AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಟಿವಿ ಹಕ್ಕು ದೊಡ್ಡ ಮಟ್ಟಕ್ಕೆ ಮಾರಾಟ; ಇದರಲ್ಲಿ 5 ‘ಕಾಂತಾರ’ ನಿರ್ಮಿಸಬಹುದು

‘ಕಾಂತಾರ: ಚಾಪ್ಟರ್ 1’ ಚಿತ್ರದ ಟಿವಿ ಹಕ್ಕುಗಳನ್ನು ಜೀ ಕನ್ನಡ ದೊಡ್ಡ ಮಟ್ಟಕ್ಕೆ ಖರೀದಿಸಿದೆ. ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಈ ಚಿತ್ರದ ಟ್ರೇಲರ್ ಸೆಪ್ಟೆಂಬರ್ 22 ರಂದು ಬಿಡುಗಡೆಯಾಗಲಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ಈ ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರದ ಬೃಹತ್ ಟಿವಿ ಹಕ್ಕು ಮಾರಾಟವು ಸಿನಿಮಾ ಕುರಿತಾದ ನಿರೀಕ್ಷೆಯನ್ನು ಹೆಚ್ಚಿಸಿದೆ.

‘ಕಾಂತಾರ: ಚಾಪ್ಟರ್ 1’ ಟಿವಿ ಹಕ್ಕು ದೊಡ್ಡ ಮಟ್ಟಕ್ಕೆ ಮಾರಾಟ; ಇದರಲ್ಲಿ 5 ‘ಕಾಂತಾರ’ ನಿರ್ಮಿಸಬಹುದು
ರಿಷಬ್
ರಾಜೇಶ್ ದುಗ್ಗುಮನೆ
|

Updated on: Sep 19, 2025 | 2:57 PM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ (Kantara: Chapter 1) ರಿಲೀಸ್​ಗೆ ಕೆಲವು ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾದ ಟ್ರೇಲರ್ ಸೆಪ್ಟೆಂಬರ್ 22ರಂದು ಮಧ್ಯಾಹ್ನ 12:45ಕ್ಕೆ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ. ಹೀಗಿರುವಾಗಲೇ ಈ ಚಿತ್ರ ಮಾಡ್ತಿರೋ ಬಿಸ್ನೆಸ್​ಗಳ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ‘ಕಾಂತಾರ: ಚಾಪ್ಟರ್ 1’ ಚಿತ್ರದ ಟಿವಿ ಹಕ್ಕು ಮಾರಾಟದ ಮೊತ್ತ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಹಲವು ಕಾರಣಗಳು ಇವೆ. ಇದು ಸೂಪರ್ ಹಿಟ್ ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್. ರಿಷಬ್ ಅವರೇ ಈ ಚಿತ್ರವನ್ನು ನಿರ್ದೇಶಿಸಿ, ನಟಿಸುತ್ತಿದ್ದಾರೆ. ಈ ಸಿನಿಮಾ ಯಾವ ರೀತಿಯಲ್ಲಿ ಮೂಡಿ ಬರಬಹುದು ಎಂಬ ಕುತೂಹಲ ಮೂಡಿದೆ. ಇದಕ್ಕೆ ಟ್ರೇಲರ್​ನಲ್ಲಿ ಉತ್ತರ ಸಿಗೋ ಸಾಧ್ಯತೆ ಇದೆ. ಹೀಗಿರುವಾಗಲೇ ಸಿನಿಮಾದ ಸ್ಯಾಟಲೈಟ್ ರೈಟ್ಸ್ ದೊಡ್ಡ ಮೊತ್ತಕ್ಕೆ ಮಾರಾಟ ಆದ ಸುದ್ದಿ ಹೊರ ಬಿದ್ದಿದೆ.

ಮೂಲಗಳ ಪ್ರಕಾರ ‘ಕಾಂತಾರ: ಚಾಪ್ಟರ್ 1’ ಚಿತ್ರದ ಟಿವಿ ಹಕ್ಕನ್ನು ಜೀ ಕನ್ನಡ ವಾಹಿನಿ ಪಡೆದುಕೊಂಡಿದೆ. ಇದಕ್ಕಾಗಿ ಅವರು ಪಾವತಿ ಮಾಡಿದ್ದು 80 ಕೋಟಿ ರೂಪಾಯಿ. ಈ ಚಿತ್ರ ಕೇವಲ ಕನ್ನಡ ಮಾತ್ರವಲ್ಲದೆ, ಹಿಂದಿ ಮೊದಲಾದ ಭಾಷೆಗಳಲ್ಲೂ ರಿಲೀಸ್ ಆಗುತ್ತಿದೆ. ಹೀಗಾಗಿ, ಹಿಂದಿ ಮೊದಲಾದ ಭಾಷೆಗಳ ಹಕ್ಕುಗಳು ಇದರಲ್ಲಿ ಸೇರಿವೆಯೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.

ಇದನ್ನೂ ಓದಿ
Image
ಬಯಸಿ ಬಂದ ಪ್ರೀತಿಯನ್ನು ಕಾಲಿನಿಂದ ಒದ್ದ ಭೂಮಿಕಾ; ಗೌತಮ್ ಮತ್ತೆ ಏಕಾಂಗಿ
Image
ಸೌಂದರ್ಯಾ ಜೊತೆ ವಿಮಾನದಲ್ಲಿ ಕನ್ನಡದ ಈ ನಟಿಯೂ ಇರಬೇಕಿತ್ತು
Image
‘ಏನಾಗಿದೆ ಅದನ್ನು ಬದಲಿಸಲು ಸಾಧ್ಯವಿಲ್ಲ’; ದೀಪಿಕಾ ಬಗ್ಗೆ ನಾಗ್ ಬೇಸರ
Image
ವಿಷ್ಣುವರ್ಧನ್-ರಜನಿಕಾಂತ್  ಒಟ್ಟಾಗಿ ನಟಿಸಿದ್ದ ಸಿನಿಮಾದ ದೃಶ್ಯ ನೆನಪಿದೆಯೇ?

‘ಕಾಂತಾರ’ ಸಿನಿಮಾದ ಬಜೆಟ್ 15 ಕೋಟಿ ರೂಪಾಯಿ ಆಗಿತ್ತು. ಈಗ ‘ಕಾಂತಾರ: ಚಾಪ್ಟರ್ 1’ ಚಿತ್ರದ ಟಿವಿ ಹಕ್ಕಿನಿಂದ ಬಂದ ಹಣದಲ್ಲಿ ಐದು ಕಾಂತಾರ ನಿರ್ಮಿಸಬಹುದು ಎನ್ನುವ ಅಭಿಪ್ರಾಯವನ್ನು ಅನೇಕರು ಹೊರಹಾಕಿದ್ದಾರೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ

‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ರಿಷಬ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರುಕ್ಮಿಣಿ ವಸಂತ್ ಚಿತ್ರಕ್ಕೆ ನಾಯಕಿ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದೆ. ಟ್ರೇಲರ್ ರಿಲೀಸ್ ಆದ ಬಳಿಕ ಚಿತ್ರದ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿಗೆ 1 ಗ್ರಾಂ ಚಿನ್ನದ ಉಂಗುರ!
ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿಗೆ 1 ಗ್ರಾಂ ಚಿನ್ನದ ಉಂಗುರ!
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ