AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀಕ್ವೆಲ್ ಬಳಿಕ ಸೀಕ್ವೆಲ್ ಹೇಳಲು ರಿಷಬ್ ರೆಡಿ; ಕ್ಲೈಮ್ಯಾಕ್ಸ್​ನಲ್ಲಿ ‘ಕಾಂತಾರ: ಚಾಪ್ಟರ್ 2’ ಬಗ್ಗೆ ಘೋಷಣೆ

Kantara Chapter 2: ರಿಷಬ್ ಶೆಟ್ಟಿ ಅವರ 'ಕಾಂತಾರ: ಚಾಪ್ಟರ್ 1' ದೈವದ ಕಥೆ ಹೇಳುವ ಭವ್ಯ ಸಿನಿಮಾ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದ್ದು, ನೂರಾರು ಕೋಟಿ ಕಲೆಕ್ಷನ್ ನಿರೀಕ್ಷೆಯಲ್ಲಿದೆ. ಕ್ಲೈಮ್ಯಾಕ್ಸ್‌ನಲ್ಲಿ 'ಕಾಂತಾರ: ಚಾಪ್ಟರ್ 2' ಘೋಷಣೆಯಾಗಿದೆ. ಇದು 'ಕಾಂತಾರ'ದ ಸೀಕ್ವೆಲ್ ಆಗಿರಲಿದೆ.

ಪ್ರೀಕ್ವೆಲ್ ಬಳಿಕ ಸೀಕ್ವೆಲ್ ಹೇಳಲು ರಿಷಬ್ ರೆಡಿ; ಕ್ಲೈಮ್ಯಾಕ್ಸ್​ನಲ್ಲಿ ‘ಕಾಂತಾರ: ಚಾಪ್ಟರ್ 2’ ಬಗ್ಗೆ ಘೋಷಣೆ
ರಿಷಬ್
ರಾಜೇಶ್ ದುಗ್ಗುಮನೆ
|

Updated on: Oct 02, 2025 | 8:05 AM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಅವರು ಮತ್ತೆ ದೈವದ ಕಥೆಯನ್ನು ಹೇಳಿದ್ದಾರೆ. ಸಿನಿಮಾ ತುಂಬಾನೇ ಅದ್ದೂರಿಯಾಗಿ ಮೂಡಿ ಬಂದಿದೆ. ಪ್ರೇಕ್ಷಕರು ಚಿತ್ರವನ್ನು ಬಹುವಾಗಿ ಇಷ್ಟಪಡುತ್ತಿದ್ದಾರೆ. ಈ ಸಿನಿಮಾ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಹೀಗಿರುವಾಗಲೇ ಈ ಸಿನಿಮಾಗೆ ರಿಷಬ್ ಸೀಕ್ವೆಲ್ ಘೋಷಣೆ ಮಾಡಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಕ್ಲೈಮ್ಯಾಕ್ಸ್​ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

‘ಕಾಂತಾರ’ ರಿಲೀಸ್ ಆದ ಬಳಿಕ ‘ಕಾಂತಾರ: ಚಾಪ್ಟರ್ 1’ ಘೋಷಣೆ ಮಾಡಲಾಯಿತು. ರಿಷಬ್ ಅವರು ಮೂರು ವರ್ಷಗಳ ಶ್ರಮ ಹಾಕಿ, ಈ ಸಿನಿಮಾ ಮಾಡಿದ್ದಾರೆ. ಸಾಮಾನ್ಯವಾಗಿ ಸೀಕ್ವೆಲ್ ಕಥೆ ಹೇಳೋದು ಗೊತ್ತೇ ಇದೆ. ಆದರೆ, ರಿಷಬ್ ಅವರು ಈ ಬಾರಿ ಪ್ರೀಕ್ವೆಲ್ ಆಯ್ಕೆ ಮಾಡಿಕೊಂಡರು. ಹಿಂದಿನ ಕಾಲದ ಕಥೆಯನ್ನು ರಿಷಬ್ ವಿವರಿಸಿದರು. ಈ ಬಾರಿಯೂ ಅವರು ದೈವದ ವಿಚಾರವನ್ನೇ ಇಟ್ಟುಕೊಂಡಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕ್ಲೈಮ್ಯಾಕ್ಸ್​ ಅದ್ಭುತವಾಗಿದೆ. ಚಾವುಂಡಿ (ಒಂದು ದೈವ) ಆಗಮನ ಆಗುತ್ತದೆ. ಆ ಬಳಿಕ ಕೊರಗ್ಗಜ್ಜನನ್ನೂ ತೋರಿಸಲಾಗಿದೆ. ಕೊನೆಯಲ್ಲಿ ಮತ್ತೊಂದು ದಂತ ಕಥೆ ಇದೆ ಎಂದು ಹೇಳಲಾಗುತ್ತದೆ. ಅದುವೇ ‘ಕಾಂತಾರ: ಚಾಪ್ಟರ್ 2’. ಈ ಸಿನಿಮಾ ಬಗ್ಗೆ ಈಗಲೇ ಕುತೂಹಲ ಮೂಡುವಂತೆ ಆಗಿದೆ.

ಇದನ್ನೂ ಓದಿ
Image
ಅಡುಗೆ ಮಾಡುತ್ತಾ ರಿಷಬ್, ಮೇಘನಾ, ಸುದೀಪ್ ಹರಟೆ; ಅಪರೂಪದ ವಿಡಿಯೋ ಇಲ್ಲಿದೆ
Image
ಸ್ತನ ಕ್ಯಾನ್ಸರ್​ನಿಂದ ಕಿರುತೆರೆ ನಟಿ ಕಮಲಶ್ರೀ ನಿಧನ
Image
‘ನಾನೇನು ಸುಮ್ಮನೆ ಬಿಡಲಿಲ್ಲ’; ಮಾಜಿ ಪತಿ ಮಾಡಿದ ಕೆಟ್ಟ ಕೆಲಸ ಹೇಳಿದ ಜಾನ್ವಿ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್1’ ವಿಮರ್ಶೆ: ದಂತಕಥೆಯಲ್ಲಿ ಅದ್ದೂರಿತನ; ಇದು ದೈವದ ಕಥನ

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕಾಗಿ ಸಾಕಷ್ಟು ತ್ಯಾಗಗಳನ್ನು ಮಾಡಿದ್ದಾರೆ. ಹೀಗಾಗಿ, ಅವರು ಈ ಸಿನಿಮಾ ಆದ ಬಳಿಕ ಬ್ರೇಕ್ ಪಡೆಯುವ ಆಲೋಚನೆಯಲ್ಲಿ ಇದ್ದಾರೆ. ಇದರ ಜೊತೆಗೆ ಅವರು ಒಪ್ಪಿಕೊಂಡು ನಟಿಸಬೇಕಿರುವ ಸಿನಿಮಾಗಳ ಕೆಲಸಗಳು ಬಾಕಿ ಇವೆ. ಅದನ್ನು ಪೂರ್ಣಗೊಳಿಸಿದ ಬಳಿಕವೇ ರಿಷಬ್ ಅವರು ಮುಂದಿನ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?