AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀಕ್ವೆಲ್ ಬಳಿಕ ಸೀಕ್ವೆಲ್ ಹೇಳಲು ರಿಷಬ್ ರೆಡಿ; ಕ್ಲೈಮ್ಯಾಕ್ಸ್​ನಲ್ಲಿ ‘ಕಾಂತಾರ: ಚಾಪ್ಟರ್ 2’ ಬಗ್ಗೆ ಘೋಷಣೆ

Kantara Chapter 2: ರಿಷಬ್ ಶೆಟ್ಟಿ ಅವರ 'ಕಾಂತಾರ: ಚಾಪ್ಟರ್ 1' ದೈವದ ಕಥೆ ಹೇಳುವ ಭವ್ಯ ಸಿನಿಮಾ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದ್ದು, ನೂರಾರು ಕೋಟಿ ಕಲೆಕ್ಷನ್ ನಿರೀಕ್ಷೆಯಲ್ಲಿದೆ. ಕ್ಲೈಮ್ಯಾಕ್ಸ್‌ನಲ್ಲಿ 'ಕಾಂತಾರ: ಚಾಪ್ಟರ್ 2' ಘೋಷಣೆಯಾಗಿದೆ. ಇದು 'ಕಾಂತಾರ'ದ ಸೀಕ್ವೆಲ್ ಆಗಿರಲಿದೆ.

ಪ್ರೀಕ್ವೆಲ್ ಬಳಿಕ ಸೀಕ್ವೆಲ್ ಹೇಳಲು ರಿಷಬ್ ರೆಡಿ; ಕ್ಲೈಮ್ಯಾಕ್ಸ್​ನಲ್ಲಿ ‘ಕಾಂತಾರ: ಚಾಪ್ಟರ್ 2’ ಬಗ್ಗೆ ಘೋಷಣೆ
ರಿಷಬ್
ರಾಜೇಶ್ ದುಗ್ಗುಮನೆ
|

Updated on: Oct 02, 2025 | 8:05 AM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಅವರು ಮತ್ತೆ ದೈವದ ಕಥೆಯನ್ನು ಹೇಳಿದ್ದಾರೆ. ಸಿನಿಮಾ ತುಂಬಾನೇ ಅದ್ದೂರಿಯಾಗಿ ಮೂಡಿ ಬಂದಿದೆ. ಪ್ರೇಕ್ಷಕರು ಚಿತ್ರವನ್ನು ಬಹುವಾಗಿ ಇಷ್ಟಪಡುತ್ತಿದ್ದಾರೆ. ಈ ಸಿನಿಮಾ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಹೀಗಿರುವಾಗಲೇ ಈ ಸಿನಿಮಾಗೆ ರಿಷಬ್ ಸೀಕ್ವೆಲ್ ಘೋಷಣೆ ಮಾಡಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಕ್ಲೈಮ್ಯಾಕ್ಸ್​ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

‘ಕಾಂತಾರ’ ರಿಲೀಸ್ ಆದ ಬಳಿಕ ‘ಕಾಂತಾರ: ಚಾಪ್ಟರ್ 1’ ಘೋಷಣೆ ಮಾಡಲಾಯಿತು. ರಿಷಬ್ ಅವರು ಮೂರು ವರ್ಷಗಳ ಶ್ರಮ ಹಾಕಿ, ಈ ಸಿನಿಮಾ ಮಾಡಿದ್ದಾರೆ. ಸಾಮಾನ್ಯವಾಗಿ ಸೀಕ್ವೆಲ್ ಕಥೆ ಹೇಳೋದು ಗೊತ್ತೇ ಇದೆ. ಆದರೆ, ರಿಷಬ್ ಅವರು ಈ ಬಾರಿ ಪ್ರೀಕ್ವೆಲ್ ಆಯ್ಕೆ ಮಾಡಿಕೊಂಡರು. ಹಿಂದಿನ ಕಾಲದ ಕಥೆಯನ್ನು ರಿಷಬ್ ವಿವರಿಸಿದರು. ಈ ಬಾರಿಯೂ ಅವರು ದೈವದ ವಿಚಾರವನ್ನೇ ಇಟ್ಟುಕೊಂಡಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕ್ಲೈಮ್ಯಾಕ್ಸ್​ ಅದ್ಭುತವಾಗಿದೆ. ಚಾವುಂಡಿ (ಒಂದು ದೈವ) ಆಗಮನ ಆಗುತ್ತದೆ. ಆ ಬಳಿಕ ಕೊರಗ್ಗಜ್ಜನನ್ನೂ ತೋರಿಸಲಾಗಿದೆ. ಕೊನೆಯಲ್ಲಿ ಮತ್ತೊಂದು ದಂತ ಕಥೆ ಇದೆ ಎಂದು ಹೇಳಲಾಗುತ್ತದೆ. ಅದುವೇ ‘ಕಾಂತಾರ: ಚಾಪ್ಟರ್ 2’. ಈ ಸಿನಿಮಾ ಬಗ್ಗೆ ಈಗಲೇ ಕುತೂಹಲ ಮೂಡುವಂತೆ ಆಗಿದೆ.

ಇದನ್ನೂ ಓದಿ
Image
ಅಡುಗೆ ಮಾಡುತ್ತಾ ರಿಷಬ್, ಮೇಘನಾ, ಸುದೀಪ್ ಹರಟೆ; ಅಪರೂಪದ ವಿಡಿಯೋ ಇಲ್ಲಿದೆ
Image
ಸ್ತನ ಕ್ಯಾನ್ಸರ್​ನಿಂದ ಕಿರುತೆರೆ ನಟಿ ಕಮಲಶ್ರೀ ನಿಧನ
Image
‘ನಾನೇನು ಸುಮ್ಮನೆ ಬಿಡಲಿಲ್ಲ’; ಮಾಜಿ ಪತಿ ಮಾಡಿದ ಕೆಟ್ಟ ಕೆಲಸ ಹೇಳಿದ ಜಾನ್ವಿ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್1’ ವಿಮರ್ಶೆ: ದಂತಕಥೆಯಲ್ಲಿ ಅದ್ದೂರಿತನ; ಇದು ದೈವದ ಕಥನ

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕಾಗಿ ಸಾಕಷ್ಟು ತ್ಯಾಗಗಳನ್ನು ಮಾಡಿದ್ದಾರೆ. ಹೀಗಾಗಿ, ಅವರು ಈ ಸಿನಿಮಾ ಆದ ಬಳಿಕ ಬ್ರೇಕ್ ಪಡೆಯುವ ಆಲೋಚನೆಯಲ್ಲಿ ಇದ್ದಾರೆ. ಇದರ ಜೊತೆಗೆ ಅವರು ಒಪ್ಪಿಕೊಂಡು ನಟಿಸಬೇಕಿರುವ ಸಿನಿಮಾಗಳ ಕೆಲಸಗಳು ಬಾಕಿ ಇವೆ. ಅದನ್ನು ಪೂರ್ಣಗೊಳಿಸಿದ ಬಳಿಕವೇ ರಿಷಬ್ ಅವರು ಮುಂದಿನ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!