‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕಾಗಿ ದೊಡ್ಡ ರಿಸ್ಕ್​ ತೆಗೆದುಕೊಂಡ ರಿಷಬ್ ಶೆಟ್ಟಿ

‘ಕಾಂತಾರ ಚಾಪ್ಟರ್ 1’ ಅಕ್ಟೋಬರ್ 2ಕ್ಕೆ ತೆರೆಕಾಣಲಿದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ಅನೇಕ ಅಪಾಯಕಾರಿ ಸ್ಟಂಟ್‌ಗಳನ್ನು ಸ್ವತಃ ಮಾಡಿದ್ದಾರೆ ಎಂದು ಚಿತ್ರದ ಸ್ಟಂಟ್ ಕೊರಿಯೋಗ್ರಾಫರ್ ಅರುಣ್ ರಾಜ್ ತಿಳಿಸಿದ್ದಾರೆ. ಕಳರಿಪಯಟ್ಟು, ಖಡ್ಗ ಯುದ್ಧ, ಕುದುರೆ ಸವಾರಿ ಸೇರಿದಂತೆ ಹಲವು ಸವಾಲಿನ ಸನ್ನಿವೇಶಗಳನ್ನು ಅವರು ನಿಭಾಯಿಸಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕಾಗಿ ದೊಡ್ಡ ರಿಸ್ಕ್​ ತೆಗೆದುಕೊಂಡ ರಿಷಬ್ ಶೆಟ್ಟಿ
ರಿಷಬ್

Updated on: Sep 05, 2025 | 11:51 AM

‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್​ಗೆ ಇನ್ನು ಒಂದು ತಿಂಗಳು ಕೂಡ ಬಾಕಿ ಉಳಿದಿಲ್ಲ. ಈ ಸಿನಿಮಾ ಅಕ್ಟೋಬರ್ 2ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಮೊದಲ ಭಾಗ ಹಿಟ್ ಆಗಿದ್ದರಿಂದ ಎರಡನೇ ಪಾರ್ಟ್ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಹೊಂಬಾಳೆ ಫಿಲ್ಮ್ಸ್​ ಈ ಸಿನಿಮಾ ನಿರ್ಮಾಣ ಮಾಡುತ್ತಿದೆ. ಈ ಚಿತ್ರವನ್ನು ರಿಷಬ್ (Rishab Shetty) ಅವರು ನಿರ್ದೇಶಿಸಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು ದೊಡ್ಡ ರಿಸ್ಕ್ ಒಂದನ್ನು ತೆಗೆದುಕೊಂಡಿದ್ದಾರೆ.

‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಬಳಿಕ ರಿಷಬ್ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ಕೈಗೆ ಎತ್ತಿಕೊಂಡರು. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ. ಈ ಕಾರಣದಿಂದ ರಿಷಬ್ ಅವರು ಹೆಚ್ಚು ಎಚ್ಚರಿಕೆಯಿಂದ ಸಿನಿಮಾ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬರುವ ಎಲ್ಲಾ ಸ್ಟಂಟ್​ಗಳನ್ನು ಸ್ವತಃ ರಿಷಬ್ ಅವರೇ ಮಾಡಿದ್ದಾರಂತೆ.

ಈ ಚಿತ್ರದ ಸ್ಟಂಟ್ ಕೊರಿಯೋಗ್ರಾಫ್ ಅರುಣ್ ರಾಜ್ ಈ ವಿಚಾರ ರಿವೀಲ್ ಮಾಡಿದ್ದಾರೆ. ‘ನಾವು ರಿಷಬ್​ಗೆ ಬಾಡಿ ಡಬಲ್ (ಕಷ್ಟದ ಸ್ಟಂಟ್​ಗಳಲ್ಲಿ ಬೇರೆ ವ್ಯಕ್ತಿ ಬಳಕೆ ಮಾಡೋದು) ಮಾಡಿಲ್ಲ. ಅವರು ಹಲವು ಕಷ್ಟದ ಸ್ಟಂಟ್​ಗಳನ್ನು ಮಾಡಿದ್ದಾರೆ. ಕಳರಿಪಯಟ್ಟುನ ಅವರೇ ಕಲಿತಿದ್ದಾರೆ. ಖಡ್ಗದ ಫೈಟ್, ಹಾರ್ಸ್​ ರೈಡ್ ಮಾಡಿದ್ದಾರೆ. ನಾನು ಸಾಕಷ್ಟು ನಟನರ ಜೊತೆ ಕೆಲಸ ಮಾಡಿದ್ದೇನೆ. ನನ್ನ ಕೈಲಾದಷ್ಟು ಮಾಡುತ್ತೇನೆ ಎಂದು ಅವರು ಹೇಳಲ್ಲ. ಸರಿಯಾಗಿ ಮೂಡಿಬರುವವರೆಗೂ ಮಾಡುತ್ತೇನೆ ಎಂಬುದು ಅವರ ಮನಸ್ಥಿತಿ’ ಎಂದಿದ್ದಾರೆ.

ಇದನ್ನೂ ಓದಿ
ಹಳ್ಳಿ ಪವರ್​​’ನಲ್ಲಿ ಮಿಂಚುತ್ತಿರುವ ‘ಭೀಮ’ ಕಲಾವಿದೆ ಆ್ಯಶ್
‘ಕರ್ಣ’ ಧಾರಾವಾಹಿಗೆ ಶಾಕ್ ಕೊಟ್ಟ ಟಿಆರ್​ಪಿ ರೇಟಿಂಗ್; ಕುಸಿಯಿತು ಸ್ಥಾನ
‘ಸು ಫ್ರಮ್ ಸೋ’ ಒಟಿಟಿ ರಿಲೀಸ್ ದಿನಾಂಕ ಫೇಕ್; ಹಾಟ್​ಸ್ಟಾರ್​ನವರು ಹೇಳೋದೇನು
ರಾಜ್ ಮುಟ್ಟಿದ್ದೆಲ್ಲ ಚಿನ್ನ; ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಜೋರು

ಸಾಮಾನ್ಯವಾಗಿ ಕಷ್ಟದ ಸ್ಟಂಟ್​ಗಳನ್ನು ಮಾಡುವಾಗ ಪೆಟ್ಟಾದರೆ ಕಷ್ಟ ಎಂಬ ಭಯದಿಂದ ಡ್ಯೂಪ್ ಬಳಕೆ ಮಾಡಲಾಗುತ್ತದೆ. ಇದು ಬಹುತೇಕ ಸಿನಿಮಾಗಳಲ್ಲಿ ನಡೆದಿದೆ. ಆದರೆ, ರಿಷಬ್ ಆ ರೀತಿ ಅಲ್ಲ. ಅವರು ಈ ಚಿತ್ರಕ್ಕಾಗಿ ದೊಡ್ಡ ಚಾಲೆಂಜ್ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್​ 1’ ಎದುರು ಸಿನಿಮಾ ರಿಲೀಸ್ ಮಾಡೋ ದೊಡ್ಡ ನಿರ್ಧಾರ ತೆಗೆದುಕೊಂಡ ಸ್ಟಾರ್ ಹೀರೋ

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಇದೆ. ಅರವಿಂದ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕೆ ಇದೆ. ಅಕ್ಟೋಬರ್ 2ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us