AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀಕ್ವೆಲ್ ಬಳಿಕ ಸೀಕ್ವೆಲ್ ಹೇಳಲು ರಿಷಬ್ ರೆಡಿ; ಕ್ಲೈಮ್ಯಾಕ್ಸ್​ನಲ್ಲಿ ‘ಕಾಂತಾರ: ಚಾಪ್ಟರ್ 2’ ಬಗ್ಗೆ ಘೋಷಣೆ

Kantara Chapter 2: ರಿಷಬ್ ಶೆಟ್ಟಿ ಅವರ 'ಕಾಂತಾರ: ಚಾಪ್ಟರ್ 1' ದೈವದ ಕಥೆ ಹೇಳುವ ಭವ್ಯ ಸಿನಿಮಾ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದ್ದು, ನೂರಾರು ಕೋಟಿ ಕಲೆಕ್ಷನ್ ನಿರೀಕ್ಷೆಯಲ್ಲಿದೆ. ಕ್ಲೈಮ್ಯಾಕ್ಸ್‌ನಲ್ಲಿ 'ಕಾಂತಾರ: ಚಾಪ್ಟರ್ 2' ಘೋಷಣೆಯಾಗಿದೆ. ಇದು 'ಕಾಂತಾರ'ದ ಸೀಕ್ವೆಲ್ ಆಗಿರಲಿದೆ.

ಪ್ರೀಕ್ವೆಲ್ ಬಳಿಕ ಸೀಕ್ವೆಲ್ ಹೇಳಲು ರಿಷಬ್ ರೆಡಿ; ಕ್ಲೈಮ್ಯಾಕ್ಸ್​ನಲ್ಲಿ ‘ಕಾಂತಾರ: ಚಾಪ್ಟರ್ 2’ ಬಗ್ಗೆ ಘೋಷಣೆ
ರಿಷಬ್
ರಾಜೇಶ್ ದುಗ್ಗುಮನೆ
|

Updated on: Oct 02, 2025 | 8:05 AM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಅವರು ಮತ್ತೆ ದೈವದ ಕಥೆಯನ್ನು ಹೇಳಿದ್ದಾರೆ. ಸಿನಿಮಾ ತುಂಬಾನೇ ಅದ್ದೂರಿಯಾಗಿ ಮೂಡಿ ಬಂದಿದೆ. ಪ್ರೇಕ್ಷಕರು ಚಿತ್ರವನ್ನು ಬಹುವಾಗಿ ಇಷ್ಟಪಡುತ್ತಿದ್ದಾರೆ. ಈ ಸಿನಿಮಾ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಹೀಗಿರುವಾಗಲೇ ಈ ಸಿನಿಮಾಗೆ ರಿಷಬ್ ಸೀಕ್ವೆಲ್ ಘೋಷಣೆ ಮಾಡಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಕ್ಲೈಮ್ಯಾಕ್ಸ್​ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

‘ಕಾಂತಾರ’ ರಿಲೀಸ್ ಆದ ಬಳಿಕ ‘ಕಾಂತಾರ: ಚಾಪ್ಟರ್ 1’ ಘೋಷಣೆ ಮಾಡಲಾಯಿತು. ರಿಷಬ್ ಅವರು ಮೂರು ವರ್ಷಗಳ ಶ್ರಮ ಹಾಕಿ, ಈ ಸಿನಿಮಾ ಮಾಡಿದ್ದಾರೆ. ಸಾಮಾನ್ಯವಾಗಿ ಸೀಕ್ವೆಲ್ ಕಥೆ ಹೇಳೋದು ಗೊತ್ತೇ ಇದೆ. ಆದರೆ, ರಿಷಬ್ ಅವರು ಈ ಬಾರಿ ಪ್ರೀಕ್ವೆಲ್ ಆಯ್ಕೆ ಮಾಡಿಕೊಂಡರು. ಹಿಂದಿನ ಕಾಲದ ಕಥೆಯನ್ನು ರಿಷಬ್ ವಿವರಿಸಿದರು. ಈ ಬಾರಿಯೂ ಅವರು ದೈವದ ವಿಚಾರವನ್ನೇ ಇಟ್ಟುಕೊಂಡಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕ್ಲೈಮ್ಯಾಕ್ಸ್​ ಅದ್ಭುತವಾಗಿದೆ. ಚಾವುಂಡಿ (ಒಂದು ದೈವ) ಆಗಮನ ಆಗುತ್ತದೆ. ಆ ಬಳಿಕ ಕೊರಗ್ಗಜ್ಜನನ್ನೂ ತೋರಿಸಲಾಗಿದೆ. ಕೊನೆಯಲ್ಲಿ ಮತ್ತೊಂದು ದಂತ ಕಥೆ ಇದೆ ಎಂದು ಹೇಳಲಾಗುತ್ತದೆ. ಅದುವೇ ‘ಕಾಂತಾರ: ಚಾಪ್ಟರ್ 2’. ಈ ಸಿನಿಮಾ ಬಗ್ಗೆ ಈಗಲೇ ಕುತೂಹಲ ಮೂಡುವಂತೆ ಆಗಿದೆ.

ಇದನ್ನೂ ಓದಿ
Image
ಅಡುಗೆ ಮಾಡುತ್ತಾ ರಿಷಬ್, ಮೇಘನಾ, ಸುದೀಪ್ ಹರಟೆ; ಅಪರೂಪದ ವಿಡಿಯೋ ಇಲ್ಲಿದೆ
Image
ಸ್ತನ ಕ್ಯಾನ್ಸರ್​ನಿಂದ ಕಿರುತೆರೆ ನಟಿ ಕಮಲಶ್ರೀ ನಿಧನ
Image
‘ನಾನೇನು ಸುಮ್ಮನೆ ಬಿಡಲಿಲ್ಲ’; ಮಾಜಿ ಪತಿ ಮಾಡಿದ ಕೆಟ್ಟ ಕೆಲಸ ಹೇಳಿದ ಜಾನ್ವಿ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್1’ ವಿಮರ್ಶೆ: ದಂತಕಥೆಯಲ್ಲಿ ಅದ್ದೂರಿತನ; ಇದು ದೈವದ ಕಥನ

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕಾಗಿ ಸಾಕಷ್ಟು ತ್ಯಾಗಗಳನ್ನು ಮಾಡಿದ್ದಾರೆ. ಹೀಗಾಗಿ, ಅವರು ಈ ಸಿನಿಮಾ ಆದ ಬಳಿಕ ಬ್ರೇಕ್ ಪಡೆಯುವ ಆಲೋಚನೆಯಲ್ಲಿ ಇದ್ದಾರೆ. ಇದರ ಜೊತೆಗೆ ಅವರು ಒಪ್ಪಿಕೊಂಡು ನಟಿಸಬೇಕಿರುವ ಸಿನಿಮಾಗಳ ಕೆಲಸಗಳು ಬಾಕಿ ಇವೆ. ಅದನ್ನು ಪೂರ್ಣಗೊಳಿಸಿದ ಬಳಿಕವೇ ರಿಷಬ್ ಅವರು ಮುಂದಿನ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್