AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಿಯೇಟರ್​ನಲ್ಲಿ 50 ದಿನ ಪೂರೈಸಿದ ‘ಕಾಂತಾರ: ಚಾಪ್ಟರ್ 1’; ಸಿಕ್ಕಿರೋ ಶೋಗಳೆಷ್ಟು?

'ಕಾಂತಾರ: ಚಾಪ್ಟರ್ 1' ಸಿನಿಮಾ 50 ದಿನ ಪೂರೈಸಿದ್ದು, ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರ 900 ಕೋಟಿ ರೂ. ಗಳಿಸಿದೆ. ಒಟಿಟಿಗೆ ಬಂದರೂ ಬೆಂಗಳೂರಿನಲ್ಲಿ ಇಂದಿಗೂ 11 ಶೋಗಳೊಂದಿಗೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಪ್ರೀಕ್ವೆಲ್, ಥಿಯೇಟರ್‌ಗಳಲ್ಲಿ ತನ್ನ ಅಧಿಪತ್ಯವನ್ನು ಮುಂದುವರೆಸಿದೆ.

ಥಿಯೇಟರ್​ನಲ್ಲಿ 50 ದಿನ ಪೂರೈಸಿದ ‘ಕಾಂತಾರ: ಚಾಪ್ಟರ್ 1’; ಸಿಕ್ಕಿರೋ ಶೋಗಳೆಷ್ಟು?
Kantara Chapter 1
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 21, 2025 | 8:08 AM

Share

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿದ, ಹೊಂಬಾಳೆ ನಿರ್ಮಾಣ ಮಾಡಿದ ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ ರಿಲೀಸ್ ಆಗಿ ನವೆಂಬರ್ 20ಕ್ಕೆ 50 ದಿನ ಪೂರೈಸಿದೆ. ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ 30 ದಿನಕ್ಕೆ ಒಟಿಟಿಗೆ ಬಂತು. ಆದರೂ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಹಾಗಾದರೆ ಬೆಂಗಳೂರಿನಲ್ಲಿ ಸಿನಿಮಾಗೆ ಸಿಕ್ಕ ಶೋಗಳು ಎಷ್ಟು? ಆ ಬಗ್ಗೆ ಇಂದು ತಿಳಿದುಕೊಳ್ಳೋಣ.

‘ಕಾಂತಾರ’ ಸಿನಿಮಾ ಅಕ್ಟೋಬರ್ 2ರಂದು ವಿಶ್ವಾದ್ಯಂತ ತೆರೆಗೆ ಬಂತು. ಇದು ‘ಕಾಂತಾರ’ ಚಿತ್ರದ ಪ್ರೀಕ್ವೆಲ್. ಸಾಮಾನ್ಯವಾಗಿ ಸೀಕ್ವೆಲ್​ಗಳು ಬರುತ್ತವೆ. ಆದರೆ, ಪ್ರೀಕ್ವೆಲ್ ಬರೋದು ಕಡಿಮೆ. ಆದಾಗ್ಯೂ ‘ಕಾಂತಾರ’ ಚಿತ್ರದ ಬಳಿಕ ರಿಷಬ್ ಅವರು ಹಾಗೊಂದು ಪ್ರಯತ್ನ ಮಾಡಿದರು. ಅವರು ಇದರಲ್ಲಿ ಯಶಸ್ಸು ಕಂಡಿದ್ದಾರೆ. ಈ ಚಿತ್ರವು ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಅದ್ದೂರಿಯಾಗಿ ನಿರ್ಮಾಣ ಮಾಡಿತು. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿದೆ. ಈ ಚಿತ್ರದ ಕಲೆಕ್ಷನ್ ವಿಶ್ವಾದ್ಯಂತ 900 ಕೋಟಿ ರೂಪಾಯಿ ಆಗಿದೆ. ಈ ಸಿನಿಮಾದಿಂದ ಹೊಂಬಾಳೆ ಸಾಕಷ್ಟು ಲಾಭ ಕಂಡಿದೆ. ಅಂದಹಾಗೆ ಈ ಸಿನಿಮಾನ ಒಂದೇ ತಿಂಗಳಿಗೆ ಒಟಿಟಿಗೆ ತರುವುದಾಗಿ ಹೊಂಬಾಳೆ ಅವರು ಅಮೇಜಾನ್ ಪ್ರೈಮ್ ವಿಡಿಯೋ ಜೊತೆ ಒಪ್ಪಂದ ಮಾಡಿಕೊಂಡಿತ್ತು.

ಈ ಒಪ್ಪಂದದ ಪ್ರಕಾರ ಒಂದು ತಿಂಗಳಿಗೆ ಸಿನಿಮಾ ಒಟಿಟಿಗೆ ಬಂತು. ಆದಾಗ್ಯೂ ಸಿನಿಮಾ ಈಗಲೂ ಥಿಯೇಟರ್​ನಲ್ಲಿ ಪ್ರದರ್ಶನ ಕಾಣುತ್ತಾ ಇದೆ. ಇಂದು ಬೆಂಗಳೂರಿನಲ್ಲಿ 11 ಶೋಗಳನ್ನು ನೀಡಲಾಗಿದೆ. ಈ ಪೈಕಿ ಬಹುತೇಕವು ಮಲ್ಟಿಪ್ಲೆಕ್ಸ್​ಗಳೇ ಆಗಿವೆ. ಮಲ್ಟಿಪ್ಲೆಕ್ಸ್​ಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ದಿನಕ್ಕೆ ಒಂದು ಶೋ ಈ ಚಿತ್ರಕ್ಕೆ ಮೀಸಲಿಡಲಾಗುತ್ತಿದೆ. ಸಿನಿಮಾ 50 ದಿನ ಪೂರೈಸಿದ ಬಗ್ಗೆ ಹೊಂಬಾಳೆ ಪೋಸ್ಟ್ ಹಾಕಿದೆ.

ಇದನ್ನೂ ಓದಿ: ‘ಕಾಂತಾರ’ದಲ್ಲಿ ನಟಿಸಲು ಹಿಂಜರಿದಿದ್ದರು ರುಕ್ಮಿಣಿ ವಸಂತ್, ಒಪ್ಪಿಸಿದ್ದು ಯಾರು?

‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ರಿಷಬ್ ಶೆಟ್ಟಿ ಹೀರೋ. ಈ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದಾರೆ. ರುಕ್ಮಿಣಿ ವಸಂತ್ ಈ ಚಿತ್ರಕ್ಕೆ ನಾಯಕಿ. ಅವರದ್ದು ಎರಡು ಶೇಡ್​ನ ಪಾತ್ರ. ಈ ಪಾತ್ರ ಸಾಕಷ್ಟು ಗಮನ ಸೆಳೆದಿದೆ. ಜಯಂ ರವಿ, ಕನ್ನಡದವರೇ ಆದ ಗುಲ್ಶನ್ ದೇವಯ್ಯ ಮೊದಲಾದವರು ಸಿನಿಮಾದ ಭಾಗ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ