AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ ‘ಕಾಂತಾರ: ಚಾಪ್ಟರ್ 1’ ಎಷ್ಟೊಂದು ಅದ್ದೂರಿ; 250 ದಿನಗಳ ಶೂಟಿಂಗ್ ಮುಗಿಸಿದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ‘ಕಾಂತಾರ: ಚಾಪ್ಟರ್ 1’ ಚಿತ್ರದ 250 ದಿನಗಳ ಚಿತ್ರೀಕರಣ ಪೂರ್ಣಗೊಂಡಿದೆ. ಹೊಂಬಾಳೆ ಫಿಲ್ಮ್ಸ್ ಈ ಸುದ್ದಿಯನ್ನು ಅಧಿಕೃತಗೊಳಿಸಿದೆ. ಅಕ್ಟೋಬರ್ 2ರಂದು ಚಿತ್ರ ಬಿಡುಗಡೆಯಾಗಲಿದೆ. ಚಿತ್ರದ ಮೇಕಿಂಗ್ ವಿಡಿಯೋ ಬಿಡುಗಡೆಯಾಗಿದ್ದು, ಅದರಲ್ಲಿ ಚಿತ್ರದ ಅದ್ಭುತತೆಯನ್ನು ತೋರಿಸಲಾಗಿದೆ.

ಅಬ್ಬಬ್ಬಾ ‘ಕಾಂತಾರ: ಚಾಪ್ಟರ್ 1’ ಎಷ್ಟೊಂದು ಅದ್ದೂರಿ; 250 ದಿನಗಳ ಶೂಟಿಂಗ್ ಮುಗಿಸಿದ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on:Jul 21, 2025 | 11:23 AM

Share

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ: ಚಾಪ್ಟರ್ 1’ (Kantara: Chapter 1) ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ತನ್ನ ಯೂಟ್ಯೂಬ್ ಚಾನೆಲ್​ನಲ್ಲಿ ವಿಡಿಯೋ ಹರಿಬಿಟ್ಟು ಈ ವಿಚಾರವನ್ನು ಅಧಿಕೃತ ಮಾಡಿದೆ. ಈ ಸಿನಿಮಾದ ಅದ್ದೂರಿತನವನ್ನು ತೋರಿಸಲು ಮೇಕಿಂಗ್ ವಿಡಿಯೋ ಸಾಕ್ಷಿ ಒದಗಿಸಿದೆ. ಈ ಚಿತ್ರಕ್ಕೆ ಬರೋಬ್ಬರಿ 250 ದಿನಗಳ ಕಾಲ ಶೂಟಿಂಗ್ ನಡೆದಿದೆ. ಅಕ್ಟೋಬರ್ 2ರಂದು ಸಿನಿಮಾ ತೆರೆಗೆ ಬರಲಿದೆ.

‘ರಾಜಕುಮಾರ’, ‘ಕೆಜಿಎಫ್’, ‘ಸಲಾರ್’, ‘ಕಾಂತಾರ’ದಂತಹ ಹಿಟ್ ಚಿತ್ರಗಳನ್ನು ನೀಡಿದ ಹೊಂಬಾಳೆ ಫಿಲ್ಮ್ಸ್ ‘ಕಾಂತಾರ: ಚಾಪ್ಟರ್ 1’ ಕೈಗೆತ್ತಿಕೊಂಡಾಗ ಸಾಕಷ್ಟು ಕುತೂಹಲ ಮೂಡಿತ್ತು. ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುವ ಕೆಲಸವನ್ನು ಹೊಂಬಾಳೆ ಫಿಲ್ಮ್ಸ್ ಮಾಡುತ್ತಿದೆ. ಸಿನಿಮಾದ ಮೇಕಿಂಗ್ ವಿಡಿಯೋದಲ್ಲಿ ತಂಡದ ಶ್ರಮ ಎದ್ದು ಕಾಣಿಸಿದೆ.

3 ವರ್ಷಗಳ ಕಾಲ ರಿಷಬ್ ಹಾಗೂ ತಂಡ ‘ಕಾಂತಾರ: ಚಾಪ್ಟರ್ 1’ ಕೆಲಸದಲ್ಲಿ ತೊಡಗಿಕೊಂಡಿತ್ತು. ಅಷ್ಟೇ ಅಲ್ಲ, 250 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಸಾವಿರಾರು ಸಿಬ್ಬಂದಿ ಹಗಲಿರುಳು ದುಡಿದಿದ್ದಾರೆ. ಮೇಕಿಂಗ್ ವಿಡಿಯೋ ಮೂಲಕ ಚಿತ್ರ ಹೇಗಿರಲಿದೆ ಎಂಬುದರ ಝಲಕ್ ಸಿಕ್ಕಿದ್ದು ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ
Image
ಈ ದಿನಂದು ‘ಕಣ್ಣಪ’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ?
Image
ಈ ಸಸ್ಪೆನ್ಸ್ ಥ್ರಿಲ್ಲರ್​ ಚಿತ್ರವನ್ನು ಒಟಿಟಿಯಲ್ಲಿ ಮಿಸ್ ಮಾಡಲೇಬೇಡಿ
Image
‘ಎಕ್ಕ’ ಚಿತ್ರಕ್ಕೆ ಸರಿ ಸಮಾನವಾಗಿ ಗಳಿಕೆ ಮಾಡುತ್ತಿದೆ ‘ಜೂನಿಯರ್’
Image
ಬಾಕ್ಸ್ ಆಫೀಸ್ ಉಡೀಸ್ ಮಾಡಿದ ‘ಎಕ್ಕ’ ಸಿನಿಮಾ; ಭಾನುವಾರ ಬಂಗಾರದ ಬೆಳೆ

‘ಕಾಂತಾರ: ಚಾಪ್ಟರ್ 1’ ಮೇಕಿಂಗ್ ವಿಡಿಯೋ

‘ಕಾಂತಾರ ಚಾಪ್ಟರ್ 1′ ಹೊಂಬಾಳೆ ಫಿಲ್ಮ್ಸ್‌ನ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದು ಎಂದರೂ ತಪ್ಪಾಗಲಾರದು. ಈ ಚಿತ್ರಕ್ಕೆ ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕಾಂತಾರ’ ಚಿತ್ರಕ್ಕೆ ಅವರು ನೀಡಿದ ಮ್ಯೂಸಿಕ್ ಗಮನ ಸೆಳೆದಿತ್ತು. ಈ ಚಿತ್ರದ ಮೂಲಕ ಅವರು ಮತ್ತೆ ಮೋಡಿ ಮಾಡುವ ಭರವಸೆಯಲ್ಲಿ ಇದ್ದಾರೆ. ಅರವಿಂದ್ ಕಶ್ಯಪ್ ಛಾಯಾಗ್ರಾಹಣ, ವಿನೇಶ್ ಬಂಗ್ಲನ್ ಪ್ರೊಡಕ್ಷನ್ ಡಿಸೈನ್ ಚಿತ್ರಕ್ಕೆ ಇದೆ. ಈ ಚಿತ್ರದ ಪಾತ್ರವರ್ಗದ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಇಲ್ಲ.

ಇದನ್ನೂ ಓದಿ: ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ; ಇಲ್ಲಿದೆ ಸೆಲೆಬ್ರೇಷನ್ ವಿಡಿಯೋ

ಈ ಸಿನಿಮಾ ಕನ್ನಡ, ತೆಲುಗು, ಹಿಂದಿ, ಮಲಯಾಳಂ, ತಮಿಳು, ಬೆಂಗಾಲಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ತೆರೆ ಕಾಣಲಿದೆ. ಇದರಿಂದ ಸಿನಿಮಾ ತನ್ನ ಸಾಂಸ್ಕೃತಿಕ ಬೇರುಗಳನ್ನು ಉಳಿಸಿಕೊಂಡೇ ವಿವಿಧ ಭಾಷೆ ಮತ್ತು ಪ್ರದೇಶಗಳ ಪ್ರೇಕ್ಷಕರನ್ನು ತಲುಪಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:19 am, Mon, 21 July 25

ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ