AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕಾಗಿ ದೊಡ್ಡ ರಿಸ್ಕ್​ ತೆಗೆದುಕೊಂಡ ರಿಷಬ್ ಶೆಟ್ಟಿ

‘ಕಾಂತಾರ ಚಾಪ್ಟರ್ 1’ ಅಕ್ಟೋಬರ್ 2ಕ್ಕೆ ತೆರೆಕಾಣಲಿದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ಅನೇಕ ಅಪಾಯಕಾರಿ ಸ್ಟಂಟ್‌ಗಳನ್ನು ಸ್ವತಃ ಮಾಡಿದ್ದಾರೆ ಎಂದು ಚಿತ್ರದ ಸ್ಟಂಟ್ ಕೊರಿಯೋಗ್ರಾಫರ್ ಅರುಣ್ ರಾಜ್ ತಿಳಿಸಿದ್ದಾರೆ. ಕಳರಿಪಯಟ್ಟು, ಖಡ್ಗ ಯುದ್ಧ, ಕುದುರೆ ಸವಾರಿ ಸೇರಿದಂತೆ ಹಲವು ಸವಾಲಿನ ಸನ್ನಿವೇಶಗಳನ್ನು ಅವರು ನಿಭಾಯಿಸಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕಾಗಿ ದೊಡ್ಡ ರಿಸ್ಕ್​ ತೆಗೆದುಕೊಂಡ ರಿಷಬ್ ಶೆಟ್ಟಿ
ರಿಷಬ್
ರಾಜೇಶ್ ದುಗ್ಗುಮನೆ
|

Updated on: Sep 05, 2025 | 11:51 AM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್​ಗೆ ಇನ್ನು ಒಂದು ತಿಂಗಳು ಕೂಡ ಬಾಕಿ ಉಳಿದಿಲ್ಲ. ಈ ಸಿನಿಮಾ ಅಕ್ಟೋಬರ್ 2ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಮೊದಲ ಭಾಗ ಹಿಟ್ ಆಗಿದ್ದರಿಂದ ಎರಡನೇ ಪಾರ್ಟ್ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಹೊಂಬಾಳೆ ಫಿಲ್ಮ್ಸ್​ ಈ ಸಿನಿಮಾ ನಿರ್ಮಾಣ ಮಾಡುತ್ತಿದೆ. ಈ ಚಿತ್ರವನ್ನು ರಿಷಬ್ (Rishab Shetty) ಅವರು ನಿರ್ದೇಶಿಸಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು ದೊಡ್ಡ ರಿಸ್ಕ್ ಒಂದನ್ನು ತೆಗೆದುಕೊಂಡಿದ್ದಾರೆ.

‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಬಳಿಕ ರಿಷಬ್ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ಕೈಗೆ ಎತ್ತಿಕೊಂಡರು. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ. ಈ ಕಾರಣದಿಂದ ರಿಷಬ್ ಅವರು ಹೆಚ್ಚು ಎಚ್ಚರಿಕೆಯಿಂದ ಸಿನಿಮಾ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬರುವ ಎಲ್ಲಾ ಸ್ಟಂಟ್​ಗಳನ್ನು ಸ್ವತಃ ರಿಷಬ್ ಅವರೇ ಮಾಡಿದ್ದಾರಂತೆ.

ಈ ಚಿತ್ರದ ಸ್ಟಂಟ್ ಕೊರಿಯೋಗ್ರಾಫ್ ಅರುಣ್ ರಾಜ್ ಈ ವಿಚಾರ ರಿವೀಲ್ ಮಾಡಿದ್ದಾರೆ. ‘ನಾವು ರಿಷಬ್​ಗೆ ಬಾಡಿ ಡಬಲ್ (ಕಷ್ಟದ ಸ್ಟಂಟ್​ಗಳಲ್ಲಿ ಬೇರೆ ವ್ಯಕ್ತಿ ಬಳಕೆ ಮಾಡೋದು) ಮಾಡಿಲ್ಲ. ಅವರು ಹಲವು ಕಷ್ಟದ ಸ್ಟಂಟ್​ಗಳನ್ನು ಮಾಡಿದ್ದಾರೆ. ಕಳರಿಪಯಟ್ಟುನ ಅವರೇ ಕಲಿತಿದ್ದಾರೆ. ಖಡ್ಗದ ಫೈಟ್, ಹಾರ್ಸ್​ ರೈಡ್ ಮಾಡಿದ್ದಾರೆ. ನಾನು ಸಾಕಷ್ಟು ನಟನರ ಜೊತೆ ಕೆಲಸ ಮಾಡಿದ್ದೇನೆ. ನನ್ನ ಕೈಲಾದಷ್ಟು ಮಾಡುತ್ತೇನೆ ಎಂದು ಅವರು ಹೇಳಲ್ಲ. ಸರಿಯಾಗಿ ಮೂಡಿಬರುವವರೆಗೂ ಮಾಡುತ್ತೇನೆ ಎಂಬುದು ಅವರ ಮನಸ್ಥಿತಿ’ ಎಂದಿದ್ದಾರೆ.

ಇದನ್ನೂ ಓದಿ
Image
ಹಳ್ಳಿ ಪವರ್​​’ನಲ್ಲಿ ಮಿಂಚುತ್ತಿರುವ ‘ಭೀಮ’ ಕಲಾವಿದೆ ಆ್ಯಶ್
Image
‘ಕರ್ಣ’ ಧಾರಾವಾಹಿಗೆ ಶಾಕ್ ಕೊಟ್ಟ ಟಿಆರ್​ಪಿ ರೇಟಿಂಗ್; ಕುಸಿಯಿತು ಸ್ಥಾನ
Image
‘ಸು ಫ್ರಮ್ ಸೋ’ ಒಟಿಟಿ ರಿಲೀಸ್ ದಿನಾಂಕ ಫೇಕ್; ಹಾಟ್​ಸ್ಟಾರ್​ನವರು ಹೇಳೋದೇನು
Image
ರಾಜ್ ಮುಟ್ಟಿದ್ದೆಲ್ಲ ಚಿನ್ನ; ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಜೋರು

ಸಾಮಾನ್ಯವಾಗಿ ಕಷ್ಟದ ಸ್ಟಂಟ್​ಗಳನ್ನು ಮಾಡುವಾಗ ಪೆಟ್ಟಾದರೆ ಕಷ್ಟ ಎಂಬ ಭಯದಿಂದ ಡ್ಯೂಪ್ ಬಳಕೆ ಮಾಡಲಾಗುತ್ತದೆ. ಇದು ಬಹುತೇಕ ಸಿನಿಮಾಗಳಲ್ಲಿ ನಡೆದಿದೆ. ಆದರೆ, ರಿಷಬ್ ಆ ರೀತಿ ಅಲ್ಲ. ಅವರು ಈ ಚಿತ್ರಕ್ಕಾಗಿ ದೊಡ್ಡ ಚಾಲೆಂಜ್ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್​ 1’ ಎದುರು ಸಿನಿಮಾ ರಿಲೀಸ್ ಮಾಡೋ ದೊಡ್ಡ ನಿರ್ಧಾರ ತೆಗೆದುಕೊಂಡ ಸ್ಟಾರ್ ಹೀರೋ

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಇದೆ. ಅರವಿಂದ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕೆ ಇದೆ. ಅಕ್ಟೋಬರ್ 2ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ