬ ಆಗಲಿದೆ ಎಂದು ಹೇಳಲಾಗುತ್ತಿತ್ತು. ಈ ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಹಬ್ಬಿದ್ದವು. ಆದರೆ, ಇದನ್ನು ತಂಡ ಅಲ್ಲಗಳೆದಿದೆ. ಅಂದುಕೊಂಡ ದಿನಾಂಕದಂದೇ ಸಿನಿಮಾ ಬಿಡುಗಡೆ ಆಗಲಿದೆ ಎಂದು ತಂಡ ಮಾಹಿತಿ ನೀಡಿದೆ.

ಇದನ್ನೂ ಓದಿ
Image
‘ನನಗೆ ಗಾಯತ್ರಿ ಮಂತ್ರ, ಹನುಮಾನ್ ಚಾಲೀಸ್ ಕೇಳೋದು ಇಷ್ಟ’; ಮುಸ್ಲಿಂ ನಟಿ
Image
‘ಬಂಧನ’ ಸಿನಿಮಾ ತಡೆಯಲು ಬ್ಲೇಡ್ ಹೊಡೆದು, ಖಾರದ ಪುಡಿ ಎರಚಿದ್ದರು
Image
‘ಟಾಕ್ಸಿಕ್’ ಚಿತ್ರದಿಂದ ರವಿ ಬಸ್ರೂರು ಔಟ್? ರಾಕ್​ಸ್ಟಾರ್​ಗೆ ಮಣೆ?  
Image
ಮತ್ತೊಂದು ‘ಅನಿಮಲ್’; ‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್ ರಕ್ಕಸ ಅವತಾರ

ಅಕ್ಟೋಬರ್ 2 ಗಾಂಧೀ ಜಯಂತಿ. ಈ ಬಾರಿ ಗಾಂಧಿ ಜಯಂತಿ ಗುರುವಾರ ಬಂದಿದೆ. ಸರ್ಕಾರಿ ರಜೆ ಚಿತ್ರಕ್ಕೆ ಸಹಕಾರಿ ಆಗುವ ಸಾಧ್ಯತೆ ಇದೆ. ಇನ್ನು ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸಿನಿಮಾ ಸಹಜವಾಗಿಯೇ ಒಳ್ಳೆಯ ಕಲೆಕ್ಷನ್ ಮಾಡಲಿದೆ. ಆ ಬಳಿಕ ಅಕ್ಟೋಬರ್ ಮಧ್ಯದಲ್ಲಿ ದೀಪಾವಳಿ ಬರಲಿದೆ. ಇದು ಕೂಡ ಸಿನಿಮಾಗೆ ಸಹಕಾರಿ ಆಗಲಿದೆ. ಇಂಥ ಚಾನ್ಸ್​ನ ತಂಡ ಬಿಡಲು ರೆಡಿ ಇಲ್ಲ. ಹೀಗಾಗಿ, ಅದಕ್ಕೆ ತಕ್ಕಂತೆ ಕೆಲಸ ನಡೆಯುತ್ತಿದೆ.

ರಿಲೀಸ್ ಆಗಿರುವ ಪೋಸ್ಟರ್ ಅದ್ದೂರಿಯಾಗಿದೆ. ರಿಷಬ್ ಶೆಟ್ಟಿ ಅವರು ಕೈಯಲ್ಲಿ ಕೊಡಲಿ ಹಾಗೂ ಗುರಾಣಿ ಹಿಡಿದಿದ್ದಾರೆ. ಗುರಾಣಿಗೆ ಬಾಣಗಳು ಚುಚ್ಚಿವೆ. ಹಿಂಭಾಗದಲ್ಲಿ ಬೆಂಕಿ ಇದೆ. ರಿಷಬ್ ಶೆಟ್ಟಿ ಮುಖದಲ್ಲಿ ಆಕ್ರೋಶದ ಜ್ವಾಲೆ ಕಾಣಿಸುತ್ತಿದೆ. ಈ ರೀತಿಯಲ್ಲಿ ಪೋಸ್ಟರ್ ಮೂಡಿ ಬಂದಿದೆ. ‘ದಂತಕಥೆಯ ಮುನ್ನುಡಿ.  ಆ ನುಡಿಗೊಂದು ಪರಿಚಯ. ಮನದಾಳದ ಕಥೆಗೆ ಮತ್ತೊಮ್ಮೆ ಸ್ವಾಗತ’ ಎಂದು ಪೋಸ್ಟರ್​ನಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಹಲವು ಅಡ್ಡಿ-ಆತಂಕ; ಆದರೂ ಅಂದುಕೊಂಡ ದಿನಾಂಕದಲ್ಲೇ ಚಿತ್ರ ರಿಲೀಸ್

‘ಮತ್ತೆ ಇಡೀ ದೇಶ ನಮ್ಮ ಕನ್ನಡ ಚಿತ್ರವನ್ನು ತಿರಗಿ ನೋಡುವಂತೆ ಆಗಲಿ. ನಿಮಗೆ ಮತ್ತು ನಿಮ್ಮ ಚಿತ್ರ ತಂಡಕ್ಕ ಶುಭವಾಗಲಿ’ ಎಂದು ಫ್ಯಾನ್ಸ್ ಕೋರಿದ್ದಾರೆ. ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾ ಪಾತ್ರವರ್ಗದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಈ ಸಿನಿಮಾನ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!